AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಡಿವಾಳ ಪೆಟ್ರೋಲ್ ಬಂಕ್​ನಲ್ಲಿ ಹೊತ್ತಿ ಉರಿದ ಬಸ್, 34 ಪ್ರಯಾಣಿಕರು ಬಚಾವ್!

ಬೆಂಗಳೂರು: ಡೀಸೆಲ್ ಹಾಕಿಸಿಕೊಳ್ಳಲು ಪೆಟ್ರೋಲ್ ಬಂಕ್‌ಗೆ ಹೋಗಿದ್ದ ವೇಳೆ ಶಾರ್ಟ್‌ಸರ್ಕ್ಯೂಟ್ ಆಗಿ ಪೆಟ್ರೋಲ್ ಬಂಕ್‌ನಲ್ಲಿಯೇ ಖಾಸಗಿ ಬಸ್ ಹೊತ್ತಿ ಉರಿದಿರುವ ಘಟನೆ ತಡರಾತ್ರಿ ಮಡಿವಾಳದಲ್ಲಿ ನಡೆದಿದೆ. ಬೆಂಕಿಯ ಕೆನ್ನಾಲಿಗೆಗೆ ಖಾಸಗಿ ಬಸ್ ಸುಟ್ಟು ಕರಕಲಾಗಿದೆ. ಬೆಂಗಳೂರಿನಿಂದ ಕೊಯಮತ್ತೂರಿಗೆ ತೆರಳುತ್ತಿದ್ದ ಖಾಸಗಿ ಬಸ್, ಡೀಸೆಲ್ ಹಾಕಿಸಿಕೊಳ್ಳಲು ಭಾರತ್​ ಪೆಟ್ರೋಲ್ ಬಂಕ್‌ಗೆ ಹೋಗಿತ್ತು. ಡೀಸೆಲ್ ಹಾಕಿಸಿ ಬಸ್ ಸ್ಟಾರ್ಟ್ ಮಾಡುವ ವೇಳೆ ಬಸ್‌ನಲ್ಲಿ ಶಾರ್ಟ್‌ಸರ್ಕ್ಯೂಟ್ ಆಗಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಕಾಣಿಸಿಕೊಂಡ ಬಳಿಕ ಬಸ್ ಸ್ಟಾರ್ಟ್ ಆಗಲಿಲ್ಲ. ತಕ್ಷಣವೇ ಚಾಲಕ […]

ಮಡಿವಾಳ ಪೆಟ್ರೋಲ್ ಬಂಕ್​ನಲ್ಲಿ ಹೊತ್ತಿ ಉರಿದ ಬಸ್, 34 ಪ್ರಯಾಣಿಕರು ಬಚಾವ್!
Follow us
ಸಾಧು ಶ್ರೀನಾಥ್​
|

Updated on:Jan 30, 2020 | 11:51 AM

ಬೆಂಗಳೂರು: ಡೀಸೆಲ್ ಹಾಕಿಸಿಕೊಳ್ಳಲು ಪೆಟ್ರೋಲ್ ಬಂಕ್‌ಗೆ ಹೋಗಿದ್ದ ವೇಳೆ ಶಾರ್ಟ್‌ಸರ್ಕ್ಯೂಟ್ ಆಗಿ ಪೆಟ್ರೋಲ್ ಬಂಕ್‌ನಲ್ಲಿಯೇ ಖಾಸಗಿ ಬಸ್ ಹೊತ್ತಿ ಉರಿದಿರುವ ಘಟನೆ ತಡರಾತ್ರಿ ಮಡಿವಾಳದಲ್ಲಿ ನಡೆದಿದೆ. ಬೆಂಕಿಯ ಕೆನ್ನಾಲಿಗೆಗೆ ಖಾಸಗಿ ಬಸ್ ಸುಟ್ಟು ಕರಕಲಾಗಿದೆ.

ಬೆಂಗಳೂರಿನಿಂದ ಕೊಯಮತ್ತೂರಿಗೆ ತೆರಳುತ್ತಿದ್ದ ಖಾಸಗಿ ಬಸ್, ಡೀಸೆಲ್ ಹಾಕಿಸಿಕೊಳ್ಳಲು ಭಾರತ್​ ಪೆಟ್ರೋಲ್ ಬಂಕ್‌ಗೆ ಹೋಗಿತ್ತು. ಡೀಸೆಲ್ ಹಾಕಿಸಿ ಬಸ್ ಸ್ಟಾರ್ಟ್ ಮಾಡುವ ವೇಳೆ ಬಸ್‌ನಲ್ಲಿ ಶಾರ್ಟ್‌ಸರ್ಕ್ಯೂಟ್ ಆಗಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಕಾಣಿಸಿಕೊಂಡ ಬಳಿಕ ಬಸ್ ಸ್ಟಾರ್ಟ್ ಆಗಲಿಲ್ಲ. ತಕ್ಷಣವೇ ಚಾಲಕ ಖಾಸಗಿ ಬಸ್‌ನಲ್ಲಿದ್ದವರನ್ನು ಕೆಳಗಿಳಿಸಿದ್ದಾನೆ.

ಬಸ್​ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಮುಂಜಾಗ್ರತಾ ಕ್ರಮ ವಹಿಸಿದ ಪೆಟ್ರೋಲ್ ಬಂಕ್ ಸಿಬ್ಬಂದಿ, ಬೆಂಕಿ ಹರಡದಂತೆ ಎಚ್ಚರ ವಹಿಸಿದ್ದಾರೆ. ಬಸ್​ನಲ್ಲಿ ಒಟ್ಟು 34 ಜನ ಪ್ರಯಾಣಿಕರಿದ್ದರು. ಅವಘಡದಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಆಗಮಿಸಿದ ನಾಲ್ಕು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸಿವೆ. ಘಟನೆ ಸಂಬಂಧ ಮಡಿವಾಳ ಪೊಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದೆ.

Published On - 7:30 am, Thu, 30 January 20

ರಾಜ್ಯ ಸರ್ಕಾರಕ್ಕೆ ಸೋರಿಕೆ ಇಲ್ಲದೆ ಒಂದು ಪರೀಕ್ಷೆಯನ್ನೂ ನಡೆಸಲಾಗಲ್ಲ: ರವಿ
ರಾಜ್ಯ ಸರ್ಕಾರಕ್ಕೆ ಸೋರಿಕೆ ಇಲ್ಲದೆ ಒಂದು ಪರೀಕ್ಷೆಯನ್ನೂ ನಡೆಸಲಾಗಲ್ಲ: ರವಿ
ಬ್ಲ್ಯಾಂಕ್ ಲೆಟರ್ ಹೆಡ್ ಯತ್ನಾಳ್​ಗೆ ಕೊಡುತ್ತೇನೆ, ಅವರೇ ಬರೆಯಲಿ: ಶಿವಾನಂದ
ಬ್ಲ್ಯಾಂಕ್ ಲೆಟರ್ ಹೆಡ್ ಯತ್ನಾಳ್​ಗೆ ಕೊಡುತ್ತೇನೆ, ಅವರೇ ಬರೆಯಲಿ: ಶಿವಾನಂದ
ಭಾರತದ ಯುದ್ಧ ತಯಾರಿ ಕಂಡು ಪತರುಗುಟ್ಟಿದೆ ಪಾಕಿಸ್ತಾನ
ಭಾರತದ ಯುದ್ಧ ತಯಾರಿ ಕಂಡು ಪತರುಗುಟ್ಟಿದೆ ಪಾಕಿಸ್ತಾನ
BBMP ಕಾರ್ಯವನ್ನು ಶ್ಲಾಘಿಷಿಸಿದ ಟಿಮ್ ಡೇವಿಡ್
BBMP ಕಾರ್ಯವನ್ನು ಶ್ಲಾಘಿಷಿಸಿದ ಟಿಮ್ ಡೇವಿಡ್
ಹೇಗಿರಲಿದೆ ಯುದ್ಧದ ಅಣಕು ಕಾರ್ಯಾಚರಣೆ? ಸಾರ್ವಜನಿಕರ ಜವಾಬ್ದಾರಿ ಏನು?
ಹೇಗಿರಲಿದೆ ಯುದ್ಧದ ಅಣಕು ಕಾರ್ಯಾಚರಣೆ? ಸಾರ್ವಜನಿಕರ ಜವಾಬ್ದಾರಿ ಏನು?
ಡ್ರೋನ್ ಪ್ರತಾಪ್ ಸಹಾಯ ಮನೋಭಾವ ಎಂಥದ್ದು ನೋಡಿ; ಒಂದು ಚಪ್ಪಾಳೆ ಬರಲೇಬೇಕು
ಡ್ರೋನ್ ಪ್ರತಾಪ್ ಸಹಾಯ ಮನೋಭಾವ ಎಂಥದ್ದು ನೋಡಿ; ಒಂದು ಚಪ್ಪಾಳೆ ಬರಲೇಬೇಕು
ದಾಖಲಾತಿ ಅರ್ಜಿಗಾಗಿ ರಾತ್ರಿ ಶಾಲಾ ಆವರಣದಲ್ಲಿ ಮಲಗುತ್ತಿದ್ದರಂತೆ ಪೋಷಕರು
ದಾಖಲಾತಿ ಅರ್ಜಿಗಾಗಿ ರಾತ್ರಿ ಶಾಲಾ ಆವರಣದಲ್ಲಿ ಮಲಗುತ್ತಿದ್ದರಂತೆ ಪೋಷಕರು
ವಿರಾಟ್ ಕೊಹ್ಲಿ ಕಟೌಟ್ ಎದುರು ಮೇಕೆ ಬಲಿ: ಆರ್​ಸಿಬಿ ಫ್ಯಾನ್ಸ್ ಹುಚ್ಚಾಟ
ವಿರಾಟ್ ಕೊಹ್ಲಿ ಕಟೌಟ್ ಎದುರು ಮೇಕೆ ಬಲಿ: ಆರ್​ಸಿಬಿ ಫ್ಯಾನ್ಸ್ ಹುಚ್ಚಾಟ
ದಂಪತಿಗೆ ಮದುವೆಯಾಗಿ ಕೇವಲ ಎರಡು ವರ್ಷವಾಗಿತ್ತು
ದಂಪತಿಗೆ ಮದುವೆಯಾಗಿ ಕೇವಲ ಎರಡು ವರ್ಷವಾಗಿತ್ತು
ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ
ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ