AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಡಿವಾಳ ಪೆಟ್ರೋಲ್ ಬಂಕ್​ನಲ್ಲಿ ಹೊತ್ತಿ ಉರಿದ ಬಸ್, 34 ಪ್ರಯಾಣಿಕರು ಬಚಾವ್!

ಬೆಂಗಳೂರು: ಡೀಸೆಲ್ ಹಾಕಿಸಿಕೊಳ್ಳಲು ಪೆಟ್ರೋಲ್ ಬಂಕ್‌ಗೆ ಹೋಗಿದ್ದ ವೇಳೆ ಶಾರ್ಟ್‌ಸರ್ಕ್ಯೂಟ್ ಆಗಿ ಪೆಟ್ರೋಲ್ ಬಂಕ್‌ನಲ್ಲಿಯೇ ಖಾಸಗಿ ಬಸ್ ಹೊತ್ತಿ ಉರಿದಿರುವ ಘಟನೆ ತಡರಾತ್ರಿ ಮಡಿವಾಳದಲ್ಲಿ ನಡೆದಿದೆ. ಬೆಂಕಿಯ ಕೆನ್ನಾಲಿಗೆಗೆ ಖಾಸಗಿ ಬಸ್ ಸುಟ್ಟು ಕರಕಲಾಗಿದೆ. ಬೆಂಗಳೂರಿನಿಂದ ಕೊಯಮತ್ತೂರಿಗೆ ತೆರಳುತ್ತಿದ್ದ ಖಾಸಗಿ ಬಸ್, ಡೀಸೆಲ್ ಹಾಕಿಸಿಕೊಳ್ಳಲು ಭಾರತ್​ ಪೆಟ್ರೋಲ್ ಬಂಕ್‌ಗೆ ಹೋಗಿತ್ತು. ಡೀಸೆಲ್ ಹಾಕಿಸಿ ಬಸ್ ಸ್ಟಾರ್ಟ್ ಮಾಡುವ ವೇಳೆ ಬಸ್‌ನಲ್ಲಿ ಶಾರ್ಟ್‌ಸರ್ಕ್ಯೂಟ್ ಆಗಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಕಾಣಿಸಿಕೊಂಡ ಬಳಿಕ ಬಸ್ ಸ್ಟಾರ್ಟ್ ಆಗಲಿಲ್ಲ. ತಕ್ಷಣವೇ ಚಾಲಕ […]

ಮಡಿವಾಳ ಪೆಟ್ರೋಲ್ ಬಂಕ್​ನಲ್ಲಿ ಹೊತ್ತಿ ಉರಿದ ಬಸ್, 34 ಪ್ರಯಾಣಿಕರು ಬಚಾವ್!
ಸಾಧು ಶ್ರೀನಾಥ್​
|

Updated on:Jan 30, 2020 | 11:51 AM

Share

ಬೆಂಗಳೂರು: ಡೀಸೆಲ್ ಹಾಕಿಸಿಕೊಳ್ಳಲು ಪೆಟ್ರೋಲ್ ಬಂಕ್‌ಗೆ ಹೋಗಿದ್ದ ವೇಳೆ ಶಾರ್ಟ್‌ಸರ್ಕ್ಯೂಟ್ ಆಗಿ ಪೆಟ್ರೋಲ್ ಬಂಕ್‌ನಲ್ಲಿಯೇ ಖಾಸಗಿ ಬಸ್ ಹೊತ್ತಿ ಉರಿದಿರುವ ಘಟನೆ ತಡರಾತ್ರಿ ಮಡಿವಾಳದಲ್ಲಿ ನಡೆದಿದೆ. ಬೆಂಕಿಯ ಕೆನ್ನಾಲಿಗೆಗೆ ಖಾಸಗಿ ಬಸ್ ಸುಟ್ಟು ಕರಕಲಾಗಿದೆ.

ಬೆಂಗಳೂರಿನಿಂದ ಕೊಯಮತ್ತೂರಿಗೆ ತೆರಳುತ್ತಿದ್ದ ಖಾಸಗಿ ಬಸ್, ಡೀಸೆಲ್ ಹಾಕಿಸಿಕೊಳ್ಳಲು ಭಾರತ್​ ಪೆಟ್ರೋಲ್ ಬಂಕ್‌ಗೆ ಹೋಗಿತ್ತು. ಡೀಸೆಲ್ ಹಾಕಿಸಿ ಬಸ್ ಸ್ಟಾರ್ಟ್ ಮಾಡುವ ವೇಳೆ ಬಸ್‌ನಲ್ಲಿ ಶಾರ್ಟ್‌ಸರ್ಕ್ಯೂಟ್ ಆಗಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಕಾಣಿಸಿಕೊಂಡ ಬಳಿಕ ಬಸ್ ಸ್ಟಾರ್ಟ್ ಆಗಲಿಲ್ಲ. ತಕ್ಷಣವೇ ಚಾಲಕ ಖಾಸಗಿ ಬಸ್‌ನಲ್ಲಿದ್ದವರನ್ನು ಕೆಳಗಿಳಿಸಿದ್ದಾನೆ.

ಬಸ್​ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಮುಂಜಾಗ್ರತಾ ಕ್ರಮ ವಹಿಸಿದ ಪೆಟ್ರೋಲ್ ಬಂಕ್ ಸಿಬ್ಬಂದಿ, ಬೆಂಕಿ ಹರಡದಂತೆ ಎಚ್ಚರ ವಹಿಸಿದ್ದಾರೆ. ಬಸ್​ನಲ್ಲಿ ಒಟ್ಟು 34 ಜನ ಪ್ರಯಾಣಿಕರಿದ್ದರು. ಅವಘಡದಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಆಗಮಿಸಿದ ನಾಲ್ಕು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸಿವೆ. ಘಟನೆ ಸಂಬಂಧ ಮಡಿವಾಳ ಪೊಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದೆ.

Published On - 7:30 am, Thu, 30 January 20

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?