ಮಡಿವಾಳ ಪೆಟ್ರೋಲ್ ಬಂಕ್​ನಲ್ಲಿ ಹೊತ್ತಿ ಉರಿದ ಬಸ್, 34 ಪ್ರಯಾಣಿಕರು ಬಚಾವ್!

ಬೆಂಗಳೂರು: ಡೀಸೆಲ್ ಹಾಕಿಸಿಕೊಳ್ಳಲು ಪೆಟ್ರೋಲ್ ಬಂಕ್‌ಗೆ ಹೋಗಿದ್ದ ವೇಳೆ ಶಾರ್ಟ್‌ಸರ್ಕ್ಯೂಟ್ ಆಗಿ ಪೆಟ್ರೋಲ್ ಬಂಕ್‌ನಲ್ಲಿಯೇ ಖಾಸಗಿ ಬಸ್ ಹೊತ್ತಿ ಉರಿದಿರುವ ಘಟನೆ ತಡರಾತ್ರಿ ಮಡಿವಾಳದಲ್ಲಿ ನಡೆದಿದೆ. ಬೆಂಕಿಯ ಕೆನ್ನಾಲಿಗೆಗೆ ಖಾಸಗಿ ಬಸ್ ಸುಟ್ಟು ಕರಕಲಾಗಿದೆ. ಬೆಂಗಳೂರಿನಿಂದ ಕೊಯಮತ್ತೂರಿಗೆ ತೆರಳುತ್ತಿದ್ದ ಖಾಸಗಿ ಬಸ್, ಡೀಸೆಲ್ ಹಾಕಿಸಿಕೊಳ್ಳಲು ಭಾರತ್​ ಪೆಟ್ರೋಲ್ ಬಂಕ್‌ಗೆ ಹೋಗಿತ್ತು. ಡೀಸೆಲ್ ಹಾಕಿಸಿ ಬಸ್ ಸ್ಟಾರ್ಟ್ ಮಾಡುವ ವೇಳೆ ಬಸ್‌ನಲ್ಲಿ ಶಾರ್ಟ್‌ಸರ್ಕ್ಯೂಟ್ ಆಗಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಕಾಣಿಸಿಕೊಂಡ ಬಳಿಕ ಬಸ್ ಸ್ಟಾರ್ಟ್ ಆಗಲಿಲ್ಲ. ತಕ್ಷಣವೇ ಚಾಲಕ […]

ಮಡಿವಾಳ ಪೆಟ್ರೋಲ್ ಬಂಕ್​ನಲ್ಲಿ ಹೊತ್ತಿ ಉರಿದ ಬಸ್, 34 ಪ್ರಯಾಣಿಕರು ಬಚಾವ್!
ಸಾಧು ಶ್ರೀನಾಥ್​

Updated on: Jan 30, 2020 | 11:51 AM

ಬೆಂಗಳೂರು: ಡೀಸೆಲ್ ಹಾಕಿಸಿಕೊಳ್ಳಲು ಪೆಟ್ರೋಲ್ ಬಂಕ್‌ಗೆ ಹೋಗಿದ್ದ ವೇಳೆ ಶಾರ್ಟ್‌ಸರ್ಕ್ಯೂಟ್ ಆಗಿ ಪೆಟ್ರೋಲ್ ಬಂಕ್‌ನಲ್ಲಿಯೇ ಖಾಸಗಿ ಬಸ್ ಹೊತ್ತಿ ಉರಿದಿರುವ ಘಟನೆ ತಡರಾತ್ರಿ ಮಡಿವಾಳದಲ್ಲಿ ನಡೆದಿದೆ. ಬೆಂಕಿಯ ಕೆನ್ನಾಲಿಗೆಗೆ ಖಾಸಗಿ ಬಸ್ ಸುಟ್ಟು ಕರಕಲಾಗಿದೆ.

ಬೆಂಗಳೂರಿನಿಂದ ಕೊಯಮತ್ತೂರಿಗೆ ತೆರಳುತ್ತಿದ್ದ ಖಾಸಗಿ ಬಸ್, ಡೀಸೆಲ್ ಹಾಕಿಸಿಕೊಳ್ಳಲು ಭಾರತ್​ ಪೆಟ್ರೋಲ್ ಬಂಕ್‌ಗೆ ಹೋಗಿತ್ತು. ಡೀಸೆಲ್ ಹಾಕಿಸಿ ಬಸ್ ಸ್ಟಾರ್ಟ್ ಮಾಡುವ ವೇಳೆ ಬಸ್‌ನಲ್ಲಿ ಶಾರ್ಟ್‌ಸರ್ಕ್ಯೂಟ್ ಆಗಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಕಾಣಿಸಿಕೊಂಡ ಬಳಿಕ ಬಸ್ ಸ್ಟಾರ್ಟ್ ಆಗಲಿಲ್ಲ. ತಕ್ಷಣವೇ ಚಾಲಕ ಖಾಸಗಿ ಬಸ್‌ನಲ್ಲಿದ್ದವರನ್ನು ಕೆಳಗಿಳಿಸಿದ್ದಾನೆ.

ಬಸ್​ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಮುಂಜಾಗ್ರತಾ ಕ್ರಮ ವಹಿಸಿದ ಪೆಟ್ರೋಲ್ ಬಂಕ್ ಸಿಬ್ಬಂದಿ, ಬೆಂಕಿ ಹರಡದಂತೆ ಎಚ್ಚರ ವಹಿಸಿದ್ದಾರೆ. ಬಸ್​ನಲ್ಲಿ ಒಟ್ಟು 34 ಜನ ಪ್ರಯಾಣಿಕರಿದ್ದರು. ಅವಘಡದಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಆಗಮಿಸಿದ ನಾಲ್ಕು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸಿವೆ. ಘಟನೆ ಸಂಬಂಧ ಮಡಿವಾಳ ಪೊಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದೆ.

Published On - 7:30 am, Thu, 30 January 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us