AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೌ ಟು ಡೈ ಈಸಿಲಿ’ ಎಂದು ಸರ್ಚ್ ಮಾಡಿ ಆತ್ಮಹತ್ಯೆಗೆ ಶರಣಾದ ಖಾಸಗಿ ಕಂಪನಿ ಟೀಂ ಲೀಡರ್

ಮಾರ್ಚ್ 13ಎಂದು ಖಾಸಗಿ ಕಂಪನಿಯ ಉದ್ಯೋಗಿ ಜೀವನ್ ಅಂಬಾಟೆ ಭಯಾನಕವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 'ಹೌ ಟು ಡೈ ಈಸಿಲಿ', ಎಂದು ಸುಲಭವಾಗಿ ಸಾಯುವ ಬಗ್ಗೆ ಯುಟ್ಯೂಬ್‌ನಲ್ಲಿ‌ ಹುಡುಕಾಡಿದ್ದ ಜೀವನ್​ಗೆ ಗ್ಯಾಸ್ ಸಿಲಿಂಡರ್​ನಲ್ಲಿ ಬರುವ ಮೊನಾಕ್ಸೈಡ್ ಮೂಲಕ ಸುಲಭವಾಗಿ ಸಾಯಬಹುದು ಎಂದು ಗೊತ್ತಾಗಿದೆ.

'ಹೌ ಟು ಡೈ ಈಸಿಲಿ' ಎಂದು ಸರ್ಚ್ ಮಾಡಿ ಆತ್ಮಹತ್ಯೆಗೆ ಶರಣಾದ ಖಾಸಗಿ ಕಂಪನಿ ಟೀಂ ಲೀಡರ್
ಜೀವನ್ ಅಂಬಾಟೆ
ಆಯೇಷಾ ಬಾನು
ಆಯೇಷಾ ಬಾನು|

Updated on: Mar 22, 2021 | 7:37 AM

Share

ಬೆಂಗಳೂರು: ಸಿಲಿಕಾನ್ ಸಿಟಿಯ ಖಾಸಗಿ ಕಂಪನಿ ‘ಟೀಂ ಲೀಡರ್ ’ ಭಯಾನಕವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದು ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರಿನ ಮಹದೇವಪುರದಲ್ಲಿ ಮಾರ್ಚ್ 13ರಂದು ಈ ಘಟನೆ ನಡೆದಿದೆ. ಬೀದರ್ ಮೂಲದ ಜೀವನ್ ಅಂಬಾಟೆ ಆತ್ಮಹತ್ಯೆಗೆ ಶರಣಾದ ವ್ಯಕ್ತಿ.

ಇಂಟರ್​ನೆಟ್​ನಲ್ಲಿ ಸರ್ಚ್ ಮಾಡಿ ಸೂಸೈಡ್ ಮಾಡಿಕೊಂಡ ಮಾರ್ಚ್ 13ಎಂದು ಖಾಸಗಿ ಕಂಪನಿಯ ಉದ್ಯೋಗಿ ಜೀವನ್ ಅಂಬಾಟೆ ಭಯಾನಕವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ‘ಹೌ ಟು ಡೈ ಈಸಿಲಿ’, ಎಂದು ಸುಲಭವಾಗಿ ಸಾಯುವ ಬಗ್ಗೆ ಯುಟ್ಯೂಬ್‌ನಲ್ಲಿ‌ ಹುಡುಕಾಡಿದ್ದ ಜೀವನ್​ಗೆ ಗ್ಯಾಸ್ ಸಿಲಿಂಡರ್​ನಲ್ಲಿ ಬರುವ ಮೊನಾಕ್ಸೈಡ್ ಮೂಲಕ ಸುಲಭವಾಗಿ ಸಾಯಬಹುದು ಎಂದು ಗೊತ್ತಾಗಿದೆ. ಹೀಗಾಗಿ ಮುಖಕ್ಕೆ ಮಾಸ್ಕ್ ಧರಿಸಿ ಸಿಲಿಂಡರ್ ಪೈಪ್​ನ ಮೂಗಿಗೆ ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ದೇಹದ ಒಳಗೆ ಮೊನಾಕ್ಸೈಡ್ ಹೋಗಿ ಕೂತಲ್ಲೇ ಜೀವನ್ ಪ್ರಾಣ ಕಳೆದುಕೊಂಡಿದ್ದಾನೆ.

ಮನೆ ಬಾಗಿಲಿಗೆ ಡೈಯಾಗ್ರಾಮ್ ಅಂಟಿಸಿದ್ದ ಯುವಕ ಇನ್ನು ಆತ್ಮಹತ್ಯೆಗೂ ಮೊದಲು ಜೀವನ್ ತನ್ನ ಮನೆ ಬಾಗಿಲಿಗೆ ಪೋಸ್ಟ್ ಅಂಟಿಸಿದ್ದ. ಗ್ಯಾಸ್ ಸಿಲಿಂಡರ್ ಮೂಲಕ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದ ಜೀವನ್, ತನ್ನ ಸಾವಿನ ನಂತರ ಮನೆಗೆ ಬರುವ ಮಂದಿಗೆ ಯಾವುದೇ ಪ್ರಾಣಾಪಾಯವಾಗಬಾರದೆಂದು ಚಿಂತಿಸಿ ಮನೆಗೆ ಬರುವ ಜನರು ಏನೆಲ್ಲ ಮಾಡಬೇಕೆಂದು ತನ್ನ ಮನೆ ಬಾಗಿಲಿಗೆ ಡೈಯಾಗ್ರಾಮ್ ಅಂಟಿಸಿದ್ದ. ಮನೆ ಬಾಗಿಲು ಓಪನ್ ಮಾಡಿದ ತಕ್ಷಣ ಕಿಟಕಿ ಓಪನ್ ಮಾಡಿ. ಯಾರೂ ಲೈಟ್ಸ್ ಆನ್‌ ಮಾಡಬೇಡಿ ಎಂದು ಬರೆದಿದ್ದ. ಆತ್ಮಹತ್ಯೆ ಮಾಡಿಕೊಂಡ 3 ದಿನದ ಬಳಿಕ ಈ ಘಟನೆ ಬೆಳಕಿಗೆ ಬಂದಿತ್ತು. ಜೀವನ್ ಫೋನ್ ರಿಸೀವ್ ಮಾಡದ ಹಿನ್ನೆಲೆಯಲ್ಲಿ ಅನುಮಾನಗೊಂಡ ಸ್ನೇಹಿತರು ಜೀವನ್ ಮನೆ ಬಳಿ ಬಂದು ನೋಡಿದಾಗ ಅನಾಹುತ ಬಯಲಾಗಿದೆ. ಡೆತ್‌ನೋಟ್ ಬರೆದಿಟ್ಟು ಜೀವನ್ ಆತ್ಮಹತ್ಯೆಗೆ ಶರಣಾಗಿದ್ದ. ಈ ಸಂಬಂಧ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜೀವನ್ ಬರೆದ ಡೆತ್‌ನೋಟ್​ನಲ್ಲೇನಿದೆ? ಮನೆಯವರು ನನಗೆ ಫೋನ್ ಮಾಡ್ತಿಲ್ಲ, ನನ್ನ ಬಗ್ಗೆ ಕೇರ್ ಮಾಡ್ತಿಲ್ಲ, ಲೈಫ್ ಬ್ಯೂಟಿಫುಲ್‌ ಆಗಿರಬೇಕು ಅಂತಾ ಬೀದರ್​ನಿಂದ ಬೆಂಗಳೂರಿಗೆ ಬಂದೆ. ಆದ್ರೆ ಇಲ್ಲಿ ನಾನು ಅನ್ಕೊಂಡ ಹಾಗೇ ಏನು ನಡೀತಿಲ್ಲ. ಲೈಪು ಬೋರಾಗಿದೆ ಅಂತಾ ಜೀವನ್ ಡೆತ್‌ನೋಟ್​ನಲ್ಲಿ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇದನ್ನೂ ಓದಿ: ಮೊಬೈಲ್​ನಲ್ಲಿ ಹೆಚ್ಚು ಮಾತನಾಡಬೇಡ ಎಂದು ಹೇಳಿದ್ದೇ ವಿದ್ಯಾರ್ಥಿನಿ ಆತ್ಮಹತ್ಯೆಗೆ ಕಾರಣವಾಯ್ತಾ?

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು