AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತ ಸತ್ತಮೇಲೆ ಹಣ ಪೀಕುತ್ತಿರುವ ಖಾಸಗಿ ಆಸ್ಪತ್ರೆ?

ಬೆಂಗಳೂರು: ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳ ನೆರವನ್ನು ಪಡೆದಿದೆ. ಜೊತೆಗೆ ಕೊವಿಡ್​ ಚಿಕಿತ್ಸೆಯ ದರವನ್ನು ಸಹ ನಿಗದಿ ಮಾಡಿದೆ. ಆದರೆ, ಕೊರೊನಾ ಚಿಕಿತ್ಸೆಯ ಹೆಸರಿನಲ್ಲಿ ನಗರದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯೊಂದು ಸುಲಿಗೆ ಮಾಡಲು ಮುಂದಾಗಿದೆ ಎಂಬ ಆರೋಪಗಳು ಕೇಳಿಬಂದಿದೆ. ಜೂನ್ 14ರಂದು ಅನಾರೋಗ್ಯದ ಹಿನ್ನೆಲೆಯಲ್ಲಿ ರೋಗಿಯೊಬ್ಬರನ್ನ ಇದೇ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗೆ ಅಡ್ಮಿಟ್ ಮಾಡಲಾಗಿತ್ತು. ಬಳಿಕ ಆತನಿಗೆ ಕೊರೊನಾ ಪಾಸಿಟಿವ್ ಎಂದು ತಿಳಿದುಬಂದ್ರೂ ಕೋವಿಡ್ ಆಸ್ಪತ್ರೆಗೆ ಆಡಳಿತ ಮಂಡಳಿ ಶಿಫ್ಟ್ […]

ಸೋಂಕಿತ ಸತ್ತಮೇಲೆ ಹಣ ಪೀಕುತ್ತಿರುವ ಖಾಸಗಿ ಆಸ್ಪತ್ರೆ?
KUSHAL V
| Edited By: |

Updated on: Jun 28, 2020 | 12:48 PM

Share

ಬೆಂಗಳೂರು: ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳ ನೆರವನ್ನು ಪಡೆದಿದೆ. ಜೊತೆಗೆ ಕೊವಿಡ್​ ಚಿಕಿತ್ಸೆಯ ದರವನ್ನು ಸಹ ನಿಗದಿ ಮಾಡಿದೆ. ಆದರೆ, ಕೊರೊನಾ ಚಿಕಿತ್ಸೆಯ ಹೆಸರಿನಲ್ಲಿ ನಗರದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯೊಂದು ಸುಲಿಗೆ ಮಾಡಲು ಮುಂದಾಗಿದೆ ಎಂಬ ಆರೋಪಗಳು ಕೇಳಿಬಂದಿದೆ.

ಜೂನ್ 14ರಂದು ಅನಾರೋಗ್ಯದ ಹಿನ್ನೆಲೆಯಲ್ಲಿ ರೋಗಿಯೊಬ್ಬರನ್ನ ಇದೇ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗೆ ಅಡ್ಮಿಟ್ ಮಾಡಲಾಗಿತ್ತು. ಬಳಿಕ ಆತನಿಗೆ ಕೊರೊನಾ ಪಾಸಿಟಿವ್ ಎಂದು ತಿಳಿದುಬಂದ್ರೂ ಕೋವಿಡ್ ಆಸ್ಪತ್ರೆಗೆ ಆಡಳಿತ ಮಂಡಳಿ ಶಿಫ್ಟ್ ಮಾಡಲಿಲ್ಲ. ಪೇಷಂಟ್ ಆರೋಗ್ಯ ಸ್ಥಿತಿ ಸರಿ ಇಲ್ಲ ಅಂತಾ ಹೇಳಿ ಅಲ್ಲೇ ಚಿಕಿತ್ಸೆ ನೀಡಲು ನಿರ್ಧರಿಸಿದರು. ಆದರೆ, ಜೂನ್ 25 ರಂದು ಚಿಕಿತ್ಸೆ ಫಲಿಸದೆ, ಸೋಂಕಿತ ಮೃತಪಟ್ಟಿದ್ದರು.

3 ದಿನವಾದರೂ ಮೃತದೇಹ ಹಸ್ತಾಂತರ ಮಾಡದ ಆಸ್ಪತ್ರೆ? ಇದೀಗ ಸೋಂಕಿತ ಮೃತಪಟ್ಟು ಮೂರು ದಿನವಾದ್ರೂ ಮೃತದೇಹವನ್ನ ಆಸ್ಪತ್ರೆಯವರು ಹಸ್ತಾಂತರಿಸುತ್ತಿಲ್ಲವಂತೆ. ಬದಲಿಗೆ ಚಿಕಿತ್ಸೆಗೆ ತಗಲಿದ ಖರ್ಚೆಂದು ಒಟ್ಟು 2 ಲಕ್ಷದ 68 ಸಾವಿರದ 725 ರೂಪಾಯಿ ಬಿಲ್ ಮಾಡಿದ್ದಾರೆ. ಇನ್ಶೂರೆನ್ಸ್​​ನಿಂದ 1 ಲಕ್ಷದ 80 ಸಾವಿರದವರೆಗೂ ಕ್ಲೈಮ್​ ಆಗಿದೆ. ಆದರೆ, ಉಳಿದ ಹಣವನ್ನು ಕಟ್ಟೋವರೆಗೂ ಮೃತದೇಹ ನೀಡುವುದಿಲ್ಲ ಎಂದು ಆಸ್ಪತ್ರೆಯವರು ಸತಾಯಿಸುತ್ತಿದ್ದಾರೆ ಎಂದು ಮೃತನ ಕುಟುಂಬಸ್ಥರು ಅಳಲು ತೋಡಿಕೊಂಡಿದ್ದಾರೆ. ಪರಿಪರಿಯಾಗಿ ಬೇಡಿದ್ರು ಮೃತದೇಹ ಬಿಬಿಎಂಪಿಗೂ ಹಸ್ತಾಂತರಿಸುತ್ತಿಲ್ಲ ಎಂದೂ ಸಹ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗಾಗಿ, ನಾವು ಈ ಬಗ್ಗೆ ಆರೋಗ್ಯ ಸಚಿವ ಶ್ರೀರಾಮುಲುಗೆ ಪತ್ರ ಬರೆಯಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು