AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತ ಸತ್ತಮೇಲೆ ಹಣ ಪೀಕುತ್ತಿರುವ ಖಾಸಗಿ ಆಸ್ಪತ್ರೆ?

ಬೆಂಗಳೂರು: ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳ ನೆರವನ್ನು ಪಡೆದಿದೆ. ಜೊತೆಗೆ ಕೊವಿಡ್​ ಚಿಕಿತ್ಸೆಯ ದರವನ್ನು ಸಹ ನಿಗದಿ ಮಾಡಿದೆ. ಆದರೆ, ಕೊರೊನಾ ಚಿಕಿತ್ಸೆಯ ಹೆಸರಿನಲ್ಲಿ ನಗರದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯೊಂದು ಸುಲಿಗೆ ಮಾಡಲು ಮುಂದಾಗಿದೆ ಎಂಬ ಆರೋಪಗಳು ಕೇಳಿಬಂದಿದೆ. ಜೂನ್ 14ರಂದು ಅನಾರೋಗ್ಯದ ಹಿನ್ನೆಲೆಯಲ್ಲಿ ರೋಗಿಯೊಬ್ಬರನ್ನ ಇದೇ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗೆ ಅಡ್ಮಿಟ್ ಮಾಡಲಾಗಿತ್ತು. ಬಳಿಕ ಆತನಿಗೆ ಕೊರೊನಾ ಪಾಸಿಟಿವ್ ಎಂದು ತಿಳಿದುಬಂದ್ರೂ ಕೋವಿಡ್ ಆಸ್ಪತ್ರೆಗೆ ಆಡಳಿತ ಮಂಡಳಿ ಶಿಫ್ಟ್ […]

ಸೋಂಕಿತ ಸತ್ತಮೇಲೆ ಹಣ ಪೀಕುತ್ತಿರುವ ಖಾಸಗಿ ಆಸ್ಪತ್ರೆ?
KUSHAL V
| Edited By: |

Updated on: Jun 28, 2020 | 12:48 PM

Share

ಬೆಂಗಳೂರು: ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳ ನೆರವನ್ನು ಪಡೆದಿದೆ. ಜೊತೆಗೆ ಕೊವಿಡ್​ ಚಿಕಿತ್ಸೆಯ ದರವನ್ನು ಸಹ ನಿಗದಿ ಮಾಡಿದೆ. ಆದರೆ, ಕೊರೊನಾ ಚಿಕಿತ್ಸೆಯ ಹೆಸರಿನಲ್ಲಿ ನಗರದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯೊಂದು ಸುಲಿಗೆ ಮಾಡಲು ಮುಂದಾಗಿದೆ ಎಂಬ ಆರೋಪಗಳು ಕೇಳಿಬಂದಿದೆ.

ಜೂನ್ 14ರಂದು ಅನಾರೋಗ್ಯದ ಹಿನ್ನೆಲೆಯಲ್ಲಿ ರೋಗಿಯೊಬ್ಬರನ್ನ ಇದೇ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗೆ ಅಡ್ಮಿಟ್ ಮಾಡಲಾಗಿತ್ತು. ಬಳಿಕ ಆತನಿಗೆ ಕೊರೊನಾ ಪಾಸಿಟಿವ್ ಎಂದು ತಿಳಿದುಬಂದ್ರೂ ಕೋವಿಡ್ ಆಸ್ಪತ್ರೆಗೆ ಆಡಳಿತ ಮಂಡಳಿ ಶಿಫ್ಟ್ ಮಾಡಲಿಲ್ಲ. ಪೇಷಂಟ್ ಆರೋಗ್ಯ ಸ್ಥಿತಿ ಸರಿ ಇಲ್ಲ ಅಂತಾ ಹೇಳಿ ಅಲ್ಲೇ ಚಿಕಿತ್ಸೆ ನೀಡಲು ನಿರ್ಧರಿಸಿದರು. ಆದರೆ, ಜೂನ್ 25 ರಂದು ಚಿಕಿತ್ಸೆ ಫಲಿಸದೆ, ಸೋಂಕಿತ ಮೃತಪಟ್ಟಿದ್ದರು.

3 ದಿನವಾದರೂ ಮೃತದೇಹ ಹಸ್ತಾಂತರ ಮಾಡದ ಆಸ್ಪತ್ರೆ? ಇದೀಗ ಸೋಂಕಿತ ಮೃತಪಟ್ಟು ಮೂರು ದಿನವಾದ್ರೂ ಮೃತದೇಹವನ್ನ ಆಸ್ಪತ್ರೆಯವರು ಹಸ್ತಾಂತರಿಸುತ್ತಿಲ್ಲವಂತೆ. ಬದಲಿಗೆ ಚಿಕಿತ್ಸೆಗೆ ತಗಲಿದ ಖರ್ಚೆಂದು ಒಟ್ಟು 2 ಲಕ್ಷದ 68 ಸಾವಿರದ 725 ರೂಪಾಯಿ ಬಿಲ್ ಮಾಡಿದ್ದಾರೆ. ಇನ್ಶೂರೆನ್ಸ್​​ನಿಂದ 1 ಲಕ್ಷದ 80 ಸಾವಿರದವರೆಗೂ ಕ್ಲೈಮ್​ ಆಗಿದೆ. ಆದರೆ, ಉಳಿದ ಹಣವನ್ನು ಕಟ್ಟೋವರೆಗೂ ಮೃತದೇಹ ನೀಡುವುದಿಲ್ಲ ಎಂದು ಆಸ್ಪತ್ರೆಯವರು ಸತಾಯಿಸುತ್ತಿದ್ದಾರೆ ಎಂದು ಮೃತನ ಕುಟುಂಬಸ್ಥರು ಅಳಲು ತೋಡಿಕೊಂಡಿದ್ದಾರೆ. ಪರಿಪರಿಯಾಗಿ ಬೇಡಿದ್ರು ಮೃತದೇಹ ಬಿಬಿಎಂಪಿಗೂ ಹಸ್ತಾಂತರಿಸುತ್ತಿಲ್ಲ ಎಂದೂ ಸಹ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗಾಗಿ, ನಾವು ಈ ಬಗ್ಗೆ ಆರೋಗ್ಯ ಸಚಿವ ಶ್ರೀರಾಮುಲುಗೆ ಪತ್ರ ಬರೆಯಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ