AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತ ಸತ್ತಮೇಲೆ ಹಣ ಪೀಕುತ್ತಿರುವ ಖಾಸಗಿ ಆಸ್ಪತ್ರೆ?

ಬೆಂಗಳೂರು: ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳ ನೆರವನ್ನು ಪಡೆದಿದೆ. ಜೊತೆಗೆ ಕೊವಿಡ್​ ಚಿಕಿತ್ಸೆಯ ದರವನ್ನು ಸಹ ನಿಗದಿ ಮಾಡಿದೆ. ಆದರೆ, ಕೊರೊನಾ ಚಿಕಿತ್ಸೆಯ ಹೆಸರಿನಲ್ಲಿ ನಗರದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯೊಂದು ಸುಲಿಗೆ ಮಾಡಲು ಮುಂದಾಗಿದೆ ಎಂಬ ಆರೋಪಗಳು ಕೇಳಿಬಂದಿದೆ. ಜೂನ್ 14ರಂದು ಅನಾರೋಗ್ಯದ ಹಿನ್ನೆಲೆಯಲ್ಲಿ ರೋಗಿಯೊಬ್ಬರನ್ನ ಇದೇ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗೆ ಅಡ್ಮಿಟ್ ಮಾಡಲಾಗಿತ್ತು. ಬಳಿಕ ಆತನಿಗೆ ಕೊರೊನಾ ಪಾಸಿಟಿವ್ ಎಂದು ತಿಳಿದುಬಂದ್ರೂ ಕೋವಿಡ್ ಆಸ್ಪತ್ರೆಗೆ ಆಡಳಿತ ಮಂಡಳಿ ಶಿಫ್ಟ್ […]

ಸೋಂಕಿತ ಸತ್ತಮೇಲೆ ಹಣ ಪೀಕುತ್ತಿರುವ ಖಾಸಗಿ ಆಸ್ಪತ್ರೆ?
KUSHAL V
| Updated By: |

Updated on: Jun 28, 2020 | 12:48 PM

Share

ಬೆಂಗಳೂರು: ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳ ನೆರವನ್ನು ಪಡೆದಿದೆ. ಜೊತೆಗೆ ಕೊವಿಡ್​ ಚಿಕಿತ್ಸೆಯ ದರವನ್ನು ಸಹ ನಿಗದಿ ಮಾಡಿದೆ. ಆದರೆ, ಕೊರೊನಾ ಚಿಕಿತ್ಸೆಯ ಹೆಸರಿನಲ್ಲಿ ನಗರದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯೊಂದು ಸುಲಿಗೆ ಮಾಡಲು ಮುಂದಾಗಿದೆ ಎಂಬ ಆರೋಪಗಳು ಕೇಳಿಬಂದಿದೆ.

ಜೂನ್ 14ರಂದು ಅನಾರೋಗ್ಯದ ಹಿನ್ನೆಲೆಯಲ್ಲಿ ರೋಗಿಯೊಬ್ಬರನ್ನ ಇದೇ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗೆ ಅಡ್ಮಿಟ್ ಮಾಡಲಾಗಿತ್ತು. ಬಳಿಕ ಆತನಿಗೆ ಕೊರೊನಾ ಪಾಸಿಟಿವ್ ಎಂದು ತಿಳಿದುಬಂದ್ರೂ ಕೋವಿಡ್ ಆಸ್ಪತ್ರೆಗೆ ಆಡಳಿತ ಮಂಡಳಿ ಶಿಫ್ಟ್ ಮಾಡಲಿಲ್ಲ. ಪೇಷಂಟ್ ಆರೋಗ್ಯ ಸ್ಥಿತಿ ಸರಿ ಇಲ್ಲ ಅಂತಾ ಹೇಳಿ ಅಲ್ಲೇ ಚಿಕಿತ್ಸೆ ನೀಡಲು ನಿರ್ಧರಿಸಿದರು. ಆದರೆ, ಜೂನ್ 25 ರಂದು ಚಿಕಿತ್ಸೆ ಫಲಿಸದೆ, ಸೋಂಕಿತ ಮೃತಪಟ್ಟಿದ್ದರು.

3 ದಿನವಾದರೂ ಮೃತದೇಹ ಹಸ್ತಾಂತರ ಮಾಡದ ಆಸ್ಪತ್ರೆ? ಇದೀಗ ಸೋಂಕಿತ ಮೃತಪಟ್ಟು ಮೂರು ದಿನವಾದ್ರೂ ಮೃತದೇಹವನ್ನ ಆಸ್ಪತ್ರೆಯವರು ಹಸ್ತಾಂತರಿಸುತ್ತಿಲ್ಲವಂತೆ. ಬದಲಿಗೆ ಚಿಕಿತ್ಸೆಗೆ ತಗಲಿದ ಖರ್ಚೆಂದು ಒಟ್ಟು 2 ಲಕ್ಷದ 68 ಸಾವಿರದ 725 ರೂಪಾಯಿ ಬಿಲ್ ಮಾಡಿದ್ದಾರೆ. ಇನ್ಶೂರೆನ್ಸ್​​ನಿಂದ 1 ಲಕ್ಷದ 80 ಸಾವಿರದವರೆಗೂ ಕ್ಲೈಮ್​ ಆಗಿದೆ. ಆದರೆ, ಉಳಿದ ಹಣವನ್ನು ಕಟ್ಟೋವರೆಗೂ ಮೃತದೇಹ ನೀಡುವುದಿಲ್ಲ ಎಂದು ಆಸ್ಪತ್ರೆಯವರು ಸತಾಯಿಸುತ್ತಿದ್ದಾರೆ ಎಂದು ಮೃತನ ಕುಟುಂಬಸ್ಥರು ಅಳಲು ತೋಡಿಕೊಂಡಿದ್ದಾರೆ. ಪರಿಪರಿಯಾಗಿ ಬೇಡಿದ್ರು ಮೃತದೇಹ ಬಿಬಿಎಂಪಿಗೂ ಹಸ್ತಾಂತರಿಸುತ್ತಿಲ್ಲ ಎಂದೂ ಸಹ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗಾಗಿ, ನಾವು ಈ ಬಗ್ಗೆ ಆರೋಗ್ಯ ಸಚಿವ ಶ್ರೀರಾಮುಲುಗೆ ಪತ್ರ ಬರೆಯಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!