AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ: DC ಸಭೆಯಿಂದ ಹೊರ ನಡೆದ ಮರಾಠಿ ಪುಂಡರು

ಬೆಳಗಾವಿ: ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದ ಭುಗಿಲೆದ್ದ ಬೆನ್ನಲ್ಲೆ ಸಂಗೊಳ್ಳಿ ರಾಯಣ್ಣ ಮೂರ್ತಿ ಸುತ್ತಲು ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಬ್ಯಾರಿಕೇಡ್ ಹಾಕಿದ್ದಾರೆ. ಇಂದು ಬೆಳಿಗ್ಗೆ ಕನ್ನಡಿಗರು ಬೆಳಗಾವಿಯ ಹೊರವಲಯದ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಸ್ಠಾಪನೆ ಮಾಡಿದ ನಂತರ ಕೆಲ ಎಂಇಎಸ್‌ ಹಾಗೂ ಶಿವಸೇನೆ ಪುಂಡರು ಗಲಾಟೆ ಆರಂಭಿಸಿದ್ದರು. ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿ ಶಾಂತಗೊಳಿಸಲು ಪ್ರಯತ್ನಿಸಿದರು. ಆದ್ರೆ ಕೆಲ ಮರಾಠಿ ಪುಂಡರು ಕನ್ನಡಿಗರು ಹಾಗೂ ಕನ್ನಡದ ಧ್ವಜದ ಮೇಲೆ ಚಪ್ಪಲಿ […]

ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ: DC ಸಭೆಯಿಂದ ಹೊರ ನಡೆದ ಮರಾಠಿ ಪುಂಡರು
Guru
|

Updated on:Aug 28, 2020 | 4:33 PM

Share

ಬೆಳಗಾವಿ: ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದ ಭುಗಿಲೆದ್ದ ಬೆನ್ನಲ್ಲೆ ಸಂಗೊಳ್ಳಿ ರಾಯಣ್ಣ ಮೂರ್ತಿ ಸುತ್ತಲು ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಬ್ಯಾರಿಕೇಡ್ ಹಾಕಿದ್ದಾರೆ.

ಇಂದು ಬೆಳಿಗ್ಗೆ ಕನ್ನಡಿಗರು ಬೆಳಗಾವಿಯ ಹೊರವಲಯದ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಸ್ಠಾಪನೆ ಮಾಡಿದ ನಂತರ ಕೆಲ ಎಂಇಎಸ್‌ ಹಾಗೂ ಶಿವಸೇನೆ ಪುಂಡರು ಗಲಾಟೆ ಆರಂಭಿಸಿದ್ದರು. ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿ ಶಾಂತಗೊಳಿಸಲು ಪ್ರಯತ್ನಿಸಿದರು. ಆದ್ರೆ ಕೆಲ ಮರಾಠಿ ಪುಂಡರು ಕನ್ನಡಿಗರು ಹಾಗೂ ಕನ್ನಡದ ಧ್ವಜದ ಮೇಲೆ ಚಪ್ಪಲಿ ಎಸೆದ ಪರಿಣಾಮ ಪರಿಸ್ಥಿತಿ ಉದ್ವಿಗ್ನಗೊಂಡಿತು. ಆಗ ಪೊಲೀಸರು ಲಾಠಿ ಚಾರ್ಜ್‌ ಮಾಡಿ ಗಲಭೆಕೋರರನ್ನು ಚದುರಿಸಿದ್ದಾರೆ. ಇದಾದ ನಂತರ ರಾಯಣ್ಣ ಮೂರ್ತಿ ಬಳಿ ಮೂರು ಡಿಆರ್ ತುಕಡಿ ಮತ್ತು ಓರ್ವ ಎಸಿಪಿ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಈ ನಡುವೆ ಪರಿಸ್ಥಿತಿಯನ್ನು ಶಾಂತಗೊಳಿಸಲು ಬೆಳಗಾವಿ ಜಿಲ್ಲಾಧಿಕಾರಿ ಎಂಇಎಸ್‌ ಮತ್ತು ಶಿವಸೇನೆ ಮುಖಂಡರ ಜತೆ ಶಾಂತಿ ಸಭೆ ಮಾಡಿದ್ದಾರೆ. ಆದ್ರೆ ಸಭೆಯಲ್ಲಿ ಮತ್ತೆ ಉದ್ಧಟತನ ತೋರಿರುವ ಶಿವಸೇನೆ ಮತ್ತು ಎಂಇಎಸ್‌ ಪೀರನವಾಡಿಯಲ್ಲಿ ಪ್ರತಿಷ್ಠಾಪಿಸಿರುವ ಸಂಗೊಳ್ಳಿ ರಾಯಣ್ಣ ಮೂರ್ತಿ ತೆರವುಗೊಳಿಸುವಂತೆ ಪಟ್ಟು ಹಿಡಿದಿದ್ದಾರೆ.

ಸಂಗೊಳ್ಳಿ ರಾಯಣ್ಣ ಮೂರ್ತಿ ವಿವಾದ ಬಗೆ ಹರಿಯುವವರೆಗೆ ಮೂರ್ತಿಯನ್ನು ಮುಚ್ಚಲು ಪಟ್ಟು ಹಿಡಿದಿದ್ದಾರೆ. ಆದ್ರೆ ಇದಕ್ಕೆ ಡಿಸಿ ಸೊಪ್ಪು ಹಾಕಿಲ್ಲ. ಹೀಗಾಗಿ ಎಂಇಎಸ್‌ ಹಾಗೂ ಶಿವಸೇನೆ ಪುಂಡರು ಡಿಸಿ ಸಭೆಯಿಂದ ಅರ್ಧದಲ್ಲಿಯೇ ಹೊರ ನಡೆದಿದ್ದಾರೆ.

ಈ ನಡುವೆ ಬೆಳಗಾವಿ ಮತ್ತು ಅದಕ್ಕೆ ಹೊಂದಿಕೊಂಡಿರುವ ಪೀರನವಾಡಿಯಲ್ಲಿ ಬಿಗುವಿನ ವಾತಾವರಣವಿದ್ದು, ಯಾವುದೇ ಗಲಭೆಯಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಬಿಗಿ ಬಂದೋಬಸ್ತ್‌ ಮಾಡುತ್ತಿದ್ದಾರೆ.

Also Read: ಕಾನೂನು ಸುವ್ಯವಸ್ಥೆ ಕಾಪಾಡಲು ADGP ಅಮರಕುಮಾರ್‌ ಪಾಂಡೆ ಬೆಳಗಾವಿಗೆ

Also Read: ರಾಯಣ್ಣ ಪ್ರತಿಮೆ ವಿವಾದ: ಪರಿಸ್ಥಿತಿ ಶಾಂತವಾಗಿದೆ ಎಂದ CM ಯಡಿಯೂರಪ್ಪ!

Also Read: ರಾಯಣ್ಣ ಪ್ರತಿಮೆ ವಿವಾದ: ಸ್ವತಃ CM ಜವಾಬ್ದಾರಿ ಕೊಟ್ಟರೂ ಸ್ಥಳಕ್ಕೆ ಬಾರದ DC ಹಿರೇಮಠ್

Published On - 2:16 pm, Fri, 28 August 20

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ