AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ: DC ಸಭೆಯಿಂದ ಹೊರ ನಡೆದ ಮರಾಠಿ ಪುಂಡರು

ಬೆಳಗಾವಿ: ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದ ಭುಗಿಲೆದ್ದ ಬೆನ್ನಲ್ಲೆ ಸಂಗೊಳ್ಳಿ ರಾಯಣ್ಣ ಮೂರ್ತಿ ಸುತ್ತಲು ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಬ್ಯಾರಿಕೇಡ್ ಹಾಕಿದ್ದಾರೆ. ಇಂದು ಬೆಳಿಗ್ಗೆ ಕನ್ನಡಿಗರು ಬೆಳಗಾವಿಯ ಹೊರವಲಯದ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಸ್ಠಾಪನೆ ಮಾಡಿದ ನಂತರ ಕೆಲ ಎಂಇಎಸ್‌ ಹಾಗೂ ಶಿವಸೇನೆ ಪುಂಡರು ಗಲಾಟೆ ಆರಂಭಿಸಿದ್ದರು. ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿ ಶಾಂತಗೊಳಿಸಲು ಪ್ರಯತ್ನಿಸಿದರು. ಆದ್ರೆ ಕೆಲ ಮರಾಠಿ ಪುಂಡರು ಕನ್ನಡಿಗರು ಹಾಗೂ ಕನ್ನಡದ ಧ್ವಜದ ಮೇಲೆ ಚಪ್ಪಲಿ […]

ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ: DC ಸಭೆಯಿಂದ ಹೊರ ನಡೆದ ಮರಾಠಿ ಪುಂಡರು
Guru
|

Updated on:Aug 28, 2020 | 4:33 PM

Share

ಬೆಳಗಾವಿ: ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದ ಭುಗಿಲೆದ್ದ ಬೆನ್ನಲ್ಲೆ ಸಂಗೊಳ್ಳಿ ರಾಯಣ್ಣ ಮೂರ್ತಿ ಸುತ್ತಲು ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಬ್ಯಾರಿಕೇಡ್ ಹಾಕಿದ್ದಾರೆ.

ಇಂದು ಬೆಳಿಗ್ಗೆ ಕನ್ನಡಿಗರು ಬೆಳಗಾವಿಯ ಹೊರವಲಯದ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಸ್ಠಾಪನೆ ಮಾಡಿದ ನಂತರ ಕೆಲ ಎಂಇಎಸ್‌ ಹಾಗೂ ಶಿವಸೇನೆ ಪುಂಡರು ಗಲಾಟೆ ಆರಂಭಿಸಿದ್ದರು. ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿ ಶಾಂತಗೊಳಿಸಲು ಪ್ರಯತ್ನಿಸಿದರು. ಆದ್ರೆ ಕೆಲ ಮರಾಠಿ ಪುಂಡರು ಕನ್ನಡಿಗರು ಹಾಗೂ ಕನ್ನಡದ ಧ್ವಜದ ಮೇಲೆ ಚಪ್ಪಲಿ ಎಸೆದ ಪರಿಣಾಮ ಪರಿಸ್ಥಿತಿ ಉದ್ವಿಗ್ನಗೊಂಡಿತು. ಆಗ ಪೊಲೀಸರು ಲಾಠಿ ಚಾರ್ಜ್‌ ಮಾಡಿ ಗಲಭೆಕೋರರನ್ನು ಚದುರಿಸಿದ್ದಾರೆ. ಇದಾದ ನಂತರ ರಾಯಣ್ಣ ಮೂರ್ತಿ ಬಳಿ ಮೂರು ಡಿಆರ್ ತುಕಡಿ ಮತ್ತು ಓರ್ವ ಎಸಿಪಿ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಈ ನಡುವೆ ಪರಿಸ್ಥಿತಿಯನ್ನು ಶಾಂತಗೊಳಿಸಲು ಬೆಳಗಾವಿ ಜಿಲ್ಲಾಧಿಕಾರಿ ಎಂಇಎಸ್‌ ಮತ್ತು ಶಿವಸೇನೆ ಮುಖಂಡರ ಜತೆ ಶಾಂತಿ ಸಭೆ ಮಾಡಿದ್ದಾರೆ. ಆದ್ರೆ ಸಭೆಯಲ್ಲಿ ಮತ್ತೆ ಉದ್ಧಟತನ ತೋರಿರುವ ಶಿವಸೇನೆ ಮತ್ತು ಎಂಇಎಸ್‌ ಪೀರನವಾಡಿಯಲ್ಲಿ ಪ್ರತಿಷ್ಠಾಪಿಸಿರುವ ಸಂಗೊಳ್ಳಿ ರಾಯಣ್ಣ ಮೂರ್ತಿ ತೆರವುಗೊಳಿಸುವಂತೆ ಪಟ್ಟು ಹಿಡಿದಿದ್ದಾರೆ.

ಸಂಗೊಳ್ಳಿ ರಾಯಣ್ಣ ಮೂರ್ತಿ ವಿವಾದ ಬಗೆ ಹರಿಯುವವರೆಗೆ ಮೂರ್ತಿಯನ್ನು ಮುಚ್ಚಲು ಪಟ್ಟು ಹಿಡಿದಿದ್ದಾರೆ. ಆದ್ರೆ ಇದಕ್ಕೆ ಡಿಸಿ ಸೊಪ್ಪು ಹಾಕಿಲ್ಲ. ಹೀಗಾಗಿ ಎಂಇಎಸ್‌ ಹಾಗೂ ಶಿವಸೇನೆ ಪುಂಡರು ಡಿಸಿ ಸಭೆಯಿಂದ ಅರ್ಧದಲ್ಲಿಯೇ ಹೊರ ನಡೆದಿದ್ದಾರೆ.

ಈ ನಡುವೆ ಬೆಳಗಾವಿ ಮತ್ತು ಅದಕ್ಕೆ ಹೊಂದಿಕೊಂಡಿರುವ ಪೀರನವಾಡಿಯಲ್ಲಿ ಬಿಗುವಿನ ವಾತಾವರಣವಿದ್ದು, ಯಾವುದೇ ಗಲಭೆಯಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಬಿಗಿ ಬಂದೋಬಸ್ತ್‌ ಮಾಡುತ್ತಿದ್ದಾರೆ.

Also Read: ಕಾನೂನು ಸುವ್ಯವಸ್ಥೆ ಕಾಪಾಡಲು ADGP ಅಮರಕುಮಾರ್‌ ಪಾಂಡೆ ಬೆಳಗಾವಿಗೆ

Also Read: ರಾಯಣ್ಣ ಪ್ರತಿಮೆ ವಿವಾದ: ಪರಿಸ್ಥಿತಿ ಶಾಂತವಾಗಿದೆ ಎಂದ CM ಯಡಿಯೂರಪ್ಪ!

Also Read: ರಾಯಣ್ಣ ಪ್ರತಿಮೆ ವಿವಾದ: ಸ್ವತಃ CM ಜವಾಬ್ದಾರಿ ಕೊಟ್ಟರೂ ಸ್ಥಳಕ್ಕೆ ಬಾರದ DC ಹಿರೇಮಠ್

Published On - 2:16 pm, Fri, 28 August 20

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್