AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಡಲ ನಗರಿಯಲ್ಲಿ ಉಗ್ರ ಸಂಘಟನೆಗಳ ಪರ ಗೋಡೆ ಬರಹ, ಲಷ್ಕರ್ ಉಗ್ರರನ್ನ ಕರೆಸುವುದಾಗಿ ಬೆದರಿಕೆ..

ಮಂಗಳೂರಿನಲ್ಲಿ ಲಷ್ಕರ್ ಉಗ್ರರನ್ನ ಕರೆಸುವುದಾಗಿ ಕೆಲ ಕಿಡಿಗೇಡಿಗಳು ಉಗ್ರ ಸಂಘಟನೆಗಳ ಪರ ಗೋಡೆಗಳ ಮೇಲೆ ಬರೆದಿದ್ದಾರೆ. ಸ್ಥಳಕ್ಕೆ ಕದ್ರಿ ಪೊಲೀಸರು ದೌಡಾಯಿಸಿ ವಿವಾದಿತ ಬರಹದ ಮೇಲೆ ಪೇಂಟಿಂಗ್ ಮಾಡಿಸುತ್ತಿದ್ದಾರೆ.

ಕಡಲ ನಗರಿಯಲ್ಲಿ ಉಗ್ರ ಸಂಘಟನೆಗಳ ಪರ ಗೋಡೆ ಬರಹ, ಲಷ್ಕರ್ ಉಗ್ರರನ್ನ ಕರೆಸುವುದಾಗಿ ಬೆದರಿಕೆ..
ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ (ಸಂಗ್ರಹ ಚಿತ್ರ)
ಆಯೇಷಾ ಬಾನು
ಆಯೇಷಾ ಬಾನು|

Updated on:Nov 27, 2020 | 9:17 AM

Share

ಮಂಗಳೂರು: ಕಡಲ ನಗರಿ ಮಂಗಳೂರಿನಲ್ಲಿ ಕೆಲ ಕಿಡಿಗೇಡಿಗಳು ಉಗ್ರ ಸಂಘಟನೆಗಳ ಪರ ಗೋಡೆಗಳ ಮೇಲೆ ಬರಹಗಳನ್ನು ಬರೆದಿದ್ದಾರೆ. ಸರ್ಕ್ಯೂಟ್‌ಹೌಸ್ ರಸ್ತೆಯ ಅಪಾರ್ಟ್‌ಮೆಂಟ್ ಒಂದರ ಕಾಂಪೌಂಡ್‌ ಮೇಲೆ ಹ್ಯಾಷ್ ಟ್ಯಾಗ್ ಹಾಕಿ ಲಷ್ಕರ್ ಜಿಂದಾಬಾದ್ ಎಂದು ಬರೆಯಲಾಗಿದೆ.

ನವೆಂಬರ್ 26, 2008ರಂದು ಪಾಕಿಸ್ತಾನ ಮೂಲದ ಲಷ್ಕರ್ ಎ ತೊಯ್ಬಾ ಉಗ್ರರು ಸಮುದ್ರ ಮಾರ್ಗದಲ್ಲಿ ಬಂದು ಮುಂಬೈನಲ್ಲಿ ದಾಳಿ ನಡೆಸಿದ್ದರು. ಈ ಭಯಾನಕ ದಾಳಿಯಲ್ಲಿ 18 ಭದ್ರತಾ ಸಿಬ್ಬಂದಿ ಸೇರಿ 166 ಮಂದಿ ಮೃತಪಟ್ಟಿದ್ದರು. ನವೆಂಬರ್ 26, 2020ಕ್ಕೆ ಮುಂಬೈ ಮೇಲೆ ನಡೆದ ಉಗ್ರರ ದಾಳಿಗೆ 12 ವರ್ಷಗಳಾಗಿದೆ. ಈ ನಡುವೆ ಇಂದು ಕಡಲ ನಗರಿಯಲ್ಲಿ ಕಿಡಿಗೇಡಿಗಳ ಈ ಕೃತ್ಯ ಭಯವನ್ನುಟ್ಟಿಸಿದೆ.

ಇನ್ನು ಕಾಂಪೌಂಡ್‌ ಮೇಲೆ ‘ಡು ನಾಟ್ ಫೋರ್ಸ್ ಅಸ್‌ ಟು ಇನ್ವೈಟ್ ತಾಲಿಬಾನ್ ಆ್ಯಂಡ್ ಲಷ್ಕರ್-ಇ-ತೊಯ್ಬಾ ಟು ಡೀಲ್‌ ವಿತ್ ಸಂಘೀಸ್ ಆ್ಯಂಡ್ ಮನ್ವೇದಿಸ್’ ಎಂದು ಇಂಗ್ಲೀಷ್​ನಲ್ಲಿ ಬರೆದು ಬರಹದ ಮೂಲಕ ಲಷ್ಕರ್ ಉಗ್ರರನ್ನ ಕರೆಸುವುದಾಗಿ ಬೆದರಿಕೆ ಹಾಕಿದ್ದಾರೆ. ಇದರ ಅನುವಾದ ಸಂಘಿಗಳು ಮತ್ತು ಮನುವಾದಿಗಳ ವಿರುದ್ಧ ಹೋರಾಟಕ್ಕೆ ಲಷ್ಕರ್-ಇ-ತೊಯ್ಬಾ, ತಾಲಿಬಾನ್‌ ಸಂಘಟನೆಗೆ ಆಹ್ವಾನಿಸಲು ನಮ್ಮನ್ನು ಪ್ರೇರೇಪಿಸಬೇಡಿ ಎಂದು.

ಸದ್ಯ ಸ್ಥಳಕ್ಕೆ ಕದ್ರಿ ಪೊಲೀಸರು ಆಗಮಿಸಿದ್ದು ವಿವಾದಿತ ಬರಹದ ಮೇಲೆ ಪೇಂಟಿಂಗ್ ಮಾಡಿಸುತ್ತಿದ್ದಾರೆ. ಆರೋಪಿಗಳ ಪತ್ತೆಗೆ ಕದ್ರಿ ಪೊಲೀಸರಿಂದ ಶೋಧಕಾರ್ಯ ಶುರು ಮಾಡಿದ್ದು ಬರಹವಿದ್ದ ಸುತ್ತಮುತ್ತಲಿನ ರಸ್ತೆಗಳ ಸಿಸಿಟಿವಿ ಪರಿಶೀಲಿಸಲಾಗುತ್ತಿದೆ.

Published On - 8:42 am, Fri, 27 November 20

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ