AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಡಲ ನಗರಿಯಲ್ಲಿ ಉಗ್ರ ಸಂಘಟನೆಗಳ ಪರ ಗೋಡೆ ಬರಹ, ಲಷ್ಕರ್ ಉಗ್ರರನ್ನ ಕರೆಸುವುದಾಗಿ ಬೆದರಿಕೆ..

ಮಂಗಳೂರಿನಲ್ಲಿ ಲಷ್ಕರ್ ಉಗ್ರರನ್ನ ಕರೆಸುವುದಾಗಿ ಕೆಲ ಕಿಡಿಗೇಡಿಗಳು ಉಗ್ರ ಸಂಘಟನೆಗಳ ಪರ ಗೋಡೆಗಳ ಮೇಲೆ ಬರೆದಿದ್ದಾರೆ. ಸ್ಥಳಕ್ಕೆ ಕದ್ರಿ ಪೊಲೀಸರು ದೌಡಾಯಿಸಿ ವಿವಾದಿತ ಬರಹದ ಮೇಲೆ ಪೇಂಟಿಂಗ್ ಮಾಡಿಸುತ್ತಿದ್ದಾರೆ.

ಕಡಲ ನಗರಿಯಲ್ಲಿ ಉಗ್ರ ಸಂಘಟನೆಗಳ ಪರ ಗೋಡೆ ಬರಹ, ಲಷ್ಕರ್ ಉಗ್ರರನ್ನ ಕರೆಸುವುದಾಗಿ ಬೆದರಿಕೆ..
ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ (ಸಂಗ್ರಹ ಚಿತ್ರ)
ಆಯೇಷಾ ಬಾನು
|

Updated on:Nov 27, 2020 | 9:17 AM

Share

ಮಂಗಳೂರು: ಕಡಲ ನಗರಿ ಮಂಗಳೂರಿನಲ್ಲಿ ಕೆಲ ಕಿಡಿಗೇಡಿಗಳು ಉಗ್ರ ಸಂಘಟನೆಗಳ ಪರ ಗೋಡೆಗಳ ಮೇಲೆ ಬರಹಗಳನ್ನು ಬರೆದಿದ್ದಾರೆ. ಸರ್ಕ್ಯೂಟ್‌ಹೌಸ್ ರಸ್ತೆಯ ಅಪಾರ್ಟ್‌ಮೆಂಟ್ ಒಂದರ ಕಾಂಪೌಂಡ್‌ ಮೇಲೆ ಹ್ಯಾಷ್ ಟ್ಯಾಗ್ ಹಾಕಿ ಲಷ್ಕರ್ ಜಿಂದಾಬಾದ್ ಎಂದು ಬರೆಯಲಾಗಿದೆ.

ನವೆಂಬರ್ 26, 2008ರಂದು ಪಾಕಿಸ್ತಾನ ಮೂಲದ ಲಷ್ಕರ್ ಎ ತೊಯ್ಬಾ ಉಗ್ರರು ಸಮುದ್ರ ಮಾರ್ಗದಲ್ಲಿ ಬಂದು ಮುಂಬೈನಲ್ಲಿ ದಾಳಿ ನಡೆಸಿದ್ದರು. ಈ ಭಯಾನಕ ದಾಳಿಯಲ್ಲಿ 18 ಭದ್ರತಾ ಸಿಬ್ಬಂದಿ ಸೇರಿ 166 ಮಂದಿ ಮೃತಪಟ್ಟಿದ್ದರು. ನವೆಂಬರ್ 26, 2020ಕ್ಕೆ ಮುಂಬೈ ಮೇಲೆ ನಡೆದ ಉಗ್ರರ ದಾಳಿಗೆ 12 ವರ್ಷಗಳಾಗಿದೆ. ಈ ನಡುವೆ ಇಂದು ಕಡಲ ನಗರಿಯಲ್ಲಿ ಕಿಡಿಗೇಡಿಗಳ ಈ ಕೃತ್ಯ ಭಯವನ್ನುಟ್ಟಿಸಿದೆ.

ಇನ್ನು ಕಾಂಪೌಂಡ್‌ ಮೇಲೆ ‘ಡು ನಾಟ್ ಫೋರ್ಸ್ ಅಸ್‌ ಟು ಇನ್ವೈಟ್ ತಾಲಿಬಾನ್ ಆ್ಯಂಡ್ ಲಷ್ಕರ್-ಇ-ತೊಯ್ಬಾ ಟು ಡೀಲ್‌ ವಿತ್ ಸಂಘೀಸ್ ಆ್ಯಂಡ್ ಮನ್ವೇದಿಸ್’ ಎಂದು ಇಂಗ್ಲೀಷ್​ನಲ್ಲಿ ಬರೆದು ಬರಹದ ಮೂಲಕ ಲಷ್ಕರ್ ಉಗ್ರರನ್ನ ಕರೆಸುವುದಾಗಿ ಬೆದರಿಕೆ ಹಾಕಿದ್ದಾರೆ. ಇದರ ಅನುವಾದ ಸಂಘಿಗಳು ಮತ್ತು ಮನುವಾದಿಗಳ ವಿರುದ್ಧ ಹೋರಾಟಕ್ಕೆ ಲಷ್ಕರ್-ಇ-ತೊಯ್ಬಾ, ತಾಲಿಬಾನ್‌ ಸಂಘಟನೆಗೆ ಆಹ್ವಾನಿಸಲು ನಮ್ಮನ್ನು ಪ್ರೇರೇಪಿಸಬೇಡಿ ಎಂದು.

ಸದ್ಯ ಸ್ಥಳಕ್ಕೆ ಕದ್ರಿ ಪೊಲೀಸರು ಆಗಮಿಸಿದ್ದು ವಿವಾದಿತ ಬರಹದ ಮೇಲೆ ಪೇಂಟಿಂಗ್ ಮಾಡಿಸುತ್ತಿದ್ದಾರೆ. ಆರೋಪಿಗಳ ಪತ್ತೆಗೆ ಕದ್ರಿ ಪೊಲೀಸರಿಂದ ಶೋಧಕಾರ್ಯ ಶುರು ಮಾಡಿದ್ದು ಬರಹವಿದ್ದ ಸುತ್ತಮುತ್ತಲಿನ ರಸ್ತೆಗಳ ಸಿಸಿಟಿವಿ ಪರಿಶೀಲಿಸಲಾಗುತ್ತಿದೆ.

Published On - 8:42 am, Fri, 27 November 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ