AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್ ಸೆಂಟರ್‌ನಲ್ಲಿ ಮಹಿಳಾ ಅಧಿಕಾರಿಗಳ ಜೊತೆ ಹಿರಿಯ ಅಧಿಕಾರಿ ಅನುಚಿತ ವರ್ತನೆ?

ಬೆಂಗಳೂರು: ಕೊರೊನಾ ಸೋಂಕಿತರನ್ನು ಗುಣಪಡಿಸಬೇಕಿದ್ದ ಬೆಂಗಳೂರು ನಗರದ ಕೊವಿಡ್ ಕೇರ್ ಸೆಂಟರ್‌ಗಳು ಈಗ ಐಎಎಸ್ ಮತ್ತು ಕೆಎಸ್ ಅಧಿಕಾರಿಗಳ ನಡುವಿನ ಕಿತ್ತಾಟಕ್ಕೆ ವೇದಿಕೆಯಾಗಿವೆ. ಹಿರಿಯ ಐಎಎಸ್ ಅಧಿಕಾರಿಯ ವಿರುದ್ಧ ಏಳು ಜನ ಪ್ರೊಬೆಷನರಿ ತಹಶಿಲ್ದಾರರು ತಿರುಗಿ ಬಿದ್ದಿದ್ದು, ದೂರು ನೀಡಿದ್ದಾರೆ. ಬೆಂಗಳೂರಿನ ಕೋವಿಡ್ ಕೇರ್ ಸೆಂಟರ್ ಗಳ ಟಾಸ್ಕ್ ಫೋರ್ಸ್ ಲೀಡರ್ ಪ್ರೊಬೆಷನರಿ ತಹಶೀಲ್ದಾರಗಳಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಬಿಬಿಎಂಪಿ ಆಯುಕ್ತರಿಗೆ ಏಳು ಜನ ಪ್ರೊಬೆಷನರಿ ತಹಶೀಲ್ದಾರರು ದೂರು ನೀಡಿದ್ದಾರೆ. ಟಾಸ್ಕ್ ಫೊರ್ಸ್ ಲೀಡರ್ ಆಗಿರುವ ಐಎಎಸ್ […]

ಕೋವಿಡ್ ಸೆಂಟರ್‌ನಲ್ಲಿ ಮಹಿಳಾ ಅಧಿಕಾರಿಗಳ ಜೊತೆ ಹಿರಿಯ ಅಧಿಕಾರಿ ಅನುಚಿತ ವರ್ತನೆ?
Guru
| Edited By: |

Updated on: Aug 11, 2020 | 9:28 AM

Share

ಬೆಂಗಳೂರು: ಕೊರೊನಾ ಸೋಂಕಿತರನ್ನು ಗುಣಪಡಿಸಬೇಕಿದ್ದ ಬೆಂಗಳೂರು ನಗರದ ಕೊವಿಡ್ ಕೇರ್ ಸೆಂಟರ್‌ಗಳು ಈಗ ಐಎಎಸ್ ಮತ್ತು ಕೆಎಸ್ ಅಧಿಕಾರಿಗಳ ನಡುವಿನ ಕಿತ್ತಾಟಕ್ಕೆ ವೇದಿಕೆಯಾಗಿವೆ. ಹಿರಿಯ ಐಎಎಸ್ ಅಧಿಕಾರಿಯ ವಿರುದ್ಧ ಏಳು ಜನ ಪ್ರೊಬೆಷನರಿ ತಹಶಿಲ್ದಾರರು ತಿರುಗಿ ಬಿದ್ದಿದ್ದು, ದೂರು ನೀಡಿದ್ದಾರೆ.

ಬೆಂಗಳೂರಿನ ಕೋವಿಡ್ ಕೇರ್ ಸೆಂಟರ್ ಗಳ ಟಾಸ್ಕ್ ಫೋರ್ಸ್ ಲೀಡರ್ ಪ್ರೊಬೆಷನರಿ ತಹಶೀಲ್ದಾರಗಳಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಬಿಬಿಎಂಪಿ ಆಯುಕ್ತರಿಗೆ ಏಳು ಜನ ಪ್ರೊಬೆಷನರಿ ತಹಶೀಲ್ದಾರರು ದೂರು ನೀಡಿದ್ದಾರೆ. ಟಾಸ್ಕ್ ಫೊರ್ಸ್ ಲೀಡರ್ ಆಗಿರುವ ಐಎಎಸ್ ಅಧಿಕಾರಿ, ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಏಳು ಜನ ಪ್ರೊಬೆಷನರಿ ತಹಶೀಲ್ದಾರರಿಗೆ ನಿಮ್ಮ ಮೇಲೆ ಎಫ್ ಐ ಆರ್ ಹಾಕಿಸ್ತೇನೆ, ಸಸ್ಪೆಂಡ್ ಮಾಡಿಸ್ತೇನೆ ಎಂದು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡುತ್ತಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇಷ್ಟೇ ಅಲ್ಲ ಮಹಿಳಾ ಅಧಿಕಾರಿಗಳ ಜೊತೆ ಹಿರಿಯ ಅಧಿಕಾರಿ ಅನುಚಿತವಾಗಿ ವರ್ತಿಸುತ್ತಿದ್ದಾರೆ. ಡ್ಯೂಟಿಯಲ್ಲಿ ಇರುವ ಬಗ್ಗೆ ಪದೇ ಪದೇ ಸೆಲ್ಫಿ ಕಳುಹಿಸುವಂತೆ ಒತ್ತಡ ಹಾಕ್ತಿದ್ದಾರೆ. ಇದರಿಂದ ನಾವು ಆತ್ಮಸ್ಥೈರ್ಯ ಕಳೆದುಕೊಳ್ಳುತ್ತಿದ್ದೇವೆಂದು ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ.

ಆದ್ರೆ ಕೋವಿಡ್ ಕೇರ್ ಸೆಂಟರ್ ಟಾಸ್ಕ್ ಲೀಡರ್ ರಾಜೇಂದ್ರ ಕುಮಾರ್ ಕಠಾರಿಯಾ ಮಾತ್ರ, ನಾನು ಕೆಲಸ ಮಾಡುವಂತೆ ಹೇಳಿದ್ದೆನೆಯೇ ಹೊರತು. ಬೇರೆನೂ ನನಗೆ ಗೊತ್ತಿಲ್ಲ. ಇನ್ನು ದೂರು ಕೊಟ್ಟಿರುವ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ