AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್ ಸೆಂಟರ್‌ನಲ್ಲಿ ಮಹಿಳಾ ಅಧಿಕಾರಿಗಳ ಜೊತೆ ಹಿರಿಯ ಅಧಿಕಾರಿ ಅನುಚಿತ ವರ್ತನೆ?

ಬೆಂಗಳೂರು: ಕೊರೊನಾ ಸೋಂಕಿತರನ್ನು ಗುಣಪಡಿಸಬೇಕಿದ್ದ ಬೆಂಗಳೂರು ನಗರದ ಕೊವಿಡ್ ಕೇರ್ ಸೆಂಟರ್‌ಗಳು ಈಗ ಐಎಎಸ್ ಮತ್ತು ಕೆಎಸ್ ಅಧಿಕಾರಿಗಳ ನಡುವಿನ ಕಿತ್ತಾಟಕ್ಕೆ ವೇದಿಕೆಯಾಗಿವೆ. ಹಿರಿಯ ಐಎಎಸ್ ಅಧಿಕಾರಿಯ ವಿರುದ್ಧ ಏಳು ಜನ ಪ್ರೊಬೆಷನರಿ ತಹಶಿಲ್ದಾರರು ತಿರುಗಿ ಬಿದ್ದಿದ್ದು, ದೂರು ನೀಡಿದ್ದಾರೆ. ಬೆಂಗಳೂರಿನ ಕೋವಿಡ್ ಕೇರ್ ಸೆಂಟರ್ ಗಳ ಟಾಸ್ಕ್ ಫೋರ್ಸ್ ಲೀಡರ್ ಪ್ರೊಬೆಷನರಿ ತಹಶೀಲ್ದಾರಗಳಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಬಿಬಿಎಂಪಿ ಆಯುಕ್ತರಿಗೆ ಏಳು ಜನ ಪ್ರೊಬೆಷನರಿ ತಹಶೀಲ್ದಾರರು ದೂರು ನೀಡಿದ್ದಾರೆ. ಟಾಸ್ಕ್ ಫೊರ್ಸ್ ಲೀಡರ್ ಆಗಿರುವ ಐಎಎಸ್ […]

ಕೋವಿಡ್ ಸೆಂಟರ್‌ನಲ್ಲಿ ಮಹಿಳಾ ಅಧಿಕಾರಿಗಳ ಜೊತೆ ಹಿರಿಯ ಅಧಿಕಾರಿ ಅನುಚಿತ ವರ್ತನೆ?
Guru
Guru| Edited By: ಸಾಧು ಶ್ರೀನಾಥ್​|

Updated on: Aug 11, 2020 | 9:28 AM

Share

ಬೆಂಗಳೂರು: ಕೊರೊನಾ ಸೋಂಕಿತರನ್ನು ಗುಣಪಡಿಸಬೇಕಿದ್ದ ಬೆಂಗಳೂರು ನಗರದ ಕೊವಿಡ್ ಕೇರ್ ಸೆಂಟರ್‌ಗಳು ಈಗ ಐಎಎಸ್ ಮತ್ತು ಕೆಎಸ್ ಅಧಿಕಾರಿಗಳ ನಡುವಿನ ಕಿತ್ತಾಟಕ್ಕೆ ವೇದಿಕೆಯಾಗಿವೆ. ಹಿರಿಯ ಐಎಎಸ್ ಅಧಿಕಾರಿಯ ವಿರುದ್ಧ ಏಳು ಜನ ಪ್ರೊಬೆಷನರಿ ತಹಶಿಲ್ದಾರರು ತಿರುಗಿ ಬಿದ್ದಿದ್ದು, ದೂರು ನೀಡಿದ್ದಾರೆ.

ಬೆಂಗಳೂರಿನ ಕೋವಿಡ್ ಕೇರ್ ಸೆಂಟರ್ ಗಳ ಟಾಸ್ಕ್ ಫೋರ್ಸ್ ಲೀಡರ್ ಪ್ರೊಬೆಷನರಿ ತಹಶೀಲ್ದಾರಗಳಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಬಿಬಿಎಂಪಿ ಆಯುಕ್ತರಿಗೆ ಏಳು ಜನ ಪ್ರೊಬೆಷನರಿ ತಹಶೀಲ್ದಾರರು ದೂರು ನೀಡಿದ್ದಾರೆ. ಟಾಸ್ಕ್ ಫೊರ್ಸ್ ಲೀಡರ್ ಆಗಿರುವ ಐಎಎಸ್ ಅಧಿಕಾರಿ, ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಏಳು ಜನ ಪ್ರೊಬೆಷನರಿ ತಹಶೀಲ್ದಾರರಿಗೆ ನಿಮ್ಮ ಮೇಲೆ ಎಫ್ ಐ ಆರ್ ಹಾಕಿಸ್ತೇನೆ, ಸಸ್ಪೆಂಡ್ ಮಾಡಿಸ್ತೇನೆ ಎಂದು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡುತ್ತಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇಷ್ಟೇ ಅಲ್ಲ ಮಹಿಳಾ ಅಧಿಕಾರಿಗಳ ಜೊತೆ ಹಿರಿಯ ಅಧಿಕಾರಿ ಅನುಚಿತವಾಗಿ ವರ್ತಿಸುತ್ತಿದ್ದಾರೆ. ಡ್ಯೂಟಿಯಲ್ಲಿ ಇರುವ ಬಗ್ಗೆ ಪದೇ ಪದೇ ಸೆಲ್ಫಿ ಕಳುಹಿಸುವಂತೆ ಒತ್ತಡ ಹಾಕ್ತಿದ್ದಾರೆ. ಇದರಿಂದ ನಾವು ಆತ್ಮಸ್ಥೈರ್ಯ ಕಳೆದುಕೊಳ್ಳುತ್ತಿದ್ದೇವೆಂದು ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ.

ಆದ್ರೆ ಕೋವಿಡ್ ಕೇರ್ ಸೆಂಟರ್ ಟಾಸ್ಕ್ ಲೀಡರ್ ರಾಜೇಂದ್ರ ಕುಮಾರ್ ಕಠಾರಿಯಾ ಮಾತ್ರ, ನಾನು ಕೆಲಸ ಮಾಡುವಂತೆ ಹೇಳಿದ್ದೆನೆಯೇ ಹೊರತು. ಬೇರೆನೂ ನನಗೆ ಗೊತ್ತಿಲ್ಲ. ಇನ್ನು ದೂರು ಕೊಟ್ಟಿರುವ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ