AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್ ಸೆಂಟರ್‌ನಲ್ಲಿ ಮಹಿಳಾ ಅಧಿಕಾರಿಗಳ ಜೊತೆ ಹಿರಿಯ ಅಧಿಕಾರಿ ಅನುಚಿತ ವರ್ತನೆ?

ಬೆಂಗಳೂರು: ಕೊರೊನಾ ಸೋಂಕಿತರನ್ನು ಗುಣಪಡಿಸಬೇಕಿದ್ದ ಬೆಂಗಳೂರು ನಗರದ ಕೊವಿಡ್ ಕೇರ್ ಸೆಂಟರ್‌ಗಳು ಈಗ ಐಎಎಸ್ ಮತ್ತು ಕೆಎಸ್ ಅಧಿಕಾರಿಗಳ ನಡುವಿನ ಕಿತ್ತಾಟಕ್ಕೆ ವೇದಿಕೆಯಾಗಿವೆ. ಹಿರಿಯ ಐಎಎಸ್ ಅಧಿಕಾರಿಯ ವಿರುದ್ಧ ಏಳು ಜನ ಪ್ರೊಬೆಷನರಿ ತಹಶಿಲ್ದಾರರು ತಿರುಗಿ ಬಿದ್ದಿದ್ದು, ದೂರು ನೀಡಿದ್ದಾರೆ. ಬೆಂಗಳೂರಿನ ಕೋವಿಡ್ ಕೇರ್ ಸೆಂಟರ್ ಗಳ ಟಾಸ್ಕ್ ಫೋರ್ಸ್ ಲೀಡರ್ ಪ್ರೊಬೆಷನರಿ ತಹಶೀಲ್ದಾರಗಳಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಬಿಬಿಎಂಪಿ ಆಯುಕ್ತರಿಗೆ ಏಳು ಜನ ಪ್ರೊಬೆಷನರಿ ತಹಶೀಲ್ದಾರರು ದೂರು ನೀಡಿದ್ದಾರೆ. ಟಾಸ್ಕ್ ಫೊರ್ಸ್ ಲೀಡರ್ ಆಗಿರುವ ಐಎಎಸ್ […]

ಕೋವಿಡ್ ಸೆಂಟರ್‌ನಲ್ಲಿ ಮಹಿಳಾ ಅಧಿಕಾರಿಗಳ ಜೊತೆ ಹಿರಿಯ ಅಧಿಕಾರಿ ಅನುಚಿತ ವರ್ತನೆ?
Guru
| Edited By: |

Updated on: Aug 11, 2020 | 9:28 AM

Share

ಬೆಂಗಳೂರು: ಕೊರೊನಾ ಸೋಂಕಿತರನ್ನು ಗುಣಪಡಿಸಬೇಕಿದ್ದ ಬೆಂಗಳೂರು ನಗರದ ಕೊವಿಡ್ ಕೇರ್ ಸೆಂಟರ್‌ಗಳು ಈಗ ಐಎಎಸ್ ಮತ್ತು ಕೆಎಸ್ ಅಧಿಕಾರಿಗಳ ನಡುವಿನ ಕಿತ್ತಾಟಕ್ಕೆ ವೇದಿಕೆಯಾಗಿವೆ. ಹಿರಿಯ ಐಎಎಸ್ ಅಧಿಕಾರಿಯ ವಿರುದ್ಧ ಏಳು ಜನ ಪ್ರೊಬೆಷನರಿ ತಹಶಿಲ್ದಾರರು ತಿರುಗಿ ಬಿದ್ದಿದ್ದು, ದೂರು ನೀಡಿದ್ದಾರೆ.

ಬೆಂಗಳೂರಿನ ಕೋವಿಡ್ ಕೇರ್ ಸೆಂಟರ್ ಗಳ ಟಾಸ್ಕ್ ಫೋರ್ಸ್ ಲೀಡರ್ ಪ್ರೊಬೆಷನರಿ ತಹಶೀಲ್ದಾರಗಳಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಬಿಬಿಎಂಪಿ ಆಯುಕ್ತರಿಗೆ ಏಳು ಜನ ಪ್ರೊಬೆಷನರಿ ತಹಶೀಲ್ದಾರರು ದೂರು ನೀಡಿದ್ದಾರೆ. ಟಾಸ್ಕ್ ಫೊರ್ಸ್ ಲೀಡರ್ ಆಗಿರುವ ಐಎಎಸ್ ಅಧಿಕಾರಿ, ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಏಳು ಜನ ಪ್ರೊಬೆಷನರಿ ತಹಶೀಲ್ದಾರರಿಗೆ ನಿಮ್ಮ ಮೇಲೆ ಎಫ್ ಐ ಆರ್ ಹಾಕಿಸ್ತೇನೆ, ಸಸ್ಪೆಂಡ್ ಮಾಡಿಸ್ತೇನೆ ಎಂದು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡುತ್ತಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇಷ್ಟೇ ಅಲ್ಲ ಮಹಿಳಾ ಅಧಿಕಾರಿಗಳ ಜೊತೆ ಹಿರಿಯ ಅಧಿಕಾರಿ ಅನುಚಿತವಾಗಿ ವರ್ತಿಸುತ್ತಿದ್ದಾರೆ. ಡ್ಯೂಟಿಯಲ್ಲಿ ಇರುವ ಬಗ್ಗೆ ಪದೇ ಪದೇ ಸೆಲ್ಫಿ ಕಳುಹಿಸುವಂತೆ ಒತ್ತಡ ಹಾಕ್ತಿದ್ದಾರೆ. ಇದರಿಂದ ನಾವು ಆತ್ಮಸ್ಥೈರ್ಯ ಕಳೆದುಕೊಳ್ಳುತ್ತಿದ್ದೇವೆಂದು ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ.

ಆದ್ರೆ ಕೋವಿಡ್ ಕೇರ್ ಸೆಂಟರ್ ಟಾಸ್ಕ್ ಲೀಡರ್ ರಾಜೇಂದ್ರ ಕುಮಾರ್ ಕಠಾರಿಯಾ ಮಾತ್ರ, ನಾನು ಕೆಲಸ ಮಾಡುವಂತೆ ಹೇಳಿದ್ದೆನೆಯೇ ಹೊರತು. ಬೇರೆನೂ ನನಗೆ ಗೊತ್ತಿಲ್ಲ. ಇನ್ನು ದೂರು ಕೊಟ್ಟಿರುವ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ