ಆಸ್ತಿ ವಿವಾದ, 6 ತಿಂಗಳಿಂದ ದೇಗುಲಕ್ಕೆ ಬೀಗ: ತೆರವಿಗೆ ಮುಂದಾದ ಜಿಲ್ಲಾಡಳಿತ, ಆದರೆ..?

ದಾವಣಗೆರೆ: ಆಸ್ತಿ ವಿವಾದ ಹಿನ್ನೆಲೆ 6 ತಿಂಗಳಿಂದ ದೇವಾಲಯಕ್ಕೆ ಬೀಗ ಹಾಕಲಾಗಿದ್ದು, ಇದೀಗ ದೇವಾಲಯದ ಬಾಗಿಲು ತೆರೆಯಲು ಜಿಲ್ಲಾಡಳಿತ ಮುಂದಾಗಿದೆ. ಆರು ತಿಂಗಳಿಂದ ದೇಗುಲ ಆವರಣದಲ್ಲಿ ಅಶಾಂತಿ ವಾತಾವರಣ ದಾವಣಗೆರೆಯ ಪಿಬಿ ರಸ್ತೆಯಲ್ಲಿರುವ ಬೀರಲಿಂಗೇಶ್ವರ ದೇಗುಲದ ಬಾಗಿಲು ತೆರೆಯಲು ಹಳೇ ಅರ್ಚಕರಿಂದ ವಿರೋಧ ವ್ಯಕ್ತವಾಗಿತ್ತು. ಆದರೆ ಪೂಜೆ ಮಾಡುವಂತೆ ದೇಗುಲದ ಸಮಿತಿ ಆಗ್ರಹಪಡಿಸುತ್ತಿತ್ತು. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಮತ್ತು ಪೊಲೀಸರು ಆಗಮಿಸಿ, ದೇವಾಲಯದ ಬಾಗಿಲು ತೆರೆತಲು ಸಿದ್ಧತೆ ನಡೆಸಿದ್ದಾರೆ. ಪ್ರಕರಣ ಹೈಕೋರ್ಟಿನಲ್ಲಿದೆ.. ಬೇರೆ ಪೂಜಾರಿಯ […]

ಆಸ್ತಿ ವಿವಾದ, 6 ತಿಂಗಳಿಂದ ದೇಗುಲಕ್ಕೆ ಬೀಗ: ತೆರವಿಗೆ ಮುಂದಾದ ಜಿಲ್ಲಾಡಳಿತ, ಆದರೆ..?
ಸಾಧು ಶ್ರೀನಾಥ್​ Edited By:

Updated on: Nov 07, 2020 | 11:36 AM

ದಾವಣಗೆರೆ: ಆಸ್ತಿ ವಿವಾದ ಹಿನ್ನೆಲೆ 6 ತಿಂಗಳಿಂದ ದೇವಾಲಯಕ್ಕೆ ಬೀಗ ಹಾಕಲಾಗಿದ್ದು, ಇದೀಗ ದೇವಾಲಯದ ಬಾಗಿಲು ತೆರೆಯಲು ಜಿಲ್ಲಾಡಳಿತ ಮುಂದಾಗಿದೆ.

ಆರು ತಿಂಗಳಿಂದ ದೇಗುಲ ಆವರಣದಲ್ಲಿ ಅಶಾಂತಿ ವಾತಾವರಣ
ದಾವಣಗೆರೆಯ ಪಿಬಿ ರಸ್ತೆಯಲ್ಲಿರುವ ಬೀರಲಿಂಗೇಶ್ವರ ದೇಗುಲದ ಬಾಗಿಲು ತೆರೆಯಲು ಹಳೇ ಅರ್ಚಕರಿಂದ ವಿರೋಧ ವ್ಯಕ್ತವಾಗಿತ್ತು. ಆದರೆ ಪೂಜೆ ಮಾಡುವಂತೆ ದೇಗುಲದ ಸಮಿತಿ ಆಗ್ರಹಪಡಿಸುತ್ತಿತ್ತು. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಮತ್ತು ಪೊಲೀಸರು ಆಗಮಿಸಿ, ದೇವಾಲಯದ ಬಾಗಿಲು ತೆರೆತಲು ಸಿದ್ಧತೆ ನಡೆಸಿದ್ದಾರೆ.

ಪ್ರಕರಣ ಹೈಕೋರ್ಟಿನಲ್ಲಿದೆ..
ಬೇರೆ ಪೂಜಾರಿಯ ತಂದು ಪೂಜೆ ಆರಂಭಿಸಲು ಜಿಲ್ಲಾಡಳಿತ ಮುಂದಾಗಿದೆ. ಆದರೆ ದೇವಸ್ಥಾನದ ಆಸ್ತಿ ವಿಚಾರವಾಗಿ ಹೈಕೋರ್ಟ್ ನಲ್ಲಿ ಪ್ರಕರಣ ವಿಚಾರಣೆ ಹಂತದಲ್ಲಿದೆ. ಹಾಗಾಗಿ, ದೇವಸ್ಥಾನದ ಬೀಗ ತೆಗೆಯದೇ ಜಿಲ್ಲಾಡಳಿತ ಕಾಯ್ದು ಕುಳಿತಿದೆ. ಇದರಿಂದ ಬೀರಲಿಂಗೇಶ್ವರ ದೇವಾಲಯದ ಬಳಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಎರಡು ಗುಂಪುಗಳಿಂದ ದೇವಸ್ಥಾನದ ಎದುರು ಧರಣಿ ನಡೆದಿದೆ.

Published On - 11:20 am, Sat, 7 November 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us