AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳಂಕಿತ ಆಸ್ತಿ ಜಪ್ತಿ ವಿಚಾರ; ಆಸ್ತಿ ಪತ್ತೆಯಾದ ದಿನದಿಂದ PMLA ಕಾಯ್ದೆ ಅನ್ವಯ: ಹೈಕೋರ್ಟ್

ಅಪರಾಧ ಮೂಲದ ಹಣ ಪ್ರಸರಣೆ ಗಂಭೀರ ವಿಚಾರ ಎಂದು ಹೇಳಿದ ನ್ಯಾಯಪೀಠ ಇದು ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ. ಅನುಸೂಚಿತ ಅಪರಾಧವಿಲ್ಲದಿದ್ದರೂ ಕಳಂಕಿತ ಸಂಪತ್ತು ಜಪ್ತಿ ಮಾಡಲು PMLA ಕಾಯ್ದೆ ಬಳಸಬಹುದು ಎಂದು ಹೈಕೋರ್ಟ್ ಹೇಳಿದೆ.

ಕಳಂಕಿತ ಆಸ್ತಿ ಜಪ್ತಿ ವಿಚಾರ; ಆಸ್ತಿ ಪತ್ತೆಯಾದ ದಿನದಿಂದ PMLA ಕಾಯ್ದೆ ಅನ್ವಯ: ಹೈಕೋರ್ಟ್
ಕರ್ನಾಟಕ ಹೈಕೋರ್ಟ್​
ರಶ್ಮಿ ಕಲ್ಲಕಟ್ಟ
|

Updated on: Dec 31, 2020 | 3:53 PM

Share

ಬೆಂಗಳೂರು: ಕಳಂಕಿತ ಆಸ್ತಿ ಪತ್ತೆಯಾದ ದಿನದಿಂದ PMLA ಕಾಯ್ದೆಯು ಅನ್ವಯ ಎಂದು ಹೈಕೋರ್ಟ್ ಏಕಸದಸ್ಯ ಪೀಠ ಮಹತ್ವದ ತೀರ್ಪು ನೀಡಿದೆ. PMLA ಕಾಯ್ದೆ ಪೂರ್ವಾನ್ವಯ ಪ್ರಶ್ನಿಸಿ ಅವ್ವಾ ಮಾದೇಶ ಸೇರಿ ಹಲವು ಆರೋಪಿಗಳು ಅರ್ಜಿ ಸಲ್ಲಿಸಿದ್ದು, ಜಾರಿ ನಿರ್ದೇಶನಾಲಯದಿಂದ ಆಸ್ತಿ ಜಪ್ತಿ ಪ್ರಶ್ನಿಸಿದ್ದರು.

ಅಪರಾಧ ಮೂಲದ ಹಣವನ್ನು ಪ್ರಸಾರ ಮಾಡುವುದು ಗಂಭೀರ ವಿಚಾರ ಎಂದು ಹೇಳಿದ ನ್ಯಾಯಪೀಠ ಇದು ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ. ಅನುಸೂಚಿತ ಅಪರಾಧವಿಲ್ಲದಿದ್ದರೂ ಕಳಂಕಿತ ಸಂಪತ್ತು ಜಪ್ತಿ ಮಾಡಲು PMLA ಕಾಯ್ದೆ ಬಳಸಬಹುದು. ಕಾಯ್ದೆಯು ಪೂರ್ವಾನ್ವಯವಲ್ಲವೆಂದು ಅಪರಾಧ ಅಳಿಸಿಹೋಗುವುದಿಲ್ಲ ಎಂದು ನ್ಯಾಯಪೀಠವು ಅಭಿಪ್ರಾಯಪಟ್ಟಿತು.

ಅಕ್ರಮ ಆಸ್ತಿಗಳಿಕೆಯನ್ನು ಅಪರಾಧ ಎಂದೇ ಪರಿಗಣಿಸಲಾಗುತ್ತದೆ. ಸಂಪತ್ತಿನ ಮೂಲದ ಬಗ್ಗೆ ಪ್ರಶ್ನೆಗಳು ಉದ್ಭವಿಸಿದಾಗ ಕಳಂಕಿತ ಸಂಪತ್ತು ಪತ್ತೆಯಾದ ದಿನಾಂಕದಿಂದ ಕಾಯ್ದೆ ಅನ್ವಯಿಸಬಹುದು. PMLA ಕಾಯ್ದೆ ಸೆ.3ರಿಂದ ಅನ್ವಯವಾಗಲಿದೆ ಎಂದು ನ್ಯಾ.ಅರವಿಂದ್ ಕುಮಾರ್ ಅವರಿದ್ದ ನ್ಯಾಯಪೀಠವು ತೀರ್ಪು ನೀಡಿದೆ.

ಏನಿದು PMLA ಕಾಯ್ದೆ ?

PMLA (ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ) ಹಣ ವರ್ಗಾವಣೆಯನ್ನು ತಡೆಗಟ್ಟಲು ಮತ್ತು ಹಣ ವರ್ಗಾವಣೆಯಿಂದ ಪಡೆದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಜಾರಿಗೆ ತಂದಿರುವ ಕಾಯ್ದೆಯಾಗಿದೆ. ಇದು 2005, 2009, 2012ರಲ್ಲಿ ತಿದ್ದುಪಡಿಯಾಗಿದೆ.

ಕಣ್ವ ಸಂಸ್ಥೆಯ ನೂರಾರು ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ED

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ