AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳಂಕಿತ ಆಸ್ತಿ ಜಪ್ತಿ ವಿಚಾರ; ಆಸ್ತಿ ಪತ್ತೆಯಾದ ದಿನದಿಂದ PMLA ಕಾಯ್ದೆ ಅನ್ವಯ: ಹೈಕೋರ್ಟ್

ಅಪರಾಧ ಮೂಲದ ಹಣ ಪ್ರಸರಣೆ ಗಂಭೀರ ವಿಚಾರ ಎಂದು ಹೇಳಿದ ನ್ಯಾಯಪೀಠ ಇದು ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ. ಅನುಸೂಚಿತ ಅಪರಾಧವಿಲ್ಲದಿದ್ದರೂ ಕಳಂಕಿತ ಸಂಪತ್ತು ಜಪ್ತಿ ಮಾಡಲು PMLA ಕಾಯ್ದೆ ಬಳಸಬಹುದು ಎಂದು ಹೈಕೋರ್ಟ್ ಹೇಳಿದೆ.

ಕಳಂಕಿತ ಆಸ್ತಿ ಜಪ್ತಿ ವಿಚಾರ; ಆಸ್ತಿ ಪತ್ತೆಯಾದ ದಿನದಿಂದ PMLA ಕಾಯ್ದೆ ಅನ್ವಯ: ಹೈಕೋರ್ಟ್
ಕರ್ನಾಟಕ ಹೈಕೋರ್ಟ್​
ರಶ್ಮಿ ಕಲ್ಲಕಟ್ಟ
|

Updated on: Dec 31, 2020 | 3:53 PM

Share

ಬೆಂಗಳೂರು: ಕಳಂಕಿತ ಆಸ್ತಿ ಪತ್ತೆಯಾದ ದಿನದಿಂದ PMLA ಕಾಯ್ದೆಯು ಅನ್ವಯ ಎಂದು ಹೈಕೋರ್ಟ್ ಏಕಸದಸ್ಯ ಪೀಠ ಮಹತ್ವದ ತೀರ್ಪು ನೀಡಿದೆ. PMLA ಕಾಯ್ದೆ ಪೂರ್ವಾನ್ವಯ ಪ್ರಶ್ನಿಸಿ ಅವ್ವಾ ಮಾದೇಶ ಸೇರಿ ಹಲವು ಆರೋಪಿಗಳು ಅರ್ಜಿ ಸಲ್ಲಿಸಿದ್ದು, ಜಾರಿ ನಿರ್ದೇಶನಾಲಯದಿಂದ ಆಸ್ತಿ ಜಪ್ತಿ ಪ್ರಶ್ನಿಸಿದ್ದರು.

ಅಪರಾಧ ಮೂಲದ ಹಣವನ್ನು ಪ್ರಸಾರ ಮಾಡುವುದು ಗಂಭೀರ ವಿಚಾರ ಎಂದು ಹೇಳಿದ ನ್ಯಾಯಪೀಠ ಇದು ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ. ಅನುಸೂಚಿತ ಅಪರಾಧವಿಲ್ಲದಿದ್ದರೂ ಕಳಂಕಿತ ಸಂಪತ್ತು ಜಪ್ತಿ ಮಾಡಲು PMLA ಕಾಯ್ದೆ ಬಳಸಬಹುದು. ಕಾಯ್ದೆಯು ಪೂರ್ವಾನ್ವಯವಲ್ಲವೆಂದು ಅಪರಾಧ ಅಳಿಸಿಹೋಗುವುದಿಲ್ಲ ಎಂದು ನ್ಯಾಯಪೀಠವು ಅಭಿಪ್ರಾಯಪಟ್ಟಿತು.

ಅಕ್ರಮ ಆಸ್ತಿಗಳಿಕೆಯನ್ನು ಅಪರಾಧ ಎಂದೇ ಪರಿಗಣಿಸಲಾಗುತ್ತದೆ. ಸಂಪತ್ತಿನ ಮೂಲದ ಬಗ್ಗೆ ಪ್ರಶ್ನೆಗಳು ಉದ್ಭವಿಸಿದಾಗ ಕಳಂಕಿತ ಸಂಪತ್ತು ಪತ್ತೆಯಾದ ದಿನಾಂಕದಿಂದ ಕಾಯ್ದೆ ಅನ್ವಯಿಸಬಹುದು. PMLA ಕಾಯ್ದೆ ಸೆ.3ರಿಂದ ಅನ್ವಯವಾಗಲಿದೆ ಎಂದು ನ್ಯಾ.ಅರವಿಂದ್ ಕುಮಾರ್ ಅವರಿದ್ದ ನ್ಯಾಯಪೀಠವು ತೀರ್ಪು ನೀಡಿದೆ.

ಏನಿದು PMLA ಕಾಯ್ದೆ ?

PMLA (ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ) ಹಣ ವರ್ಗಾವಣೆಯನ್ನು ತಡೆಗಟ್ಟಲು ಮತ್ತು ಹಣ ವರ್ಗಾವಣೆಯಿಂದ ಪಡೆದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಜಾರಿಗೆ ತಂದಿರುವ ಕಾಯ್ದೆಯಾಗಿದೆ. ಇದು 2005, 2009, 2012ರಲ್ಲಿ ತಿದ್ದುಪಡಿಯಾಗಿದೆ.

ಕಣ್ವ ಸಂಸ್ಥೆಯ ನೂರಾರು ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ED

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ