ಬೆಳಗಾವಿಯಲ್ಲಿ ಶಿವಸೇನೆಯ ಪುಂಡಾಟ: ಶಿವಾಜಿ ಪ್ರತಿಮೆಯನ್ನು ಸ್ಥಳಾಂತರಿಸಿದ್ದಕ್ಕೆ ಪ್ರತಿಭಟನೆಗೆ ತೀರ್ಮಾನ

ಬೆಳಗಾವಿ: ಗ್ರಾಮದೇವತೆಯ ಜಾತ್ರೆ ವೇಳೆ ಯಾವುದೇ ಸಮಸ್ಯೆ ಎದುರಾಗಬಾರದೆಂದು ಗ್ರಾಮದಲ್ಲಿದ್ದ ಶಿವಾಜಿಯ ಪುತ್ಥಳಿಯನ್ನು ಬೇರೆಡೆ ಸ್ಥಳಾಂತರಿಸಿದಕ್ಕೆ ಶಿವಸೇನೆ ಮುಖಂಡರು ಗ್ರಾಮದಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಜಿಲ್ಲೆಯ ಚಿಕ್ಕೋಡಿಯ ಮನಗುತ್ತಿ ಗ್ರಾಮದಲ್ಲಿ ಶಿವಾಜಿಯ ಪ್ರತಿಮೆಯನ್ನ ಈ ಹಿಂದೆ ಪ್ರತಿಷ್ಠಾಪಿಸಲಾಗಿತ್ತು. ಆದರೆ ಗ್ರಾಮದಲ್ಲಿ ಮುಂದಿನವಾರ ಗ್ರಾಮದೇವತೆಯ ಜಾತ್ರೆನಡೆಯಲಿದ್ದು ಈ ವೇಳೆ ಯಾವುದೇ ತೊಂದರೆಯಾಗಬಾರದೆಂದು ಶಿವಾಜಿಯ ಪುತ್ಥಳಿಯನ್ನು ಬೇರೆಡೆಗೆ ಸ್ಥಳಾಂತರಿಸಲು ಗ್ರಾಮದ ಹಿರಿಯರು ಹಾಗೂ ಮರಾಠ ಮುಖಂಡರೆಲ್ಲಾ ಸೇರಿ ನಿರ್ಧಾರಿಸಿದ್ದರು. ಆದರೆ, ಈ ವಿಚಾರ ತಿಳಿದ ನೆರೆಯ ಮಹಾರಾಷ್ಟ್ರದ ಶಿವಸೇನೆ ಮುಖಂಡರು […]

ಬೆಳಗಾವಿಯಲ್ಲಿ ಶಿವಸೇನೆಯ ಪುಂಡಾಟ: ಶಿವಾಜಿ ಪ್ರತಿಮೆಯನ್ನು ಸ್ಥಳಾಂತರಿಸಿದ್ದಕ್ಕೆ ಪ್ರತಿಭಟನೆಗೆ ತೀರ್ಮಾನ
ಸಾಧು ಶ್ರೀನಾಥ್​ Edited By:

Updated on: Aug 09, 2020 | 2:40 PM

ಬೆಳಗಾವಿ: ಗ್ರಾಮದೇವತೆಯ ಜಾತ್ರೆ ವೇಳೆ ಯಾವುದೇ ಸಮಸ್ಯೆ ಎದುರಾಗಬಾರದೆಂದು ಗ್ರಾಮದಲ್ಲಿದ್ದ ಶಿವಾಜಿಯ ಪುತ್ಥಳಿಯನ್ನು ಬೇರೆಡೆ ಸ್ಥಳಾಂತರಿಸಿದಕ್ಕೆ ಶಿವಸೇನೆ ಮುಖಂಡರು ಗ್ರಾಮದಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ಜಿಲ್ಲೆಯ ಚಿಕ್ಕೋಡಿಯ ಮನಗುತ್ತಿ ಗ್ರಾಮದಲ್ಲಿ ಶಿವಾಜಿಯ ಪ್ರತಿಮೆಯನ್ನ ಈ ಹಿಂದೆ ಪ್ರತಿಷ್ಠಾಪಿಸಲಾಗಿತ್ತು. ಆದರೆ ಗ್ರಾಮದಲ್ಲಿ ಮುಂದಿನವಾರ ಗ್ರಾಮದೇವತೆಯ ಜಾತ್ರೆನಡೆಯಲಿದ್ದು ಈ ವೇಳೆ ಯಾವುದೇ ತೊಂದರೆಯಾಗಬಾರದೆಂದು ಶಿವಾಜಿಯ ಪುತ್ಥಳಿಯನ್ನು ಬೇರೆಡೆಗೆ ಸ್ಥಳಾಂತರಿಸಲು ಗ್ರಾಮದ ಹಿರಿಯರು ಹಾಗೂ ಮರಾಠ ಮುಖಂಡರೆಲ್ಲಾ ಸೇರಿ ನಿರ್ಧಾರಿಸಿದ್ದರು.

ಆದರೆ, ಈ ವಿಚಾರ ತಿಳಿದ ನೆರೆಯ ಮಹಾರಾಷ್ಟ್ರದ ಶಿವಸೇನೆ ಮುಖಂಡರು ಗ್ರಾಮದಲ್ಲಿ ಶಾಂತಿ ಕದಡಲು ತಯಾರಿ ನಡೆಸಿದ್ದು, ಮುಂದಿನ ಸೋಮವಾರ ಮನಗುತ್ತಿ ಚಲೋ ಎಂದು ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.

ಇದರಿಂದಾಗಿ ಗ್ರಾಮದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ. ಯಾವುದೇ ಕಾರಣಕ್ಕೂ ಅಹಿತಕರ ಘಟನೆ ಸಂಭವಿಸಬಾರದೆಂದು ಮುಂಜಾಗ್ರತಾ ಕ್ರಮವಾಗಿ ನೂರಕ್ಕೂ ಹೆಚ್ಚು ಪೊಲೀಸರನ್ನು ಗ್ರಾಮದಲ್ಲಿ ನಿಯೋಜಿಸಲಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us