ಹುಬ್ಬಳ್ಳಿ: ಕೆಲ ದಿನಗಳ ಹಿಂದೆ ಸುರಿದ ಭಾರಿ ಮಳೆಗೆ ರಸ್ತೆಗಳು ಹದಗೆಟ್ಟಿರುವ ಹಿನ್ನೆಲೆ, ಹುಬ್ಬಳ್ಳಿಯ ಕಾಂಗ್ರೆಸ್ ಪಕ್ಷದ ಯುವ ಕಾರ್ಯಕರ್ತರು ಸ್ಥಳೀಯ ಶಾಸಕ, ಸಚಿವ ಜಗದೀಶ್ ಶೆಟ್ಟರ್ ಮೆನೆ ಎದುರು ಭತ್ತದ ನಾಟಿ ಮಾಡಿ ಆಕ್ರೋಶ ಹೊರಹಾಕಿದ್ದಾರೆ.
ಭಾರಿ ಮಳೆಯಿಂದಾಗಿ ಹುಬ್ಬಳ್ಳಿಯ ಕೇಶ್ವಾಪುರದ ರಸ್ತೆಗಳು ಕೆಸರು ಗದ್ದೆಯಂತಾಗಿದೆ. ದುರಸ್ಥಿ ಮಾಡಿಸದ ಬೃಹತ್ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಮನೆಯ ಅಕ್ಕಪಕ್ಕದ ರಸ್ತೆಯಲ್ಲಿ ಹುಬ್ಬಳ್ಳಿಯ ಕೈ ಯುವ ಕಾರ್ಯಕರ್ತರು ಹೀಗೆ ಭತ್ತ ನಾಟಿ ಮಾಡಿದ್ದಾರೆ.
Published On - 1:04 pm, Wed, 26 August 20