ನೂರಾರು ಜನರೊಂದಿಗೆ ಠಾಣೆಯಲ್ಲೇ ಲೇಡಿ PSI ಬರ್ತಡೇ ಸಂಭ್ರಮ, ಎಲ್ಲಿ?

ಯಾದಗಿರಿ: ಕೊರೊನಾ ಸೋಂಕು ರಾಜ್ಯದಲ್ಲಿ ದಿನೇ ದಿನೇ ಏರುತ್ತಲೇ ಇದ್ದು, ಈ ಸಮಯದಲ್ಲಿ ಸಮಾಜಕ್ಕೆ ಮಾರ್ಗದರ್ಶಕರಾಗಬೇಕಿದ್ದ ಪೊಲೀಸರೆ ಸಾಮಾಜಿಕ ಜವಾಬ್ದಾರಿ ಮರೆತು, ನೂರಾರು ಜನರೊಂದಿಗೆ ಸೇರಿ ಜನ್ಮದಿನ ಆಚರಿಸಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. ಯಾದಗಿರಿ ನಗರದ ಪೊಲೀಸ್ ಠಾಣೆಯಲ್ಲಿ PSI ಸೌಮ್ಯ ಅವರ ಜನ್ಮ ದಿನಾಚರಣೆಯನ್ನು, ಮಾಸ್ಕ್ ದರಿಸದೆ, ಸಾಮಾಜಿಕ ಅಂತರ ಮರೆತು ನೂರಾರು ಜನ ಸೇರಿ ಆಚರಣೆ ಮಾಡಿರುವ ಘಟನೆ ತಡರಾತ್ರಿ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಈ ವಿಚಾರವಾಗಿ ಈಗ ಸಾರ್ವಜನಿಕರಿಂದ ತೀವ್ರ ಆಕ್ರೋಶ […]

ನೂರಾರು ಜನರೊಂದಿಗೆ ಠಾಣೆಯಲ್ಲೇ ಲೇಡಿ PSI ಬರ್ತಡೇ ಸಂಭ್ರಮ, ಎಲ್ಲಿ?

Updated on: Aug 03, 2020 | 6:22 PM

ಯಾದಗಿರಿ: ಕೊರೊನಾ ಸೋಂಕು ರಾಜ್ಯದಲ್ಲಿ ದಿನೇ ದಿನೇ ಏರುತ್ತಲೇ ಇದ್ದು, ಈ ಸಮಯದಲ್ಲಿ ಸಮಾಜಕ್ಕೆ ಮಾರ್ಗದರ್ಶಕರಾಗಬೇಕಿದ್ದ ಪೊಲೀಸರೆ ಸಾಮಾಜಿಕ ಜವಾಬ್ದಾರಿ ಮರೆತು, ನೂರಾರು ಜನರೊಂದಿಗೆ ಸೇರಿ ಜನ್ಮದಿನ ಆಚರಿಸಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.

ಯಾದಗಿರಿ ನಗರದ ಪೊಲೀಸ್ ಠಾಣೆಯಲ್ಲಿ PSI ಸೌಮ್ಯ ಅವರ ಜನ್ಮ ದಿನಾಚರಣೆಯನ್ನು, ಮಾಸ್ಕ್ ದರಿಸದೆ, ಸಾಮಾಜಿಕ ಅಂತರ ಮರೆತು ನೂರಾರು ಜನ ಸೇರಿ ಆಚರಣೆ ಮಾಡಿರುವ ಘಟನೆ ತಡರಾತ್ರಿ ಪೊಲೀಸ್ ಠಾಣೆಯಲ್ಲಿ ನಡೆದಿದೆ.

ಈ ವಿಚಾರವಾಗಿ ಈಗ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ, ಜೊತೆಗೆ ಸಾಮಾನ್ಯ ಜನರಿಗೆ ಒಂದು ನ್ಯಾಯ, ಅಧಿಕಾರಿಗಳಿಗೆ ಒಂದು ನ್ಯಾಯ ಎಂದು ಪೊಲೀಸರ ವಿರುದ್ಧ ಕಿಡಿಕಾರುತ್ತಿದ್ದಾರೆ.

ಹಾಗೂ ಸಾಮಾಜಿಕ ಜವಾಬ್ದಾರಿ ಮರೆತು ದೈಹಿಕ ಅಂತರವಿಲ್ಲದೆ ಜನ್ಮದಿನ ಆಚರಣೆ ಮಾಡಿದ ಪೊಲೀಸ್ ಸಿಬ್ಬಂದಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ವಿನಂತಿ ಮಾಡಿದ್ದಾರೆ.

Published On - 6:21 pm, Mon, 3 August 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
Follow Us