
ಯಾದಗಿರಿ: ಕೊರೊನಾ ಸೋಂಕು ರಾಜ್ಯದಲ್ಲಿ ದಿನೇ ದಿನೇ ಏರುತ್ತಲೇ ಇದ್ದು, ಈ ಸಮಯದಲ್ಲಿ ಸಮಾಜಕ್ಕೆ ಮಾರ್ಗದರ್ಶಕರಾಗಬೇಕಿದ್ದ ಪೊಲೀಸರೆ ಸಾಮಾಜಿಕ ಜವಾಬ್ದಾರಿ ಮರೆತು, ನೂರಾರು ಜನರೊಂದಿಗೆ ಸೇರಿ ಜನ್ಮದಿನ ಆಚರಿಸಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.
ಈ ವಿಚಾರವಾಗಿ ಈಗ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ, ಜೊತೆಗೆ ಸಾಮಾನ್ಯ ಜನರಿಗೆ ಒಂದು ನ್ಯಾಯ, ಅಧಿಕಾರಿಗಳಿಗೆ ಒಂದು ನ್ಯಾಯ ಎಂದು ಪೊಲೀಸರ ವಿರುದ್ಧ ಕಿಡಿಕಾರುತ್ತಿದ್ದಾರೆ.
ಹಾಗೂ ಸಾಮಾಜಿಕ ಜವಾಬ್ದಾರಿ ಮರೆತು ದೈಹಿಕ ಅಂತರವಿಲ್ಲದೆ ಜನ್ಮದಿನ ಆಚರಣೆ ಮಾಡಿದ ಪೊಲೀಸ್ ಸಿಬ್ಬಂದಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ವಿನಂತಿ ಮಾಡಿದ್ದಾರೆ.
Published On - 6:21 pm, Mon, 3 August 20