AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕು ನಡುವೆಯೂ ನಿಲ್ಲದ ಶ್ರೀಗಳ ವ್ರತ, ಪೂಜೆ

ಉಡುಪಿ: ಇತಿಹಾಸ ಪ್ರಸಿದ್ಧ ಅಷ್ಟ ಮಠಗಳಲ್ಲಿ ಒಂದಾದ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಗಳು ಸದ್ಯ ಕೋವಿಡ್-19 ನಿಂದ ಬಳಲುತ್ತಿದ್ದಾರೆ. ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶ್ರೀಗಳು ಚಿಕಿತ್ಸೆಯ ಜೊತೆಗೆ ತಮ್ಮ ನಿರಂತರ ಅನುಷ್ಠಾನಗಳಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಅಷ್ಟಮಠದ ಯತಿಗಳು ತಮ್ಮ ಯತಿಧರ್ಮದ ಪಾಲನೆಗೆ ವಿಶೇಷ ಮಹತ್ವ ನೀಡುತ್ತಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗಲೂ ನಿತ್ಯ ಜಪ, ಅನುಷ್ಠಾನಗಳಲ್ಲಿ ಪುತ್ತಿಗೆ ಶ್ರೀಗಳು ತೊಡಗಿಸಿಕೊಂಡಿರುವುದು ಸದ್ಯ ಭಕ್ತರ ಗಮನ ಸೆಳೆದಿದೆ. ಉಡುಪಿ ಮಾತ್ರವಲ್ಲ ಅಮೆರಿಕ ಸೇರಿದಂತೆ ಹಲವಾರು […]

ಕೊರೊನಾ ಸೋಂಕು ನಡುವೆಯೂ ನಿಲ್ಲದ ಶ್ರೀಗಳ ವ್ರತ, ಪೂಜೆ
KUSHAL V
| Edited By: |

Updated on:Jul 26, 2020 | 2:13 AM

Share

ಉಡುಪಿ: ಇತಿಹಾಸ ಪ್ರಸಿದ್ಧ ಅಷ್ಟ ಮಠಗಳಲ್ಲಿ ಒಂದಾದ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಗಳು ಸದ್ಯ ಕೋವಿಡ್-19 ನಿಂದ ಬಳಲುತ್ತಿದ್ದಾರೆ. ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶ್ರೀಗಳು ಚಿಕಿತ್ಸೆಯ ಜೊತೆಗೆ ತಮ್ಮ ನಿರಂತರ ಅನುಷ್ಠಾನಗಳಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಅಷ್ಟಮಠದ ಯತಿಗಳು ತಮ್ಮ ಯತಿಧರ್ಮದ ಪಾಲನೆಗೆ ವಿಶೇಷ ಮಹತ್ವ ನೀಡುತ್ತಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗಲೂ ನಿತ್ಯ ಜಪ, ಅನುಷ್ಠಾನಗಳಲ್ಲಿ ಪುತ್ತಿಗೆ ಶ್ರೀಗಳು ತೊಡಗಿಸಿಕೊಂಡಿರುವುದು ಸದ್ಯ ಭಕ್ತರ ಗಮನ ಸೆಳೆದಿದೆ.

ಉಡುಪಿ ಮಾತ್ರವಲ್ಲ ಅಮೆರಿಕ ಸೇರಿದಂತೆ ಹಲವಾರು ದೇಶಗಳಲ್ಲಿ ಶಾಖಾ ಮಠಗಳನ್ನು ಹೊಂದಿರುವ ಪುತ್ತಿಗೆ ಮಠದ ಶ್ರೀಗಳು ಈ ಬಾರಿ ಉಡುಪಿಯಲ್ಲೇ ಚಾತುರ್ಮಾಸ್ಯ ವ್ರತ ಕೈಗೊಂಡಿದ್ದರು. ವ್ರತಸ್ಥರಾಗಿದ್ದ ವೇಳೆ ಸ್ವಾಮೀಜಿಗೆ ಜ್ವರ ಮತ್ತು ಶೀತದ ಲಕ್ಷಣಗಳು ಕಂಡು ಬಂದಿದ್ದು ಪರೀಕ್ಷೆಗೆ ಒಳಗಾಗಿದ್ದರು.

ಇದೀಗ ಪಾಸಿಟಿವ್ ಬಂದ ಬಳಿಕ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ವಾಮೀಜಿ ಪೂಜೆ, ಜಪ ಮತ್ತು ಅನುಷ್ಠಾನಗಳಲ್ಲಿ ತೊಡಗಿರುವ ಫೋಟೋ ಭಕ್ತರಿಗೆ ಕೊಂಚ ನೆಮ್ಮದಿ ನೀಡಿದೆ. ಶ್ರೀಗಳು ಬೇಗ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಭಕ್ತರು ಹಾರೈಸುತ್ತಿದ್ದಾರೆ. -ಹರೀಶ್ ಪಾಲೆಚ್ಚಾರ್

Published On - 4:07 pm, Sat, 25 July 20

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?