AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಸಿಕ್ಸ್​​ ಸ್ಕ್ರೀನ್ ಮಲ್ಟಿಪ್ಲೆಕ್ಸ್ ಆರಂಭಿಸಲಿದೆ ಪಿವಿಆರ್ ಸಿನಿಮಾಸ್

ಪಿವಿಆರ್ ಸಿನಿಮಾಸ್​​ನಿಂದ ಕರ್ನಾಟಕದ ಮೈಸೂರಿನಲ್ಲಿ ಆರು ಸ್ಕ್ರೀನ್ ಮಲ್ಟಿಪ್ಲೆಕ್ಸ್ ಆರಂಭಿಸಲಾಗುವುದು ಎಂದು ಶುಕ್ರವಾರ ಘೋಷಣೆ ಮಾಡಿದೆ ಎಂದು ಪಿಟಿಐ ಸುದ್ದಿ ಸಂಸ್ಥೆಯು ವರದಿ ಮಾಡಿದೆ.

ಮೈಸೂರಿನಲ್ಲಿ ಸಿಕ್ಸ್​​ ಸ್ಕ್ರೀನ್ ಮಲ್ಟಿಪ್ಲೆಕ್ಸ್ ಆರಂಭಿಸಲಿದೆ ಪಿವಿಆರ್ ಸಿನಿಮಾಸ್
ಸಾಂದರ್ಭಿಕ ಚಿತ್ರ
Srinivas Mata
| Updated By: ಸಾಧು ಶ್ರೀನಾಥ್​|

Updated on: Mar 05, 2021 | 3:24 PM

Share

ಕರ್ನಾಟಕದ ಮೈಸೂರಿನಲ್ಲಿ ಆರು- ತೆರೆಯ ಹೊಸ ಮಲ್ಟಿಪ್ಲೆಕ್ಸ್ ಆರಂಭ ಮಾಡುವುದಾಗಿ ಶುಕ್ರವಾರ ಪಿವಿಆರ್ ಘೋಷಣೆ ಮಾಡಿದೆ. “ಈ ಮೂಲಕವಾಗಿ 109 ತೆರೆ, 16 ಆಸ್ತಿಗಳನ್ನು ಹೊಂದಿದಂತಾಗುತ್ತದೆ. ಪಿವಿಆರ್ ಸಿನಿಮಾಸ್ ಕರ್ನಾಟಕದಲ್ಲಿ ತನ್ನ ಅಸ್ತಿತ್ವವನ್ನು ಮತ್ತಷ್ಟು ಬಲಪಡಿಸಿಕೊಳ್ಳುತ್ತದೆ. ಮತ್ತು ದಕ್ಷಿಣದಲ್ಲಿ 47 ಸ್ಥಳಗಳಲ್ಲಿ 292 ತೆರೆಗಳನ್ನು ಹೊಂದಿದೆ. ಮೈಸೂರಿನಲ್ಲಿ 32,240 ಚದರಡಿ ವ್ಯಾಪ್ತಿಯಲ್ಲಿ ಪಿವಿಆರ್ ಸಿನಿಮಾಸ್ ತಲೆ ಎತ್ತಲಿದೆ. ಇದರಲ್ಲಿ 1078 ವೀಕ್ಷಕರಿಗೆ ಸ್ಥಳಾವಕಾಶ ಇರಲಿದೆ,” ಎಂದು ಕಂಪೆನಿಯ ಹೇಳಿಕೆಯಲ್ಲಿ ತಿಳಿಸಲಾಗಿದೆ ಎಂಬುದನ್ನು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಪಿವಿಆರ್  ಕಂಪನಿ ಹೇಳಿಕೆಯ ಪ್ರಕಾರ, ಮೈಸೂರಿನಲ್ಲಿ ಸ್ಥಾಪಿಸುವ  ಮಲ್ಟಿಪ್ಲೆಕ್ಸ್ ನಲ್ಲಿ ಆಧುನಿಕ ಸಿನಿಮಾ ತಂತ್ರಜ್ಞಾನವನ್ನು ಬಳಸಿಕೊಳ್ಳಲಾಗುತ್ತದೆ. ಈ ಭಾಗದಲ್ಲಿ ಸಿನಿಮಾಗೆ ಹೋಗುವವರಿಗೆ ಅದ್ಭುತ ಅನುಭೂತಿ ಒದಗಿಸಲಾಗುತ್ತದೆ. ಸ್ವಚ್ಛ, ಸುರಕ್ಷಿತ ಮತ್ತು ಒಟ್ಟಾರೆ ಸಿನಿಮಾ ವೀಕ್ಷಣೆ ಅನುಭವವನ್ನು ಕಟ್ಟಿಕೊಡುವಂತೆ ಇದನ್ನು ರೂಪಿಸಲಾಗಿದೆ. ಈ ಹೊಸ ಮಲ್ಟಿಪ್ಲೆಕ್ಸ್ ಹೊಸ ತಲೆಮಾರಿನ ತಂತ್ರಜ್ಞಾನದೊಂದಿಗೆ ಅತ್ಯಾಧುನಿಕವಾಗಿ ಸುಂದರ ರೂಪದಲ್ಲಿ ತಲೆ ಎತ್ತಲಿದೆ ಎನ್ನಲಾಗಿದೆ.

ಪಿವಿಆರ್ ಲಿಮಿಟೆಡ್ ಜಂಟಿ ಕಾರ್ಯನಿರ್ವಹಣಾ ನಿರ್ದೇಶಕ ಸಂಜೀವ್ ಕುಮಾರ್ ಬಿಜಿಲಿ ಮಾತನಾಡಿ, ದಕ್ಷಿಣವು ನಮ್ಮ ಪಾಲಿಗೆ ಬಹಳ ಮುಖ್ಯವಾದ ಮಾರುಕಟ್ಟೆ. ದೊಡ್ಡ ಪ್ರಮಾಣದಲ್ಲಿ ತೆರೆಯನ್ನು ಹೊಂದಿದ್ದು, ವೀಕ್ಷಕರಲ್ಲಿ ಸಿನಿಮಾ ನೋಡುವ ಪ್ರೀತಿ ಉತ್ಕಟವಾಗಿದೆ. ಆದ್ದರಿಂದ ಈ ಭಾಗದಲ್ಲಿ ವಿಸ್ತರಣೆ ಮಾಡುತ್ತಿದ್ದೇವೆ. ಕಂಪನಿಯ ವಿಸ್ತರಣೆ ಯೋಜನೆಯ ಭಾಗವಾಗಿ ಮೈಸೂರಿನಲ್ಲಿ ಅತಿ ದೊಡ್ಡ ಮಲ್ಟಿಪ್ಲೆಕ್ಸ್ ಪರಿಚಯಿಸುತ್ತಿದ್ದೇವೆ. ಮನರಂಜನೆಯಲ್ಲಿ ಅತ್ಯುತ್ತಮವಾದದ್ದನ್ನು ಒದಗಿಸುತ್ತಿದ್ದು, ನಮ್ಮ ಪ್ರೇಕ್ಷಕರಿಗೆ ವಿಸ್ತೃತ ಅನುಭವ ಮಾಡಿಕೊಡುತ್ತಿದ್ದೇವೆ ಎಂದಿದ್ದಾರೆ. ಈ ಆರಂಭದೊಂದಿಗೆ ಭಾರತ ಮತ್ತು ಶ್ರೀಲಂಕಾ ಸೇರಿ ಪಿವಿಆರ್​ನಿಂದ 71 ನಗರಗಳಲ್ಲಿ 177 ಸ್ಥಳಗಳಲ್ಲಿ 844 ತೆರೆಗಳನ್ನು ನಡೆಸಿದಂತಾಗುತ್ತದೆ.

ಕೋವಿಡ್- 19 ಬಿಕ್ಕಟ್ಟಿನಿಂದ ಅತಿ ದೊಡ್ಡ ಪೆಟ್ಟು ಬಿದ್ದಿದ್ದರಲ್ಲಿ ಮಲ್ಟಿಪ್ಲೆಕ್ಸ್​ಗಳೂ ಒಂದು. ಕೋವಿಡ್-19 ಸುರಕ್ಷಾ ಕ್ರಮಗಳೊಂದಿಗೆ ಪೂರ್ಣ ಪ್ರಮಾಣದಲ್ಲಿ ಕಾರ್ಯ ನಿರ್ವಹಿಸುವುದಕ್ಕೆ ಫೆಬ್ರವರಿ 1, 2021ರಿಂದ ಸರ್ಕಾರ ದೇಶಾದ್ಯಂತ ಅನುವು ಮಾಡಿಕೊಟ್ಟಿದೆ.

ಇದನ್ನೂ ಓದಿ: Tata Group Founders Day: ಹೂಡಿಕೆದಾರರಿಗೆ ಅದ್ಭುತ ಲಾಭ ಮೊಗೆದುಕೊಟ್ಟ ಟಾಟಾ ಸಮೂಹ ಕಂಪೆನಿಗಳು

ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ