AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರ ಕಡಿಯುವಾಗ ಬಿದ್ದು, ಚಿಕಿತ್ಸೆ ಸಿಗದೇ ಸಾವನ್ನಪ್ಪಿದ PWD ಗುತ್ತಿಗೆ ನೌಕರ

ಗದಗ: ಸರ್ಕಾರಿ ಕಚೆರಿಯ ಆವರಣದಲ್ಲಿದ್ದ ಮರ ಕಡಿಯುವಾಗ ಬಿದ್ದು ಗಾಯಗೊಂಡಿದ್ದ ಗುತ್ತಿಗೆ ನೌಕರನಿಗೆ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೆ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಗದಗದಲ್ಲಿ ಸಂಭವಿಸಿದೆ. ಕರ್ನಾಟಕ ಸರ್ಕಾರದ ಪಿಡಬ್ಲುಡಿ ಇಲಾಖೆಯ ಆವರಣದಲ್ಲಿದ್ದ ಮರ ಕಡಿಯುವಾಗ ಗುತ್ತಿಗೆ ನೌಕರನೊಬ್ಬ ಮೇಲಿಂದ ಕೆಳಗೆ ಬಿದ್ದಿದ್ದಾನೆ. ಹೀಗೆ ಬಿದ್ದು ಗಂಭೀರ ಗಾಯಗೊಂಡ ಸಿಬ್ಬಂದಿ ನೋವಿನಿಂದ ಒದ್ದಾಡುತ್ತಿದ್ರೆ ಸಕಾಲಕ್ಕೆ ಆ್ಯಂಬುಲೆನ್ಸ್ ಬಂದಿಲ್ಲ. ಪಿಡ್ಲ್ಯೂಡಿ ಇಲಾಖೆ ಅಧಿಕಾರಿಗಳು ಕೂಡಾ ಘಟನೆ ಬಳಿಕ ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿಲ್ಲ. ಹಾಗೂ ಹೀಗೂ ಮಾಡಿ […]

ಮರ ಕಡಿಯುವಾಗ ಬಿದ್ದು, ಚಿಕಿತ್ಸೆ ಸಿಗದೇ ಸಾವನ್ನಪ್ಪಿದ PWD ಗುತ್ತಿಗೆ ನೌಕರ
Guru
| Updated By: ಸಾಧು ಶ್ರೀನಾಥ್​|

Updated on: Aug 11, 2020 | 3:20 PM

Share

ಗದಗ: ಸರ್ಕಾರಿ ಕಚೆರಿಯ ಆವರಣದಲ್ಲಿದ್ದ ಮರ ಕಡಿಯುವಾಗ ಬಿದ್ದು ಗಾಯಗೊಂಡಿದ್ದ ಗುತ್ತಿಗೆ ನೌಕರನಿಗೆ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೆ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಗದಗದಲ್ಲಿ ಸಂಭವಿಸಿದೆ.

ಕರ್ನಾಟಕ ಸರ್ಕಾರದ ಪಿಡಬ್ಲುಡಿ ಇಲಾಖೆಯ ಆವರಣದಲ್ಲಿದ್ದ ಮರ ಕಡಿಯುವಾಗ ಗುತ್ತಿಗೆ ನೌಕರನೊಬ್ಬ ಮೇಲಿಂದ ಕೆಳಗೆ ಬಿದ್ದಿದ್ದಾನೆ. ಹೀಗೆ ಬಿದ್ದು ಗಂಭೀರ ಗಾಯಗೊಂಡ ಸಿಬ್ಬಂದಿ ನೋವಿನಿಂದ ಒದ್ದಾಡುತ್ತಿದ್ರೆ ಸಕಾಲಕ್ಕೆ ಆ್ಯಂಬುಲೆನ್ಸ್ ಬಂದಿಲ್ಲ. ಪಿಡ್ಲ್ಯೂಡಿ ಇಲಾಖೆ ಅಧಿಕಾರಿಗಳು ಕೂಡಾ ಘಟನೆ ಬಳಿಕ ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿಲ್ಲ.

ಹಾಗೂ ಹೀಗೂ ಮಾಡಿ ಕೆಲ ಹೊತ್ತಿನ ನಂತರ ಗದಗ ನಗರದಲ್ಲಿ ಚಿಕಿತ್ಸೆಗಾಗಿ ಸುತ್ತಾಡಿದ್ರೂ ಯಾವುದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಕ್ಕಿಲ್ಲ. ಗದಗದ ಜಿಮ್ಸ್ ಆಸ್ಪತ್ರೆಯಲ್ಲೂ ದಾಖಲು ಮಾಡಿಕೊಂಡಿಲ್ಲ, ಬದಲು ಪ್ರಾಥಮಿಕ ಚಿಕಿತ್ಸೆ ನೀಡಿ ಸಾಗ ಹಾಕಿದ್ದಾರೆ ಅಲ್ಲಿನ ಸಿಬ್ಬಂದಿ.

ಗದಗನಲ್ಲಿ ಚಿಕಿತ್ಸೆ ಸಿಗದೇ ಅನಿವಾರ್ಯವಾಗಿ ಆತನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ತೆಗೆದುಕೊಂಡು ಹೋಗಿ ದಾಖಲಿಸಲಾಗಿದೆ. ಆದ್ರೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಗುತ್ತಿಗೆ ನೌಕರ ಸಾವನ್ನಪ್ಪಿದ್ದಾನೆ. ಆತನ ಕುಟುಂಬ ವರ್ಗ ಮತ್ತು ಸ್ಥಳದಲ್ಲಿದ್ದವರು ಸಕಾಲಕ್ಕೆ ಗದಗದಲ್ಲೇ ಚಿಕಿತ್ಸೆ ನೀಡಿದ್ದರೆ ಆತ ಬದುಕುತ್ತಿದ್ದ ಎಂದು ಕಣ್ಣೀರು ಹಾಕುತ್ತಿದ್ದಾರೆ.

ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್
ಊರಿಗೆ ರಸ್ತೆಗಿಂತ ಬಡವನ ಹೊಟ್ಟೆಗೆ ಅನ್ನ ಮತ್ತು ಮೈಗೆ ಬಟ್ಟೆ ಮುಖ್ಯ: ಸವದಿ
ಊರಿಗೆ ರಸ್ತೆಗಿಂತ ಬಡವನ ಹೊಟ್ಟೆಗೆ ಅನ್ನ ಮತ್ತು ಮೈಗೆ ಬಟ್ಟೆ ಮುಖ್ಯ: ಸವದಿ
ಇವತ್ತು ಸಿದ್ದೇಶ್ವರ ಹುಟ್ಟುಹಬ್ಬ, ವಿಶ್ ಮಾಡಲು ಬಂದಿದ್ದೇವೆ: ಹರೀಶ್
ಇವತ್ತು ಸಿದ್ದೇಶ್ವರ ಹುಟ್ಟುಹಬ್ಬ, ವಿಶ್ ಮಾಡಲು ಬಂದಿದ್ದೇವೆ: ಹರೀಶ್