ಕೊಳ್ಳೇಗಾಲದ ಜೋಳದ ಗದ್ದೆಯಲ್ಲಿ ಭಾರಿ ಗಾತ್ರದ ಹೆಬ್ಬಾವು ಪತ್ತೆ
ಚಾಮರಾಜನಗರ: ಜಿಲ್ಲೆಯ ಜಮೀನಿನಲ್ಲಿ ಪತ್ತೆಯಾದ ಭಾರಿ ಗಾತ್ರದ ಹೆಬ್ಬಾವೊಂದನ್ನು ಉರಗ ತಜ್ಞರು ರಕ್ಷಿಸಿ ಸುರಕ್ಷಿತವಾಗಿ ಕಾಡಿನಲ್ಲಿ ಬಿಡುಗಡೆ ಮಾಡಿದ್ದಾರೆ. ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮಧುವನ ಹಳ್ಳಿಯ ಕೃಷ್ಣ ಎಂಬುವವರ ಜಮೀನಿನಲ್ಲಿ ಭಾರಿ ಗಾತ್ರದ ಹೆಬ್ಬಾವು ಒಂದು ಸೇರಿಕೊಂಡಿತ್ತು. ಕೂಡಲೇ ಉರಗ ತಜ್ಞ ಮಧು ಎಂಬುವವರಿಗೆ ಕೃಷ್ಣ ಈ ವಿಚಾರ ತಿಳಿಸಿದ್ದಾರೆ. ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಮಧು ಮತ್ತು ಸಂಗಡಿಗರು ಹೆಬ್ಬಾವನ್ನು ರಕ್ಷಿಸಿ, ಸುರಕ್ಷಿತವಾಗಿ ಕಾಡಿನಲ್ಲಿ ಬಿಡುಗಡೆ ಮಾಡಿದ್ದಾರೆ. ಉರಗ ತಜ್ಞ ಮಧು ಮತ್ತು ಅವರ […]

ಚಾಮರಾಜನಗರ: ಜಿಲ್ಲೆಯ ಜಮೀನಿನಲ್ಲಿ ಪತ್ತೆಯಾದ ಭಾರಿ ಗಾತ್ರದ ಹೆಬ್ಬಾವೊಂದನ್ನು ಉರಗ ತಜ್ಞರು ರಕ್ಷಿಸಿ ಸುರಕ್ಷಿತವಾಗಿ ಕಾಡಿನಲ್ಲಿ ಬಿಡುಗಡೆ ಮಾಡಿದ್ದಾರೆ.
ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮಧುವನ ಹಳ್ಳಿಯ ಕೃಷ್ಣ ಎಂಬುವವರ ಜಮೀನಿನಲ್ಲಿ ಭಾರಿ ಗಾತ್ರದ ಹೆಬ್ಬಾವು ಒಂದು ಸೇರಿಕೊಂಡಿತ್ತು. ಕೂಡಲೇ ಉರಗ ತಜ್ಞ ಮಧು ಎಂಬುವವರಿಗೆ ಕೃಷ್ಣ ಈ ವಿಚಾರ ತಿಳಿಸಿದ್ದಾರೆ.
ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಮಧು ಮತ್ತು ಸಂಗಡಿಗರು ಹೆಬ್ಬಾವನ್ನು ರಕ್ಷಿಸಿ, ಸುರಕ್ಷಿತವಾಗಿ ಕಾಡಿನಲ್ಲಿ ಬಿಡುಗಡೆ ಮಾಡಿದ್ದಾರೆ. ಉರಗ ತಜ್ಞ ಮಧು ಮತ್ತು ಅವರ ಸಂಗಡಿಗರ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದರು.





