ರೋಗ ಲಕ್ಷಣ ಇಲ್ಲದವರಿಗೆ ಮನೆಯಲ್ಲೇ ಕ್ವಾರಂಟೈನ್​ -ಯಡಿಯೂರಪ್ಪ ಸ್ಪಷ್ಟನೆ

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣ ವಿಚಾರಕ್ಕೆ ಸಂಬಂಧಿಸಿ ವಿಧಾನಸೌಧದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ತಜ್ಞರ ಸಭೆ ಅಂತ್ಯವಾಗಿದೆ. ಸಭೆ ಬಳಿಕ ವಿಧಾನಸೌಧದಲ್ಲಿ ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ರೋಗ ಲಕ್ಷಣ ಇಲ್ಲದ ಕೊರೊನಾ ಸೋಂಕಿತರಿಗೆ ಮನೆಯಲ್ಲೇ ಚಿಕಿತ್ಸೆ ನೀಡುವ ಬಗ್ಗೆ ತಜ್ಞರು ಸಲಹೆ ನೀಡಿದ್ದಾರೆ. ಸೋಂಕಿತರಿಗೆ ಸಾಂಸ್ಥಿಕ ಕ್ವಾರಂಟೈನ್ ಅನಗತ್ಯ ಎಂಬ ಬಗ್ಗೆಯೂ ಸಲಹೆ ಕೊಟ್ಟಿದ್ದಾರೆ. ಕೊವಿಡ್ ಹೆಚ್ಚಾದರೂ ಸಹ ಯಾರನ್ನೂ ಹೆದರಿಸಬಾರದು, ಕೊವಿಡ್ ಬಂದರೆ ಜೀವ ಅಂತ್ಯವಲ್ಲ. ರೋಗ ಲಕ್ಷಣ ಇಲ್ಲದವರು […]

ರೋಗ ಲಕ್ಷಣ ಇಲ್ಲದವರಿಗೆ ಮನೆಯಲ್ಲೇ ಕ್ವಾರಂಟೈನ್​ -ಯಡಿಯೂರಪ್ಪ ಸ್ಪಷ್ಟನೆ
ಸಾಧು ಶ್ರೀನಾಥ್​

Updated on: Jul 01, 2020 | 3:42 PM

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣ ವಿಚಾರಕ್ಕೆ ಸಂಬಂಧಿಸಿ ವಿಧಾನಸೌಧದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ತಜ್ಞರ ಸಭೆ ಅಂತ್ಯವಾಗಿದೆ. ಸಭೆ ಬಳಿಕ ವಿಧಾನಸೌಧದಲ್ಲಿ ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.

ರೋಗ ಲಕ್ಷಣ ಇಲ್ಲದ ಕೊರೊನಾ ಸೋಂಕಿತರಿಗೆ ಮನೆಯಲ್ಲೇ ಚಿಕಿತ್ಸೆ ನೀಡುವ ಬಗ್ಗೆ ತಜ್ಞರು ಸಲಹೆ ನೀಡಿದ್ದಾರೆ. ಸೋಂಕಿತರಿಗೆ ಸಾಂಸ್ಥಿಕ ಕ್ವಾರಂಟೈನ್ ಅನಗತ್ಯ ಎಂಬ ಬಗ್ಗೆಯೂ ಸಲಹೆ ಕೊಟ್ಟಿದ್ದಾರೆ.

ಕೊವಿಡ್ ಹೆಚ್ಚಾದರೂ ಸಹ ಯಾರನ್ನೂ ಹೆದರಿಸಬಾರದು, ಕೊವಿಡ್ ಬಂದರೆ ಜೀವ ಅಂತ್ಯವಲ್ಲ. ರೋಗ ಲಕ್ಷಣ ಇಲ್ಲದವರು ಆಸ್ಪತ್ರೆಗೆ ದಾಖಲಾಗುವುದ ಬೇಡ. ಕೊವಿಡ್ ಚಿಕಿತ್ಸೆಗೆ ಬೆಡ್​ಗಳ ಕೊರತೆ ಆಗುವುದಿಲ್ಲ ಎಂದು ಮಣಿಪಾಲ್ ಸಮೂಹದ ಮುಖ್ಯಸ್ಥ ಡಾ.ಸುದರ್ಶನ್ ಬಲ್ಲಾಳ್​ ಹೇಳಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us