ಕ್ವಾರಂಟೈನ್ ಮುಗಿಸಿ ಮನೆಗೆ ಹೋಗಿದ್ದವರಿಗೆ ಕೊರೊನಾ?

ದೇವನಹಳ್ಳಿ: ಕ್ವಾರಂಟೈನ್ ಮುಗಿಸಿ ಮನೆಗೆ ಹೋದವರಿಗೆ ಕೊರೊನಾ ಸೋಂಕು ತಗುಲಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ 6 ಜನರಿಗೆ ಕೊರೊನಾ ಸೋಂಕು ತಗುಲಿರುವುದಾಗಿ ವರದಿ ಬಂದಿದೆ. ವಾರದ ಹಿಂದೆ ಅಂಗಡಿ ಮಾಲೀಕನಿಗೆ ಕೊರೊನಾ ಸೋಂಕು ತಗುಲಿತ್ತು. ಹೀಗಾಗಿ ಆತನ ಕುಟುಂಬಸ್ಥರನ್ನು ಅಧಿಕಾರಿಗಳು 7 ದಿನಗಳ ಕಾಲ ಕ್ವಾರಂಟೈನ್ ಮಾಡಿದ್ದರು. ನಿನ್ನೆ ಸಂಜೆ 6 ಜನರನ್ನೂ ಮನೆಗೆ ವಾಪಸ್ ಕಳಿಸಿದ್ದರು. ಆದ್ರೆ ಮನೆಗೆ ವಾಪಸಾದ ಬಳಿಕ ಕೊವಿಡ್ ಟೆಸ್ಟ್ ವರದಿಯಲ್ಲಿ ಸೋಂಕಿರುವುದಾಗಿ ಮಾಹಿತಿ ಬಂದಿದೆ. […]

ಕ್ವಾರಂಟೈನ್ ಮುಗಿಸಿ ಮನೆಗೆ ಹೋಗಿದ್ದವರಿಗೆ ಕೊರೊನಾ?
ಆಯೇಷಾ ಬಾನು

Updated on: Jun 28, 2020 | 10:46 AM

ದೇವನಹಳ್ಳಿ: ಕ್ವಾರಂಟೈನ್ ಮುಗಿಸಿ ಮನೆಗೆ ಹೋದವರಿಗೆ ಕೊರೊನಾ ಸೋಂಕು ತಗುಲಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ 6 ಜನರಿಗೆ ಕೊರೊನಾ ಸೋಂಕು ತಗುಲಿರುವುದಾಗಿ ವರದಿ ಬಂದಿದೆ.

ವಾರದ ಹಿಂದೆ ಅಂಗಡಿ ಮಾಲೀಕನಿಗೆ ಕೊರೊನಾ ಸೋಂಕು ತಗುಲಿತ್ತು. ಹೀಗಾಗಿ ಆತನ ಕುಟುಂಬಸ್ಥರನ್ನು ಅಧಿಕಾರಿಗಳು 7 ದಿನಗಳ ಕಾಲ ಕ್ವಾರಂಟೈನ್ ಮಾಡಿದ್ದರು. ನಿನ್ನೆ ಸಂಜೆ 6 ಜನರನ್ನೂ ಮನೆಗೆ ವಾಪಸ್ ಕಳಿಸಿದ್ದರು. ಆದ್ರೆ ಮನೆಗೆ ವಾಪಸಾದ ಬಳಿಕ ಕೊವಿಡ್ ಟೆಸ್ಟ್ ವರದಿಯಲ್ಲಿ ಸೋಂಕಿರುವುದಾಗಿ ಮಾಹಿತಿ ಬಂದಿದೆ.

ಹೀಗಾಗಿ ಅಧಿಕಾರಿಗಳು ಮತ್ತೆ 6 ಜನರನ್ನ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಅನಿವಾರ್ಯವಾಗಿ 6 ಜನರು ಆಸ್ಪತ್ರೆಗೆ ಶಿಫ್ಟ್‌ ಆಗಿದ್ದಾರೆ. ಮತ್ತೊಂದೆಡೆ 6 ಜನ ಕ್ವಾರಂಟೈನ್‌ನಲ್ಲಿದ್ದಾಗ ಮನೆಗಳ್ಳತನ ನಡೆದಿತ್ತು. ಕ್ವಾರಂಟೈನ್ ಮುಗಿಸಿ ಮನೆಗೆ ವಾಪಸಾದಾಗ ಘಟನೆ ಬೆಳಕಿಗೆ ಬಂದಿತ್ತು. ಮನೆಯಲ್ಲಿ ಏನೇನು ಕಳ್ಳತನವಾಗಿದೆ ಎಂಬ ಮಾಹಿತಿ ಸಿಕ್ಕಿಲ್ಲ. ಕಳ್ಳತನವಾದ ಮನೆಯಲ್ಲಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us