AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಮುಲ್‌ ಚುನಾವಣೆ: ರಣಾಂಗಣವಾದ ಮತದಾನ ಕೇಂದ್ರ, ಜಿ.ಟಿ. ದೇವೇಗೌಡ-ಹೆಚ್.ಡಿ‌. ಕುಮಾರಸ್ವಾಮಿ ಬಣಗಳ ನಡುವೆ ಗಲಾಟೆ

ಮತದಾನ ಕೇಂದ್ರದ ಒಳಗಡೆ ಮತ್ತು ಹೊರಗಡೆ ಗಲಾಟೆ ಶುರುವಾಗಿದೆ. ಮತದಾನ ಕೇಂದ್ರದ ಒಳಗಡೆ ಎಂಡಿಸಿಸಿ ಉಪಾಧ್ಯಕ್ಷ ಸದಾನಂದ, ಮಾಜಿ ಮೈಮುಲ್ ಅಧ್ಯಕ್ಷ ಕೆ.ಜಿ.ಮಹೇಶ್ ನಡುವೆ ಮಾತಿನ ಚಕಮಕಿ ಶುರುವಾಗಿದ್ರೆ. ಹೊರಗಡೆ ಕಾರ್ಯಕರ್ತರ ನಡುವೆ ಕೂಗಾಟ ರಂಪಾಟ ಜೋರಾಗಿದೆ.

ಮೈಮುಲ್‌ ಚುನಾವಣೆ: ರಣಾಂಗಣವಾದ ಮತದಾನ ಕೇಂದ್ರ, ಜಿ.ಟಿ. ದೇವೇಗೌಡ-ಹೆಚ್.ಡಿ‌. ಕುಮಾರಸ್ವಾಮಿ ಬಣಗಳ ನಡುವೆ ಗಲಾಟೆ
ಜಿ.ಟಿ. ದೇವೇಗೌಡ-ಹೆಚ್.ಡಿ‌. ಕುಮಾರಸ್ವಾಮಿ ಬಣಗಳ ನಡುವೆ ಗಲಾಟೆ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Mar 16, 2021 | 10:31 AM

ಮೈಸೂರು: ಜಿ.ಟಿ. ದೇವೇಗೌಡ ಮತ್ತು ಹೆಚ್.ಡಿ‌. ಕುಮಾರಸ್ವಾಮಿ ಪ್ರತಿಷ್ಠೆಯ ಕಣವಾಗಿರುವ ಮೈಮುಲ್‌ ಚುನಾವಣೆ (ಮೈಸೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಒಕ್ಕೂಟ) ಇಂದು ಬೆಳಗ್ಗೆ 10ರಿಂದ ಸಂಜೆ 4ರವರೆಗೆ ನಡೆಯಲಿದೆ. ಮೈಮುಲ್‌ನ 15 ಸ್ಥಾನಕ್ಕೆ 29 ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಆದ್ರೆ ಮತದಾನ ಕೇಂದ್ರದ ಒಳಗಡೆ ಮತ್ತು ಹೊರಗಡೆ ಗಲಾಟೆ ಶುರುವಾಗಿದೆ. ಮತದಾನ ಕೇಂದ್ರದ ಒಳಗಡೆ ಎಂಡಿಸಿಸಿ ಉಪಾಧ್ಯಕ್ಷ ಸದಾನಂದ, ಮಾಜಿ ಮೈಮುಲ್ ಅಧ್ಯಕ್ಷ ಕೆ.ಜಿ.ಮಹೇಶ್ ನಡುವೆ ಮಾತಿನ ಚಕಮಕಿ ಶುರುವಾಗಿದ್ರೆ. ಹೊರಗಡೆ ಕಾರ್ಯಕರ್ತರ ನಡುವೆ ಕೂಗಾಟ ರಂಪಾಟ ಜೋರಾಗಿದೆ. ಮತದಾರರ ಮನವೂಲಿಸುವ ಸಂದರ್ಭದಲ್ಲಿ ಜಿಟಿ ದೇವೇಗೌಡ ಮತ್ತು ಹೆಚ್.ಡಿ‌. ಕುಮಾರಸ್ವಾಮಿ ಬಣದ ಕಾರ್ಯಕರ್ತರ ನಡುವೆ ಕಿರಿಕ್ ಆಗಿದೆ. ಸದ್ಯ ಪೊಲೀಸರು ಗಲಾಟೆ ಮಾಡುತ್ತಿದ್ದವರನ್ನ ಸಮಾಧಾನ ಪಡಿಸಿದ್ದಾರೆ.

ಅಖಾಡಕ್ಕಿಳಿದ ಜಿಟಿಡಿ ಪುತ್ರ ಹರೀಶ್‌ಗೌಡ ತಂದೆಯ ಪ್ರತಿಷ್ಠೆ ಉಳಿಸಲು ಜಿ.ಟಿ. ದೇವೇಗೌಡ ಪುತ್ರ ಜಿ.ಡಿ.ಹರೀಶ್‌ಗೌಡ ಖುದ್ದು ಅಖಾಡಕ್ಕಿಳಿದಿದ್ದಾರೆ. ಚುನಾವಣಾ ಮತಕೇಂದ್ರದ ಬಳಿಯೇ ಮೊಕ್ಕಾಂ ಹೂಡಿದ್ದಾರೆ. ತಂದೆಯ ಪ್ರತಿಷ್ಠೆ ಉಳಿಸಲು ಮೈಮುಲ್ ಚುನಾವಣೆಯಲ್ಲಿ ಭಾಗಿಯಾಗಿದ್ದಾರೆ. ಆಲನಹಳ್ಳಿ ಕೆಎಂ‌ಎಫ್ ತರಬೇತಿ ಕೇಂದ್ರದಲ್ಲಿ ಮತದಾನ ನಡೆಯುತ್ತಿದ್ದು ಕೊನೆ ಕ್ಷಣದಲ್ಲಿ ಮತದಾರರನ್ನ ಸೆಳೆಯಲು ಅಭ್ಯರ್ಥಿಗಳ ಕಸರತ್ತು ನಡೆಸುತ್ತಿದ್ದಾರೆ.

mymul election

ಜಿ.ಟಿ. ದೇವೇಗೌಡ-ಹೆಚ್.ಡಿ‌. ಕುಮಾರಸ್ವಾಮಿ ಬಣಗಳ ನಡುವೆ ಗಲಾಟೆ

ಒಟ್ಟು 34 ಜನ ನಾಮಪತ್ರ ಸಲ್ಲಿಸಿದ್ದರು. ಈ ಪೈಕಿ ಒಂದು ನಾಮಪತ್ರ ತಿರಸ್ಕೃತಗೊಂಡಿದ್ದು ಮೂವರು ವಾಪಸ್ ಪಡೆದಿದ್ದಾರೆ. ಹೀಗಾಗಿ ಅಂತಿಮವಾಗಿ 29 ಮಂದಿ ಚುನಾವಣಾ ಕಣದಲ್ಲಿದ್ದಾರೆ. ಮೈಸೂರಿನ 7 ವಿಭಾಗ ಹುಣಸೂರಿನ 8 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು 11 ಸಾಮಾನ್ಯ 4 ಮಹಿಳೆಯರಿಗೆ ಮೀಸಲಾಗಿದೆ. 4 ಮತಗಟ್ಟೆಗಳ ಸ್ಥಾಪನೆ ಮಾಡಲಾಗಿದ್ದು ಹಾಲು ಒಕ್ಕೂಟದ ಮೆಗಾ ಡೈರಿ ಆವರಣದಲ್ಲಿ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಹಾಲು ಉತ್ಪಾದಕರ ಸಂಘದ ಪರವಾಗಿ ಒಬ್ಬರಿಂದ ಮತದಾನ ನಡೆಯುತ್ತೆ. ಹಾಗೂ 1052 ಮತದಾರರು ಚುನಾವಣೆಯಲ್ಲಿ ಮತ ಚಲಾಯಿಸಲಿದ್ದಾರೆ.

ತಮ್ಮ ಬಣದ ಅಭ್ಯರ್ಥಿ ಗೆಲ್ಲಿಸಲು ಪ್ರಮುಖ ನಾಯಕರು ಪಣ ತೊಟ್ಟಿದ್ದಾರೆ. ಜಿ.ಟಿ.ದೇವೇಗೌಡ ಬಣ ಸೋಲಿಸಲು ಜೆಡಿಎಸ್‌ ರಣತಂತ್ರ ಹೆಣೆದಿದೆ. ಜಿಲ್ಲೆಯ ಸಹಕಾರ ಕ್ಷೇತ್ರದಲ್ಲಿ ಜಿಟಿಡಿ ಹಿಡಿತ ಹೊಂದಿದ್ದಾರೆ. ಹೀಗಾಗಿ ಜಿಟಿಡಿ ಶಕ್ತಿ ಕುಂದಿಸಲು JDS ನಾಯಕರು ಯತ್ನಿಸುತ್ತಿದ್ದಾರೆ. ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಿರುವ ಶಾಸಕ ಕೆ.ಮಹದೇವ್ ಪುತ್ರನನ್ನ ಸೋಲಿಸಲು ಸಾ.ರಾ.ಮಹೇಶ್ ತಂತ್ರ ಹೆಣೆದಿದ್ದಾರೆ.

mymul election

ಜಿ.ಟಿ. ದೇವೇಗೌಡ-ಹೆಚ್.ಡಿ‌. ಕುಮಾರಸ್ವಾಮಿ ಬಣಗಳ ನಡುವೆ ಗಲಾಟೆ

ಇದನ್ನೂ ಓದಿ: ಶಕುನಿ, ಮಂಥರೆ ಮಾತು ಕೇಳಿ ಜೆಡಿಎಸ್​​ ಪಕ್ಷವನ್ನು ಹೆಚ್​.ಡಿ. ಕುಮಾರಸ್ವಾಮಿ ಸರ್ವನಾಶ ಮಾಡುತ್ತಿದ್ದಾರೆ: ಜಿ.ಟಿ. ದೇವೇಗೌಡ ಗುಡುಗು

ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ