AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯೋತ್ಸವದಂದು ಸಚಿವರ ವಿನೂತನ ಪ್ರಯತ್ನ: ಜೋಳಿಗೆ ಹಾಕಿಕೊಂಡು ಕನ್ನಡ ಪುಸ್ತಕಗಳ ಮಾರಾಟ

ದೇವನಹಳ್ಳಿ: 65ನೇ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆಯ ಪ್ರಯುಕ್ತವಾಗಿ ಕಂದಾಯ ಸಚಿವ ಆರ್. ಅಶೋಕ್​ ಜನರಲ್ಲಿ ಕನ್ನಡದ ಬಗ್ಗೆ ಅರಿವು ಮೂಡಿಸಲು ಇಂದು ವಿನೂತನ ಪ್ರಯತ್ನಕ್ಕೆ ಮುಂದಾದರು. ಸಚಿವರು ಇಂದು ಜೋಳಿಗೆ ಹಾಕಿಕೊಂಡು ಕನ್ನಡದ ಪುಸ್ತಕಗಳ ಮಾರಾಟ ಮಾಡಲು ಮುಂದಾದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಚಿವರು ಜೋಳಿಗೆ ಹಾಕಿಕೊಂಡು ಕನ್ನಡ ಪುಸ್ತಕಗಳ ಮಾರಾಟಕ್ಕೆ ಮುಂದಾದರು. ಪಟ್ಟಣದ ಹೊಸ ಬಸ್ ನಿಲ್ದಾಣದ ಬಳಿ ಮಾರಾಟಕ್ಕೆ ಬಂದ ಸಚಿವರು ಕನ್ನಡ ಪುಸ್ತಕಗಳನ್ನ ಓದಿ, ಕನ್ನಡ ಬೆಳಸಿ, […]

ರಾಜ್ಯೋತ್ಸವದಂದು ಸಚಿವರ ವಿನೂತನ ಪ್ರಯತ್ನ: ಜೋಳಿಗೆ ಹಾಕಿಕೊಂಡು ಕನ್ನಡ ಪುಸ್ತಕಗಳ ಮಾರಾಟ
KUSHAL V
|

Updated on: Nov 01, 2020 | 12:14 PM

Share

ದೇವನಹಳ್ಳಿ: 65ನೇ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆಯ ಪ್ರಯುಕ್ತವಾಗಿ ಕಂದಾಯ ಸಚಿವ ಆರ್. ಅಶೋಕ್​ ಜನರಲ್ಲಿ ಕನ್ನಡದ ಬಗ್ಗೆ ಅರಿವು ಮೂಡಿಸಲು ಇಂದು ವಿನೂತನ ಪ್ರಯತ್ನಕ್ಕೆ ಮುಂದಾದರು. ಸಚಿವರು ಇಂದು ಜೋಳಿಗೆ ಹಾಕಿಕೊಂಡು ಕನ್ನಡದ ಪುಸ್ತಕಗಳ ಮಾರಾಟ ಮಾಡಲು ಮುಂದಾದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಚಿವರು ಜೋಳಿಗೆ ಹಾಕಿಕೊಂಡು ಕನ್ನಡ ಪುಸ್ತಕಗಳ ಮಾರಾಟಕ್ಕೆ ಮುಂದಾದರು. ಪಟ್ಟಣದ ಹೊಸ ಬಸ್ ನಿಲ್ದಾಣದ ಬಳಿ ಮಾರಾಟಕ್ಕೆ ಬಂದ ಸಚಿವರು ಕನ್ನಡ ಪುಸ್ತಕಗಳನ್ನ ಓದಿ, ಕನ್ನಡ ಬೆಳಸಿ, ಉಳಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿಕೊಂಡರು. ಸಚಿವರಿಗೆ ಡಿಸಿ ಸೇರಿದಂತೆ ಜನಪ್ರತಿನಿಧಿಗಳು ಸಾಥ್ ಕೊಟ್ಟರು.

ಈ ಮುಂಚೆ, 65ನೇ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆಯ ಅಂಗವಾಗಿ ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಸಚಿವ ಆರ್.ಅಶೋಕ್‌ರಿಂದ ಧ್ವಜಾರೋಹಣ ನೆರವೇರಿಸಲಾಯಿತು. ಧ್ವಜಾರೋಹಣ ಮಾಡಿ ಗೌರವ ವಂದನೆ ಸ್ವೀಕರಿಸಿದ ಆರ್.ಅಶೋಕ್ ಜೊತೆ ಡಿ.ಸಿ.ರವೀಂದ್ರ, ಎಸ್.ಪಿ ರವಿ ಚನ್ನಣ್ಣನವರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಭಾಗಿಯಾದರು.

ಈ ನಡುವೆ, ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ. ಕನ್ನಡದ ಬಗ್ಗೆ, ಕನ್ನಡ ಬಾವುಟದ ಬಗ್ಗೆ ಮಾತನಾಡಿದ್ರೆ ಯಾವ ಭಾಷೆಯಲ್ಲಿ ಉತ್ತರಿಸಬೇಕೋ ಆ ಭಾಷೆಯಲ್ಲಿ ಉತ್ತರ ಕೊಡ್ತೀವಿ. ಮಹಾರಾಷ್ಟ್ರ ಏಕೀಕರಣ ಸಮಿತಿ ಮಾಡಿಕೊಂಡು ಬಂದಿದೆ. ಅವರ ಪುಂಡಾಟಿಕೆಗೆಲ್ಲ ಸರಿಯಾದ ಬುದ್ಧಿಯನ್ನ ಕಲಿಸುತ್ತೇವೆ ಎಂದು ಬೆಳಗಾವಿಯಲ್ಲಿ ಎಂ.ಇ.ಎಸ್​ ಕಾರ್ಯಕರ್ತರ ಪುಂಡಾಡಿಕೆ ಕುರಿತು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.

ವಿದ್ಯಾರ್ಥಿಗಳ ಕೈಯಲ್ಲಿ ಗಾರೆ ಕೆಲಸ ಮಾಡಿಸಿದ ಶಿಕ್ಷಕರು, ವ್ಯಾಪಕ ಆಕ್ರೋಶ
ವಿದ್ಯಾರ್ಥಿಗಳ ಕೈಯಲ್ಲಿ ಗಾರೆ ಕೆಲಸ ಮಾಡಿಸಿದ ಶಿಕ್ಷಕರು, ವ್ಯಾಪಕ ಆಕ್ರೋಶ
ಎಣ್ಣೆ ಪಾರ್ಟಿ ಜತೆಗೇ ಕಡತ ನಿರ್ವಹಣೆ! ಬೆಸ್ಕಾಂ ಅಧಿಕಾರಿಗಳ ವಿಡಿಯೋ ವೈರಲ್
ಎಣ್ಣೆ ಪಾರ್ಟಿ ಜತೆಗೇ ಕಡತ ನಿರ್ವಹಣೆ! ಬೆಸ್ಕಾಂ ಅಧಿಕಾರಿಗಳ ವಿಡಿಯೋ ವೈರಲ್
‘ದೊಡ್ಮನೆ ಹಬ್ಬ’ದಲ್ಲಿ ಗಾನ ಬಜಾನ ತಂಡದ ಟ್ರೋಲ್ ಸಾಂಗ್
‘ದೊಡ್ಮನೆ ಹಬ್ಬ’ದಲ್ಲಿ ಗಾನ ಬಜಾನ ತಂಡದ ಟ್ರೋಲ್ ಸಾಂಗ್
ಹಂಪಿ ಉತ್ಸವದಲ್ಲಿ ಡ್ಯಾನ್ಸ್ ಮಾಡಿ ರಂಜಿಸಿದ ಶಿವರಾಜ್​​ಕುಮಾರ್
ಹಂಪಿ ಉತ್ಸವದಲ್ಲಿ ಡ್ಯಾನ್ಸ್ ಮಾಡಿ ರಂಜಿಸಿದ ಶಿವರಾಜ್​​ಕುಮಾರ್
ಶಿವರಾತ್ರಿಗೆ ಮಾದಪ್ಪನ ಸನ್ನಿಧಿಗೆ ತೆರಳುವ ಭಕ್ತರೇ ಎಚ್ಚರ
ಶಿವರಾತ್ರಿಗೆ ಮಾದಪ್ಪನ ಸನ್ನಿಧಿಗೆ ತೆರಳುವ ಭಕ್ತರೇ ಎಚ್ಚರ
ಧನುಸ್ಸು ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಧನುಸ್ಸು ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ವೃಶ್ಚಿಕ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ವೃಶ್ಚಿಕ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಾವಿರಾರು ಕೋಟಿ ರೂ.ಗಳ ಯೋಜನೆಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ
ಸಾವಿರಾರು ಕೋಟಿ ರೂ.ಗಳ ಯೋಜನೆಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ
ತುಲಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ತುಲಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮೈಸೂರು ಅರಮನೆ ತ್ರಿನೇಶ್ವರನಿಗೆ 11 ಕೆಜಿಯ ಚಿನ್ನದ ಮುಖವಾಡ! ಏನಿದರ ವಿಶೇಷ?
ಮೈಸೂರು ಅರಮನೆ ತ್ರಿನೇಶ್ವರನಿಗೆ 11 ಕೆಜಿಯ ಚಿನ್ನದ ಮುಖವಾಡ! ಏನಿದರ ವಿಶೇಷ?