AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯೋತ್ಸವದಂದು ಸಚಿವರ ವಿನೂತನ ಪ್ರಯತ್ನ: ಜೋಳಿಗೆ ಹಾಕಿಕೊಂಡು ಕನ್ನಡ ಪುಸ್ತಕಗಳ ಮಾರಾಟ

ದೇವನಹಳ್ಳಿ: 65ನೇ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆಯ ಪ್ರಯುಕ್ತವಾಗಿ ಕಂದಾಯ ಸಚಿವ ಆರ್. ಅಶೋಕ್​ ಜನರಲ್ಲಿ ಕನ್ನಡದ ಬಗ್ಗೆ ಅರಿವು ಮೂಡಿಸಲು ಇಂದು ವಿನೂತನ ಪ್ರಯತ್ನಕ್ಕೆ ಮುಂದಾದರು. ಸಚಿವರು ಇಂದು ಜೋಳಿಗೆ ಹಾಕಿಕೊಂಡು ಕನ್ನಡದ ಪುಸ್ತಕಗಳ ಮಾರಾಟ ಮಾಡಲು ಮುಂದಾದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಚಿವರು ಜೋಳಿಗೆ ಹಾಕಿಕೊಂಡು ಕನ್ನಡ ಪುಸ್ತಕಗಳ ಮಾರಾಟಕ್ಕೆ ಮುಂದಾದರು. ಪಟ್ಟಣದ ಹೊಸ ಬಸ್ ನಿಲ್ದಾಣದ ಬಳಿ ಮಾರಾಟಕ್ಕೆ ಬಂದ ಸಚಿವರು ಕನ್ನಡ ಪುಸ್ತಕಗಳನ್ನ ಓದಿ, ಕನ್ನಡ ಬೆಳಸಿ, […]

ರಾಜ್ಯೋತ್ಸವದಂದು ಸಚಿವರ ವಿನೂತನ ಪ್ರಯತ್ನ: ಜೋಳಿಗೆ ಹಾಕಿಕೊಂಡು ಕನ್ನಡ ಪುಸ್ತಕಗಳ ಮಾರಾಟ
KUSHAL V
|

Updated on: Nov 01, 2020 | 12:14 PM

Share

ದೇವನಹಳ್ಳಿ: 65ನೇ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆಯ ಪ್ರಯುಕ್ತವಾಗಿ ಕಂದಾಯ ಸಚಿವ ಆರ್. ಅಶೋಕ್​ ಜನರಲ್ಲಿ ಕನ್ನಡದ ಬಗ್ಗೆ ಅರಿವು ಮೂಡಿಸಲು ಇಂದು ವಿನೂತನ ಪ್ರಯತ್ನಕ್ಕೆ ಮುಂದಾದರು. ಸಚಿವರು ಇಂದು ಜೋಳಿಗೆ ಹಾಕಿಕೊಂಡು ಕನ್ನಡದ ಪುಸ್ತಕಗಳ ಮಾರಾಟ ಮಾಡಲು ಮುಂದಾದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಚಿವರು ಜೋಳಿಗೆ ಹಾಕಿಕೊಂಡು ಕನ್ನಡ ಪುಸ್ತಕಗಳ ಮಾರಾಟಕ್ಕೆ ಮುಂದಾದರು. ಪಟ್ಟಣದ ಹೊಸ ಬಸ್ ನಿಲ್ದಾಣದ ಬಳಿ ಮಾರಾಟಕ್ಕೆ ಬಂದ ಸಚಿವರು ಕನ್ನಡ ಪುಸ್ತಕಗಳನ್ನ ಓದಿ, ಕನ್ನಡ ಬೆಳಸಿ, ಉಳಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿಕೊಂಡರು. ಸಚಿವರಿಗೆ ಡಿಸಿ ಸೇರಿದಂತೆ ಜನಪ್ರತಿನಿಧಿಗಳು ಸಾಥ್ ಕೊಟ್ಟರು.

ಈ ಮುಂಚೆ, 65ನೇ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆಯ ಅಂಗವಾಗಿ ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಸಚಿವ ಆರ್.ಅಶೋಕ್‌ರಿಂದ ಧ್ವಜಾರೋಹಣ ನೆರವೇರಿಸಲಾಯಿತು. ಧ್ವಜಾರೋಹಣ ಮಾಡಿ ಗೌರವ ವಂದನೆ ಸ್ವೀಕರಿಸಿದ ಆರ್.ಅಶೋಕ್ ಜೊತೆ ಡಿ.ಸಿ.ರವೀಂದ್ರ, ಎಸ್.ಪಿ ರವಿ ಚನ್ನಣ್ಣನವರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಭಾಗಿಯಾದರು.

ಈ ನಡುವೆ, ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ. ಕನ್ನಡದ ಬಗ್ಗೆ, ಕನ್ನಡ ಬಾವುಟದ ಬಗ್ಗೆ ಮಾತನಾಡಿದ್ರೆ ಯಾವ ಭಾಷೆಯಲ್ಲಿ ಉತ್ತರಿಸಬೇಕೋ ಆ ಭಾಷೆಯಲ್ಲಿ ಉತ್ತರ ಕೊಡ್ತೀವಿ. ಮಹಾರಾಷ್ಟ್ರ ಏಕೀಕರಣ ಸಮಿತಿ ಮಾಡಿಕೊಂಡು ಬಂದಿದೆ. ಅವರ ಪುಂಡಾಟಿಕೆಗೆಲ್ಲ ಸರಿಯಾದ ಬುದ್ಧಿಯನ್ನ ಕಲಿಸುತ್ತೇವೆ ಎಂದು ಬೆಳಗಾವಿಯಲ್ಲಿ ಎಂ.ಇ.ಎಸ್​ ಕಾರ್ಯಕರ್ತರ ಪುಂಡಾಡಿಕೆ ಕುರಿತು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.

ಪಿಕ್​ಅಪ್ ವ್ಯಾನ್ ಮೇಲೆ ಬಿದ್ದ ನಿರ್ಮಾಣ ಹಂತದ ಮೇಲ್ಸೇತುವೆಯ ಗ್ರಿಡರ್
ಪಿಕ್​ಅಪ್ ವ್ಯಾನ್ ಮೇಲೆ ಬಿದ್ದ ನಿರ್ಮಾಣ ಹಂತದ ಮೇಲ್ಸೇತುವೆಯ ಗ್ರಿಡರ್
ದಾರಿಯಲ್ಲಿ ಸಿಕ್ಕ ಹಣ ರೈತನಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೊಲೀಸ್
ದಾರಿಯಲ್ಲಿ ಸಿಕ್ಕ ಹಣ ರೈತನಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೊಲೀಸ್
ಜಾಲಹಳ್ಳಿಯಲ್ಲಿ ಫ್ಲೈಓವರ್ ಪಿಲ್ಲರ್ ಎಡೆಯಲ್ಲಿ ಆರಾಮವಾಗಿ ಮಲಗಿದ ವ್ಯಕ್ತಿ!
ಜಾಲಹಳ್ಳಿಯಲ್ಲಿ ಫ್ಲೈಓವರ್ ಪಿಲ್ಲರ್ ಎಡೆಯಲ್ಲಿ ಆರಾಮವಾಗಿ ಮಲಗಿದ ವ್ಯಕ್ತಿ!
ಬೆತ್ ಮೂನಿಯ ಭರ್ಜರಿ ಸೆಂಚುರಿಯೊಂದಿಗೆ ಗೆದ್ದು ಬೀಗಿದ ಸ್ಕಾಚರ್ಸ್
ಬೆತ್ ಮೂನಿಯ ಭರ್ಜರಿ ಸೆಂಚುರಿಯೊಂದಿಗೆ ಗೆದ್ದು ಬೀಗಿದ ಸ್ಕಾಚರ್ಸ್
ಗಿಲ್ಲಿ-ಕಾವ್ಯಾ ನಡುವೆ ಇನ್ನೂ ಮುಗಿದಿಲ್ಲ ಹುಸಿಮುನಿಸು
ಗಿಲ್ಲಿ-ಕಾವ್ಯಾ ನಡುವೆ ಇನ್ನೂ ಮುಗಿದಿಲ್ಲ ಹುಸಿಮುನಿಸು
ದಾಂಪತ್ಯದಲ್ಲಿ ಈ ಐದು ವಿಷಯಗಳನ್ನು ಗಂಡನಿಗೆ ಹೆಂಡತಿ ಹೇಳಲೇಬಾರದು!
ದಾಂಪತ್ಯದಲ್ಲಿ ಈ ಐದು ವಿಷಯಗಳನ್ನು ಗಂಡನಿಗೆ ಹೆಂಡತಿ ಹೇಳಲೇಬಾರದು!
ಗುರುಗಳ ಲಹರಿ ಇರುವ ಈ ದಿನ ಹೇಗಿರಲಿದೆ ನಿಮ್ಮ ಭವಿಷ್ಯ? ಇಲ್ಲಿದೆ ವಿವರಣೆ
ಗುರುಗಳ ಲಹರಿ ಇರುವ ಈ ದಿನ ಹೇಗಿರಲಿದೆ ನಿಮ್ಮ ಭವಿಷ್ಯ? ಇಲ್ಲಿದೆ ವಿವರಣೆ
ದೇವಸ್ಥಾನದೊಳಗೆ ದೇವರೆದುರು ಕುಳಿತಿದ್ದಾಗಲೇ ಪ್ರಾಣ ಬಿಟ್ಟ ಭಕ್ತ!
ದೇವಸ್ಥಾನದೊಳಗೆ ದೇವರೆದುರು ಕುಳಿತಿದ್ದಾಗಲೇ ಪ್ರಾಣ ಬಿಟ್ಟ ಭಕ್ತ!
ದೆಹಲಿ ಸ್ಫೋಟದ ಶೀಘ್ರ ತನಿಖೆಗೆ ನಿರ್ಧಾರ; ಸಚಿವ ಅಶ್ವಿನಿ ವೈಷ್ಣವ್
ದೆಹಲಿ ಸ್ಫೋಟದ ಶೀಘ್ರ ತನಿಖೆಗೆ ನಿರ್ಧಾರ; ಸಚಿವ ಅಶ್ವಿನಿ ವೈಷ್ಣವ್
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಗಿರಕಿ ಹೊಡೆದ ಆಟೋ: ಎದೆ ಝಲ್​ ಎನ್ನುವ ದೃಶ್ಯ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಗಿರಕಿ ಹೊಡೆದ ಆಟೋ: ಎದೆ ಝಲ್​ ಎನ್ನುವ ದೃಶ್ಯ