AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ನ ನಂಬಿದ್ರೆ ಕಥೆ ಅಷ್ಟೆ.. ಗೋವಿಂದಾ.. ಗೋವಿಂದಾ -ಸಚಿವ R.ಅಶೋಕ್

ಕಾಂಗ್ರೆಸ್ ಜತೆ ಜೆಡಿಎಸ್ ಮೈತ್ರಿ ಮಾಡಿಕೊಂಡ ವೇಳೆ ಕುಮಾರಸ್ವಾಮಿಗೆ ಕಿರುಕುಳ ಕೊಟ್ಟಿದ್ದಾರೆ. ಕಾಂಗ್ರೆಸ್ ನಂಬಿದ್ರೆ ಕಥೆ ಅಷ್ಟೇ.. ಗೋವಿಂದಾ ಗೋವಿಂದಾ. ಇದನ್ನು ನಾನು ಹೇಳ್ತಿಲ್ಲ, ವಿರೋಧ ಪಕ್ಷದವರೇ ಹೇಳ್ತಿದ್ದಾರೆ ಎಂದು ಆರ್.ಅಶೋಕ್ ಲೇವಡಿ ಮಾಡಿದರು.

ಕಾಂಗ್ರೆಸ್​ನ ನಂಬಿದ್ರೆ ಕಥೆ ಅಷ್ಟೆ.. ಗೋವಿಂದಾ.. ಗೋವಿಂದಾ -ಸಚಿವ R.ಅಶೋಕ್
ಸಚಿವ ಆರ್. ಅಶೋಕ್
preethi shettigar
| Edited By: |

Updated on:Dec 06, 2020 | 1:04 PM

Share

ಬೆಂಗಳೂರು: ಕುಮಾರಸ್ವಾಮಿ ಜತೆಯಲ್ಲಿದ್ದುಕೊಂಡೇ ಕಾಂಗ್ರೆಸ್‌ನವರು ವಿಷ ಕೊಟ್ರು. ಮೈತ್ರಿ ಸರ್ಕಾರ ಬಿದ್ದಿದ್ದೇ ಕಾಂಗ್ರೆಸ್​ ಕಾರಣದಿಂದ. ಇದು ಅವರ ಆಪರೇಷನ್ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿಕೆ ನೀಡಿದ್ದಾರೆ.

2006-08ರ ಅವಧಿಯಲ್ಲಿ ಬಿಜೆಪಿ ಜತೆ ಮೈತ್ರಿ ಸರ್ಕಾರವಿದ್ದಾಗ ಹೆಚ್‌ಡಿಕೆ ವರ್ಚಸ್ಸು ಹೆಚ್ಚಿತ್ತು. ಆದ್ರೆ, ಕಾಂಗ್ರೆಸ್ ಜತೆ ಜೆಡಿಎಸ್ ಮೈತ್ರಿ ಮಾಡಿಕೊಂಡ ವೇಳೆ ಕುಮಾರಸ್ವಾಮಿಗೆ ಕಿರುಕುಳ ಕೊಟ್ಟಿದ್ದಾರೆ. ಕಾಂಗ್ರೆಸ್ ನಂಬಿದ್ರೆ ಕಥೆ ಅಷ್ಟೇ.. ಗೋವಿಂದಾ ಗೋವಿಂದಾ. ಇದನ್ನು ನಾನು ಹೇಳ್ತಿಲ್ಲ, ವಿರೋಧ ಪಕ್ಷದವರೇ ಹೇಳ್ತಿದ್ದಾರೆ ಎಂದು ಆರ್.ಅಶೋಕ್ ಲೇವಡಿ ಮಾಡಿದರು.

ಇದಕ್ಕೆ ಕುಮ್ಮಕ್ಕು ನೀಡುವಂತೆ ಚಿಕ್ಕಬಳ್ಳಾಪುರದಲ್ಲಿ ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿಕೆ ನೀಡಿದ್ದು, ಸಿದ್ದರಾಮಯ್ಯ, ಕುಮಾರಸ್ವಾಮಿ ಪರಸ್ಪರ ವಾಗ್ದಾಳಿ ವಿಚಾರವಾಗಿ ಮಾತನಾಡಿದ್ದಾರೆ. ಇಬ್ಬರು ನಾಯಕರು ಕೊನೆಗೂ ಸತ್ಯವನ್ನು ಒಪ್ಪಿಕೊಂಡಿದ್ದಾರೆ.ಇನ್ನು ಮುಂದೆಯಾದರೂ ಕುಮಾರಸ್ವಾಮಿ ಕಾಂಗ್ರೆಸ್‌ನಿಂದ ದೂರವಿದ್ದರೆ ಮರ್ಯಾದೆ ಉಳಿಯುತ್ತೆ ಎಂದು ಹೇಳಿದರು.

ಜೆಡಿಎಸ್, ಕಾಂಗ್ರೇಸ್ ಸಮ್ಮಿಶ್ರ ಸರ್ಕಾರ ಜನ ವಿರೋಧಿಯಾಗಿತ್ತು. ಎಚ್ಡಿಕೆ ಒಂದು ವರ್ಷ ಸಿಎಂ ಆಗಿರಲಿ ಎಂದು ಹಣೆ ಬರಹದಲ್ಲಿತ್ತು. ಆದ್ರೆ ವಿಧಿಬರಹ. ಯಾರೂ ಏನು ಮಾಡಲು ಆಗಲ್ಲ. ಬಿಎಸ್ವೈ ಪೂರ್ಣಾವಧಿ ಸಿಎಂ ಎಂದು ಅವರ ಹಣೆ ಬರಹದಲ್ಲಿ ಬರೆದಿದೆ. ಜೆಡಿಎಸ್ ಮತ್ತು ಕಾಂಗ್ರೆಸ್ ಎಷ್ಟು ಬಾರಿ ಮದುವೆ ಹಾಗೂ ಎಷ್ಟು ಸಲ ಡೈವರ್ಸ್ ಆಗ್ತಾರೋ ಗೊತ್ತಿಲ್ಲ. ಇನ್ನಾದರೂ ಕುಮಾರಸ್ವಾಮಿ ಯಾವ ಕಡೆ ಬೇಕಾದ್ರು ಮುಖ ಮಾಡಲಿ.ಆದರೆ, ಕಾಂಗ್ರೆಸ್​ನಿಂದ ದೂರ ಇರಲಿ ಎಂದು ಸಚಿವ ಕೆ.ಸುಧಾಕರ್ ಹೇಳಿದ್ದಾರೆ.

ಇನ್ನು, ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಮಾತನಾಡಿದ ಆರೋಗ್ಯ ಸಚಿವ ಡಾ.ಸುಧಾಕರ್, ಸಂಪುಟ ವಿಸ್ತರಣೆಯ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜತೆ ಸಿಎಂ ಬಿ.ಎಸ್. ಯಡಿಯೂರಪ್ಪ ಚರ್ಚಿಸಲಿದ್ದಾರೆ. ಯಾವಾಗ ಸಂಪುಟ ವಿಸ್ತರಣೆ ಮಾಡಬೇಕೆಂದು ಸಿಎಂ ನಿರ್ಧರಿಸುತ್ತಾರೆ ಎಂದು ಹೇಳಿದರು.

‘ದೇವೇಗೌಡರ ಮಾತು ಕೇಳಿ ಕಾಂಗ್ರೆಸ್ ಸಹವಾಸ ಮಾಡಿದ್ದು ತಪ್ಪಾಯ್ತು.. BJP ಯಲ್ಲಿ ಇದ್ದಿದ್ರೆ ಈಗ ನಾನೇ CM ಆಗಿರ್ತಿದ್ದೆ..’

Published On - 1:02 pm, Sun, 6 December 20

Follow Us
preethi shettigar
preethi shettigar
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​