AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ನ ನಂಬಿದ್ರೆ ಕಥೆ ಅಷ್ಟೆ.. ಗೋವಿಂದಾ.. ಗೋವಿಂದಾ -ಸಚಿವ R.ಅಶೋಕ್

ಕಾಂಗ್ರೆಸ್ ಜತೆ ಜೆಡಿಎಸ್ ಮೈತ್ರಿ ಮಾಡಿಕೊಂಡ ವೇಳೆ ಕುಮಾರಸ್ವಾಮಿಗೆ ಕಿರುಕುಳ ಕೊಟ್ಟಿದ್ದಾರೆ. ಕಾಂಗ್ರೆಸ್ ನಂಬಿದ್ರೆ ಕಥೆ ಅಷ್ಟೇ.. ಗೋವಿಂದಾ ಗೋವಿಂದಾ. ಇದನ್ನು ನಾನು ಹೇಳ್ತಿಲ್ಲ, ವಿರೋಧ ಪಕ್ಷದವರೇ ಹೇಳ್ತಿದ್ದಾರೆ ಎಂದು ಆರ್.ಅಶೋಕ್ ಲೇವಡಿ ಮಾಡಿದರು.

ಕಾಂಗ್ರೆಸ್​ನ ನಂಬಿದ್ರೆ ಕಥೆ ಅಷ್ಟೆ.. ಗೋವಿಂದಾ.. ಗೋವಿಂದಾ -ಸಚಿವ R.ಅಶೋಕ್
ಸಚಿವ ಆರ್. ಅಶೋಕ್
preethi shettigar
| Updated By: KUSHAL V|

Updated on:Dec 06, 2020 | 1:04 PM

Share

ಬೆಂಗಳೂರು: ಕುಮಾರಸ್ವಾಮಿ ಜತೆಯಲ್ಲಿದ್ದುಕೊಂಡೇ ಕಾಂಗ್ರೆಸ್‌ನವರು ವಿಷ ಕೊಟ್ರು. ಮೈತ್ರಿ ಸರ್ಕಾರ ಬಿದ್ದಿದ್ದೇ ಕಾಂಗ್ರೆಸ್​ ಕಾರಣದಿಂದ. ಇದು ಅವರ ಆಪರೇಷನ್ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿಕೆ ನೀಡಿದ್ದಾರೆ.

2006-08ರ ಅವಧಿಯಲ್ಲಿ ಬಿಜೆಪಿ ಜತೆ ಮೈತ್ರಿ ಸರ್ಕಾರವಿದ್ದಾಗ ಹೆಚ್‌ಡಿಕೆ ವರ್ಚಸ್ಸು ಹೆಚ್ಚಿತ್ತು. ಆದ್ರೆ, ಕಾಂಗ್ರೆಸ್ ಜತೆ ಜೆಡಿಎಸ್ ಮೈತ್ರಿ ಮಾಡಿಕೊಂಡ ವೇಳೆ ಕುಮಾರಸ್ವಾಮಿಗೆ ಕಿರುಕುಳ ಕೊಟ್ಟಿದ್ದಾರೆ. ಕಾಂಗ್ರೆಸ್ ನಂಬಿದ್ರೆ ಕಥೆ ಅಷ್ಟೇ.. ಗೋವಿಂದಾ ಗೋವಿಂದಾ. ಇದನ್ನು ನಾನು ಹೇಳ್ತಿಲ್ಲ, ವಿರೋಧ ಪಕ್ಷದವರೇ ಹೇಳ್ತಿದ್ದಾರೆ ಎಂದು ಆರ್.ಅಶೋಕ್ ಲೇವಡಿ ಮಾಡಿದರು.

ಇದಕ್ಕೆ ಕುಮ್ಮಕ್ಕು ನೀಡುವಂತೆ ಚಿಕ್ಕಬಳ್ಳಾಪುರದಲ್ಲಿ ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿಕೆ ನೀಡಿದ್ದು, ಸಿದ್ದರಾಮಯ್ಯ, ಕುಮಾರಸ್ವಾಮಿ ಪರಸ್ಪರ ವಾಗ್ದಾಳಿ ವಿಚಾರವಾಗಿ ಮಾತನಾಡಿದ್ದಾರೆ. ಇಬ್ಬರು ನಾಯಕರು ಕೊನೆಗೂ ಸತ್ಯವನ್ನು ಒಪ್ಪಿಕೊಂಡಿದ್ದಾರೆ.ಇನ್ನು ಮುಂದೆಯಾದರೂ ಕುಮಾರಸ್ವಾಮಿ ಕಾಂಗ್ರೆಸ್‌ನಿಂದ ದೂರವಿದ್ದರೆ ಮರ್ಯಾದೆ ಉಳಿಯುತ್ತೆ ಎಂದು ಹೇಳಿದರು.

ಜೆಡಿಎಸ್, ಕಾಂಗ್ರೇಸ್ ಸಮ್ಮಿಶ್ರ ಸರ್ಕಾರ ಜನ ವಿರೋಧಿಯಾಗಿತ್ತು. ಎಚ್ಡಿಕೆ ಒಂದು ವರ್ಷ ಸಿಎಂ ಆಗಿರಲಿ ಎಂದು ಹಣೆ ಬರಹದಲ್ಲಿತ್ತು. ಆದ್ರೆ ವಿಧಿಬರಹ. ಯಾರೂ ಏನು ಮಾಡಲು ಆಗಲ್ಲ. ಬಿಎಸ್ವೈ ಪೂರ್ಣಾವಧಿ ಸಿಎಂ ಎಂದು ಅವರ ಹಣೆ ಬರಹದಲ್ಲಿ ಬರೆದಿದೆ. ಜೆಡಿಎಸ್ ಮತ್ತು ಕಾಂಗ್ರೆಸ್ ಎಷ್ಟು ಬಾರಿ ಮದುವೆ ಹಾಗೂ ಎಷ್ಟು ಸಲ ಡೈವರ್ಸ್ ಆಗ್ತಾರೋ ಗೊತ್ತಿಲ್ಲ. ಇನ್ನಾದರೂ ಕುಮಾರಸ್ವಾಮಿ ಯಾವ ಕಡೆ ಬೇಕಾದ್ರು ಮುಖ ಮಾಡಲಿ.ಆದರೆ, ಕಾಂಗ್ರೆಸ್​ನಿಂದ ದೂರ ಇರಲಿ ಎಂದು ಸಚಿವ ಕೆ.ಸುಧಾಕರ್ ಹೇಳಿದ್ದಾರೆ.

ಇನ್ನು, ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಮಾತನಾಡಿದ ಆರೋಗ್ಯ ಸಚಿವ ಡಾ.ಸುಧಾಕರ್, ಸಂಪುಟ ವಿಸ್ತರಣೆಯ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜತೆ ಸಿಎಂ ಬಿ.ಎಸ್. ಯಡಿಯೂರಪ್ಪ ಚರ್ಚಿಸಲಿದ್ದಾರೆ. ಯಾವಾಗ ಸಂಪುಟ ವಿಸ್ತರಣೆ ಮಾಡಬೇಕೆಂದು ಸಿಎಂ ನಿರ್ಧರಿಸುತ್ತಾರೆ ಎಂದು ಹೇಳಿದರು.

‘ದೇವೇಗೌಡರ ಮಾತು ಕೇಳಿ ಕಾಂಗ್ರೆಸ್ ಸಹವಾಸ ಮಾಡಿದ್ದು ತಪ್ಪಾಯ್ತು.. BJP ಯಲ್ಲಿ ಇದ್ದಿದ್ರೆ ಈಗ ನಾನೇ CM ಆಗಿರ್ತಿದ್ದೆ..’

Published On - 1:02 pm, Sun, 6 December 20

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು