AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿ ಲವ್ ಜಿಹಾದೂ ಇಲ್ಲ, ಡವ್ ಜಿಹಾದೂ ಇಲ್ಲ.. ‘ಸಾಮ್ರಾಟ್​’ ಅಶೋಕ್​ ಸ್ಪಷ್ಟನೆ

ಈ ಬಾರಿ ಗೋ ಹತ್ಯೆ ನಿಷೇಧ ಕಾನೂನು ತಂದೇ ತರುತ್ತೇವೆ ಎಂದು ವಿಧಾನಸೌಧದಲ್ಲಿ ಕಂದಾಯ ಸಚಿವ R.ಅಶೋಕ್​ ಹೇಳಿದರು. ಆದರೆ, ಲವ್ ಜಿಹಾದ್ ಕಾನೂನು ಮುಂದಿನ ಅಧಿವೇಶನದಲ್ಲಿ ಜಾರಿಯಾಗಲಿದೆ. ಈ ಬಾರಿ ಲವ್ ಜಿಹಾದೂ ಇಲ್ಲ, ಡವ್ ಜಿಹಾದೂ ಇಲ್ಲ ಎಂದು ಮಾಧ್ಯಮದವರಿಗೆ ಅಶೋಕ್​ ಹೇಳಿದರು.

ಈ ಬಾರಿ ಲವ್ ಜಿಹಾದೂ ಇಲ್ಲ, ಡವ್ ಜಿಹಾದೂ ಇಲ್ಲ.. ‘ಸಾಮ್ರಾಟ್​’ ಅಶೋಕ್​ ಸ್ಪಷ್ಟನೆ
ಸಚಿವ R.ಅಶೋಕ್​
KUSHAL V
|

Updated on: Dec 07, 2020 | 12:34 PM

Share

ಬೆಂಗಳೂರು: ಇಷ್ಟು ದಿನ ಕೇಂದ್ರ ಮತ್ತು ರಾಜ್ಯದ ಆಡಳಿತಾರೂಢ ಬಿಜೆಪಿ ಪಕ್ಷದವರು ಲವ್​ ಜಿಹಾದ್ ನಿಷೇಧ ಅಸ್ತ್ರವನ್ನು ಜೋರಾಗಿಯೇ ಝಳಪಿಸುತ್ತಾ ಬಂದಿದ್ದರು. ಕೆಲ ರಾಜ್ಯಗಳಲ್ಲಿ ಲವ್​ ಜಿಹಾದ್ ನಿಷೇಧಗೊಳಿಸುವಲ್ಲಿ ಬಿಜೆಪಿ ಸರ್ಕಾರಗಳು ಯಶಸ್ವಿಯೂ ಆಗಿವೆ. ಅದೇ ಧಾಟಿಯಲ್ಲಿ ಕರ್ನಾಟಕದಲ್ಲಿಯೂ ಇಂದಿನಿಂಧ ಆರಂಭವಾಗಿರುವ ಚಳಿಗಾಲದ ಅಧಿವೇಶನದಲ್ಲಿ ಇನ್ನೇನು ಲವ್​ ಜಿಹಾದ್ ನಿಷೇಧಗೊಳಿಸುತ್ತಾರೆ ಎಂದೇ ಪರಿಭಾವಿಸಲಾಗಿತ್ತು.

ಎಲ್ಲ ಮಹಾಮಹಿಮ ನಾಯಕರು ಇನ್ನೇನು ಲವ್​ ಜಿಹಾದ್ ನಿಷೇಧ ಆಗಿಯೇಬಿಟ್ಟಿತು ಎಂದು ಹೇಳಿದ್ದರು. ಆದರೆ ಅದನ್ನು ಬಿಜೆಪಿ ಸರ್ಕಾರ ಜಾರಿಗೆ ತರುವುದು ಹಾಗಿರಲಿ; ಕಂದಾಯ ಸಚಿವ ಅಶೋಕ್ ಅವರು ಅದರ ಬಗ್ಗೆ ಬೀದಿಬದಿಯಲ್ಲಿ ಮಾತನಾಡುವಂತೆ  ಡವ್ ಜಿಹಾದೂ ಇಲ್ಲ, ಲವ್ ಜಿಹಾದೂ ಇಲ್ಲ ಎಂದು ವ್ಯಂಗ್ಯವಾಗಿ ಮಾತನಾಡುತ್ತಾ..  ಲವ್​ ಜಿಹಾದ್ ನಿಷೇಧಕ್ಕೆ ಸದ್ಯಕ್ಕೆ  ಎಳ್ಳುನೀರು ಬಿಟ್ಟಿದ್ದಾರೆ.

ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನದಲ್ಲಿ ಗೋ ಹತ್ಯೆ ಹಾಗೂ ಲವ್​ ಜಿಹಾದ್​ ವಿಷಯಗಳ ಕುರಿತು ಬಿಸಿಬಿಸಿ ಚರ್ಚೆ ನಡೆಯುವ ಎಲ್ಲಾ ಮುನ್ಸೂಚನೆ ಕಂಡುಬಂದಿತ್ತು. ಆದರೆ, ಕಂದಾಯ ಸಚಿವ ಆರ್​. ಅಶೋಕ್ ಈ ಕುರಿತು ವಿಭಿನ್ನವಾಗಿ ಪ್ರತಿಕ್ರಿಯಿಸಿದ್ದಾರೆ.

ಅಧಿವೇಶನದಲ್ಲಿ ಪಾಲ್ಗೊಳ್ಳುವುದ್ಕೂ ಮುನ್ನ ವಿಧಾನಸೌಧದ ಮೆಟ್ಟಿಲಿಗಳ ಮೇಲೆ ನಿಂತು ಸುದ್ದಿಗಾರರೊಂದಿಗೆ ಮಾತನಾಡುತ್ತಾ.. ಈ ಬಾರಿ ಗೋ ಹತ್ಯೆ ನಿಷೇಧ ಕಾನೂನು ತಂದೇ ತರುತ್ತೇವೆ ಎಂದು ಕಂದಾಯ ಸಚಿವ R.ಅಶೋಕ್​ ಹೇಳಿದರಾದರೂ ಲವ್ ಜಿಹಾದ್ ಕಾನೂನು ಮುಂದಿನ ಅಧಿವೇಶನದಲ್ಲಿ ಜಾರಿಯಾಗಲಿದೆ. ಈ ಬಾರಿ ಲವ್ ಜಿಹಾದೂ ಇಲ್ಲ, ಡವ್ ಜಿಹಾದೂ ಇಲ್ಲ ಎಂದು ನಗೆಯಾಡಿದರು.

ಇಂದಿನಿಂದ 7 ದಿನಗಳ ಕಾಲ ಚಳಿಗಾಲದ ಅಧಿವೇಶನ: ಮಂಡನೆಯಾಗತ್ತಾ ಲವ್ ಜಿಹಾದ್, ಗೋ ಹತ್ಯೆ ನಿಷೇಧ ಕಾಯ್ದೆ?

ಗೋಹತ್ಯೆ ನಿಷೇಧ ಕಾನೂನನ್ನು ಜಾರಿಗೆ ತರಲು ತಡವೇಕೆ? -ಸರ್ಕಾರಕ್ಕೆ ಖಾದರ್​ ಸವಾಲ್​

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ