AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿ ಲವ್ ಜಿಹಾದೂ ಇಲ್ಲ, ಡವ್ ಜಿಹಾದೂ ಇಲ್ಲ.. ‘ಸಾಮ್ರಾಟ್​’ ಅಶೋಕ್​ ಸ್ಪಷ್ಟನೆ

ಈ ಬಾರಿ ಗೋ ಹತ್ಯೆ ನಿಷೇಧ ಕಾನೂನು ತಂದೇ ತರುತ್ತೇವೆ ಎಂದು ವಿಧಾನಸೌಧದಲ್ಲಿ ಕಂದಾಯ ಸಚಿವ R.ಅಶೋಕ್​ ಹೇಳಿದರು. ಆದರೆ, ಲವ್ ಜಿಹಾದ್ ಕಾನೂನು ಮುಂದಿನ ಅಧಿವೇಶನದಲ್ಲಿ ಜಾರಿಯಾಗಲಿದೆ. ಈ ಬಾರಿ ಲವ್ ಜಿಹಾದೂ ಇಲ್ಲ, ಡವ್ ಜಿಹಾದೂ ಇಲ್ಲ ಎಂದು ಮಾಧ್ಯಮದವರಿಗೆ ಅಶೋಕ್​ ಹೇಳಿದರು.

ಈ ಬಾರಿ ಲವ್ ಜಿಹಾದೂ ಇಲ್ಲ, ಡವ್ ಜಿಹಾದೂ ಇಲ್ಲ.. ‘ಸಾಮ್ರಾಟ್​’ ಅಶೋಕ್​ ಸ್ಪಷ್ಟನೆ
ಸಚಿವ R.ಅಶೋಕ್​
KUSHAL V
|

Updated on: Dec 07, 2020 | 12:34 PM

Share

ಬೆಂಗಳೂರು: ಇಷ್ಟು ದಿನ ಕೇಂದ್ರ ಮತ್ತು ರಾಜ್ಯದ ಆಡಳಿತಾರೂಢ ಬಿಜೆಪಿ ಪಕ್ಷದವರು ಲವ್​ ಜಿಹಾದ್ ನಿಷೇಧ ಅಸ್ತ್ರವನ್ನು ಜೋರಾಗಿಯೇ ಝಳಪಿಸುತ್ತಾ ಬಂದಿದ್ದರು. ಕೆಲ ರಾಜ್ಯಗಳಲ್ಲಿ ಲವ್​ ಜಿಹಾದ್ ನಿಷೇಧಗೊಳಿಸುವಲ್ಲಿ ಬಿಜೆಪಿ ಸರ್ಕಾರಗಳು ಯಶಸ್ವಿಯೂ ಆಗಿವೆ. ಅದೇ ಧಾಟಿಯಲ್ಲಿ ಕರ್ನಾಟಕದಲ್ಲಿಯೂ ಇಂದಿನಿಂಧ ಆರಂಭವಾಗಿರುವ ಚಳಿಗಾಲದ ಅಧಿವೇಶನದಲ್ಲಿ ಇನ್ನೇನು ಲವ್​ ಜಿಹಾದ್ ನಿಷೇಧಗೊಳಿಸುತ್ತಾರೆ ಎಂದೇ ಪರಿಭಾವಿಸಲಾಗಿತ್ತು.

ಎಲ್ಲ ಮಹಾಮಹಿಮ ನಾಯಕರು ಇನ್ನೇನು ಲವ್​ ಜಿಹಾದ್ ನಿಷೇಧ ಆಗಿಯೇಬಿಟ್ಟಿತು ಎಂದು ಹೇಳಿದ್ದರು. ಆದರೆ ಅದನ್ನು ಬಿಜೆಪಿ ಸರ್ಕಾರ ಜಾರಿಗೆ ತರುವುದು ಹಾಗಿರಲಿ; ಕಂದಾಯ ಸಚಿವ ಅಶೋಕ್ ಅವರು ಅದರ ಬಗ್ಗೆ ಬೀದಿಬದಿಯಲ್ಲಿ ಮಾತನಾಡುವಂತೆ  ಡವ್ ಜಿಹಾದೂ ಇಲ್ಲ, ಲವ್ ಜಿಹಾದೂ ಇಲ್ಲ ಎಂದು ವ್ಯಂಗ್ಯವಾಗಿ ಮಾತನಾಡುತ್ತಾ..  ಲವ್​ ಜಿಹಾದ್ ನಿಷೇಧಕ್ಕೆ ಸದ್ಯಕ್ಕೆ  ಎಳ್ಳುನೀರು ಬಿಟ್ಟಿದ್ದಾರೆ.

ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನದಲ್ಲಿ ಗೋ ಹತ್ಯೆ ಹಾಗೂ ಲವ್​ ಜಿಹಾದ್​ ವಿಷಯಗಳ ಕುರಿತು ಬಿಸಿಬಿಸಿ ಚರ್ಚೆ ನಡೆಯುವ ಎಲ್ಲಾ ಮುನ್ಸೂಚನೆ ಕಂಡುಬಂದಿತ್ತು. ಆದರೆ, ಕಂದಾಯ ಸಚಿವ ಆರ್​. ಅಶೋಕ್ ಈ ಕುರಿತು ವಿಭಿನ್ನವಾಗಿ ಪ್ರತಿಕ್ರಿಯಿಸಿದ್ದಾರೆ.

ಅಧಿವೇಶನದಲ್ಲಿ ಪಾಲ್ಗೊಳ್ಳುವುದ್ಕೂ ಮುನ್ನ ವಿಧಾನಸೌಧದ ಮೆಟ್ಟಿಲಿಗಳ ಮೇಲೆ ನಿಂತು ಸುದ್ದಿಗಾರರೊಂದಿಗೆ ಮಾತನಾಡುತ್ತಾ.. ಈ ಬಾರಿ ಗೋ ಹತ್ಯೆ ನಿಷೇಧ ಕಾನೂನು ತಂದೇ ತರುತ್ತೇವೆ ಎಂದು ಕಂದಾಯ ಸಚಿವ R.ಅಶೋಕ್​ ಹೇಳಿದರಾದರೂ ಲವ್ ಜಿಹಾದ್ ಕಾನೂನು ಮುಂದಿನ ಅಧಿವೇಶನದಲ್ಲಿ ಜಾರಿಯಾಗಲಿದೆ. ಈ ಬಾರಿ ಲವ್ ಜಿಹಾದೂ ಇಲ್ಲ, ಡವ್ ಜಿಹಾದೂ ಇಲ್ಲ ಎಂದು ನಗೆಯಾಡಿದರು.

ಇಂದಿನಿಂದ 7 ದಿನಗಳ ಕಾಲ ಚಳಿಗಾಲದ ಅಧಿವೇಶನ: ಮಂಡನೆಯಾಗತ್ತಾ ಲವ್ ಜಿಹಾದ್, ಗೋ ಹತ್ಯೆ ನಿಷೇಧ ಕಾಯ್ದೆ?

ಗೋಹತ್ಯೆ ನಿಷೇಧ ಕಾನೂನನ್ನು ಜಾರಿಗೆ ತರಲು ತಡವೇಕೆ? -ಸರ್ಕಾರಕ್ಕೆ ಖಾದರ್​ ಸವಾಲ್​

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್