AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿ ಲವ್ ಜಿಹಾದೂ ಇಲ್ಲ, ಡವ್ ಜಿಹಾದೂ ಇಲ್ಲ.. ‘ಸಾಮ್ರಾಟ್​’ ಅಶೋಕ್​ ಸ್ಪಷ್ಟನೆ

ಈ ಬಾರಿ ಗೋ ಹತ್ಯೆ ನಿಷೇಧ ಕಾನೂನು ತಂದೇ ತರುತ್ತೇವೆ ಎಂದು ವಿಧಾನಸೌಧದಲ್ಲಿ ಕಂದಾಯ ಸಚಿವ R.ಅಶೋಕ್​ ಹೇಳಿದರು. ಆದರೆ, ಲವ್ ಜಿಹಾದ್ ಕಾನೂನು ಮುಂದಿನ ಅಧಿವೇಶನದಲ್ಲಿ ಜಾರಿಯಾಗಲಿದೆ. ಈ ಬಾರಿ ಲವ್ ಜಿಹಾದೂ ಇಲ್ಲ, ಡವ್ ಜಿಹಾದೂ ಇಲ್ಲ ಎಂದು ಮಾಧ್ಯಮದವರಿಗೆ ಅಶೋಕ್​ ಹೇಳಿದರು.

ಈ ಬಾರಿ ಲವ್ ಜಿಹಾದೂ ಇಲ್ಲ, ಡವ್ ಜಿಹಾದೂ ಇಲ್ಲ.. ‘ಸಾಮ್ರಾಟ್​’ ಅಶೋಕ್​ ಸ್ಪಷ್ಟನೆ
ಸಚಿವ R.ಅಶೋಕ್​
KUSHAL V
|

Updated on: Dec 07, 2020 | 12:34 PM

Share

ಬೆಂಗಳೂರು: ಇಷ್ಟು ದಿನ ಕೇಂದ್ರ ಮತ್ತು ರಾಜ್ಯದ ಆಡಳಿತಾರೂಢ ಬಿಜೆಪಿ ಪಕ್ಷದವರು ಲವ್​ ಜಿಹಾದ್ ನಿಷೇಧ ಅಸ್ತ್ರವನ್ನು ಜೋರಾಗಿಯೇ ಝಳಪಿಸುತ್ತಾ ಬಂದಿದ್ದರು. ಕೆಲ ರಾಜ್ಯಗಳಲ್ಲಿ ಲವ್​ ಜಿಹಾದ್ ನಿಷೇಧಗೊಳಿಸುವಲ್ಲಿ ಬಿಜೆಪಿ ಸರ್ಕಾರಗಳು ಯಶಸ್ವಿಯೂ ಆಗಿವೆ. ಅದೇ ಧಾಟಿಯಲ್ಲಿ ಕರ್ನಾಟಕದಲ್ಲಿಯೂ ಇಂದಿನಿಂಧ ಆರಂಭವಾಗಿರುವ ಚಳಿಗಾಲದ ಅಧಿವೇಶನದಲ್ಲಿ ಇನ್ನೇನು ಲವ್​ ಜಿಹಾದ್ ನಿಷೇಧಗೊಳಿಸುತ್ತಾರೆ ಎಂದೇ ಪರಿಭಾವಿಸಲಾಗಿತ್ತು.

ಎಲ್ಲ ಮಹಾಮಹಿಮ ನಾಯಕರು ಇನ್ನೇನು ಲವ್​ ಜಿಹಾದ್ ನಿಷೇಧ ಆಗಿಯೇಬಿಟ್ಟಿತು ಎಂದು ಹೇಳಿದ್ದರು. ಆದರೆ ಅದನ್ನು ಬಿಜೆಪಿ ಸರ್ಕಾರ ಜಾರಿಗೆ ತರುವುದು ಹಾಗಿರಲಿ; ಕಂದಾಯ ಸಚಿವ ಅಶೋಕ್ ಅವರು ಅದರ ಬಗ್ಗೆ ಬೀದಿಬದಿಯಲ್ಲಿ ಮಾತನಾಡುವಂತೆ  ಡವ್ ಜಿಹಾದೂ ಇಲ್ಲ, ಲವ್ ಜಿಹಾದೂ ಇಲ್ಲ ಎಂದು ವ್ಯಂಗ್ಯವಾಗಿ ಮಾತನಾಡುತ್ತಾ..  ಲವ್​ ಜಿಹಾದ್ ನಿಷೇಧಕ್ಕೆ ಸದ್ಯಕ್ಕೆ  ಎಳ್ಳುನೀರು ಬಿಟ್ಟಿದ್ದಾರೆ.

ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನದಲ್ಲಿ ಗೋ ಹತ್ಯೆ ಹಾಗೂ ಲವ್​ ಜಿಹಾದ್​ ವಿಷಯಗಳ ಕುರಿತು ಬಿಸಿಬಿಸಿ ಚರ್ಚೆ ನಡೆಯುವ ಎಲ್ಲಾ ಮುನ್ಸೂಚನೆ ಕಂಡುಬಂದಿತ್ತು. ಆದರೆ, ಕಂದಾಯ ಸಚಿವ ಆರ್​. ಅಶೋಕ್ ಈ ಕುರಿತು ವಿಭಿನ್ನವಾಗಿ ಪ್ರತಿಕ್ರಿಯಿಸಿದ್ದಾರೆ.

ಅಧಿವೇಶನದಲ್ಲಿ ಪಾಲ್ಗೊಳ್ಳುವುದ್ಕೂ ಮುನ್ನ ವಿಧಾನಸೌಧದ ಮೆಟ್ಟಿಲಿಗಳ ಮೇಲೆ ನಿಂತು ಸುದ್ದಿಗಾರರೊಂದಿಗೆ ಮಾತನಾಡುತ್ತಾ.. ಈ ಬಾರಿ ಗೋ ಹತ್ಯೆ ನಿಷೇಧ ಕಾನೂನು ತಂದೇ ತರುತ್ತೇವೆ ಎಂದು ಕಂದಾಯ ಸಚಿವ R.ಅಶೋಕ್​ ಹೇಳಿದರಾದರೂ ಲವ್ ಜಿಹಾದ್ ಕಾನೂನು ಮುಂದಿನ ಅಧಿವೇಶನದಲ್ಲಿ ಜಾರಿಯಾಗಲಿದೆ. ಈ ಬಾರಿ ಲವ್ ಜಿಹಾದೂ ಇಲ್ಲ, ಡವ್ ಜಿಹಾದೂ ಇಲ್ಲ ಎಂದು ನಗೆಯಾಡಿದರು.

ಇಂದಿನಿಂದ 7 ದಿನಗಳ ಕಾಲ ಚಳಿಗಾಲದ ಅಧಿವೇಶನ: ಮಂಡನೆಯಾಗತ್ತಾ ಲವ್ ಜಿಹಾದ್, ಗೋ ಹತ್ಯೆ ನಿಷೇಧ ಕಾಯ್ದೆ?

ಗೋಹತ್ಯೆ ನಿಷೇಧ ಕಾನೂನನ್ನು ಜಾರಿಗೆ ತರಲು ತಡವೇಕೆ? -ಸರ್ಕಾರಕ್ಕೆ ಖಾದರ್​ ಸವಾಲ್​

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ