ಕೋವಿಡ್ ಆಸ್ಪತ್ರೆಯಲ್ಲಿ ಗರ್ಭಿಣಿಗೆ ರಕ್ತಸ್ರಾವ ಆಗಿದ್ದರೂ ಸ್ಪಂದಿಸದ ವೈದ್ಯರು! ಮುಂದೇನಾಯ್ತು?

ರಾಯಚೂರು: ಗರ್ಭಿಣಿಗೆ ತೀವ್ರ ರಕ್ತಸ್ರಾವ ಆಗಿದ್ದರೂ ವೈದ್ಯರು ಮಾನವೀಯತೆ ಮರೆತಿರುವ ಘಟನೆ ರಾಯಚೂರಿನ ಓಪೆಕ್ ಕೊವಿಡ್ ಆಸ್ಪತ್ರೆಯಲ್ಲಿ ನಡೆದಿದೆ. ಆಸ್ಪತ್ರೆಯಲ್ಲಿ ತೀವ್ರ ರಕ್ತಸ್ರಾವದಿಂದ ಗರ್ಭಿಣಿ ನರಳಾಡುತ್ತಿದ್ದರೂ, ಆಸ್ಪತ್ರೆ ವೈದ್ಯರು ಸ್ಪಂದಿಸಲಿಲ್ಲ ಎಂದು ಗಂಭೀರ ಆರೋಪ ಕೇಳಿಬಂದಿದೆ. ಗರ್ಭಿಣಿ ನೆರವಿಗೆ ಬಾರದ ವೈದ್ಯರ ವಿರುದ್ಧ ಕೊರೊನಾ ಸೋಂಕಿತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಓಪೆಕ್ ಆಸ್ಪತ್ರೆಯಲ್ಲಿದ್ದ ಕೊರೊನಾ ಸೋಂಕಿತರು ಒಂದೆಡೆ ಸೇರಿ ಮಧ್ಯಾಹ್ನದ ಊಟ ಬಹಿಷ್ಕರಿಸಿದ್ದಾರೆ. ಕೊನೆಗೆ ಪ್ರತಿಭಟನೆಗೆ ಮಣಿದು ಗರ್ಭಿಣಿಯನ್ನ ರಿಮ್ಸ್ ಆಸ್ಪತ್ರೆಗೆ ಆಸ್ಪತ್ರೆ ಸಿಬ್ಬಂದಿ ರವಾನಿಸಿದರು.

ಕೋವಿಡ್ ಆಸ್ಪತ್ರೆಯಲ್ಲಿ ಗರ್ಭಿಣಿಗೆ ರಕ್ತಸ್ರಾವ ಆಗಿದ್ದರೂ ಸ್ಪಂದಿಸದ ವೈದ್ಯರು! ಮುಂದೇನಾಯ್ತು?
ಸಾಧು ಶ್ರೀನಾಥ್​ Edited By:

Updated on: Jun 08, 2020 | 3:55 PM

ರಾಯಚೂರು: ಗರ್ಭಿಣಿಗೆ ತೀವ್ರ ರಕ್ತಸ್ರಾವ ಆಗಿದ್ದರೂ ವೈದ್ಯರು ಮಾನವೀಯತೆ ಮರೆತಿರುವ ಘಟನೆ ರಾಯಚೂರಿನ ಓಪೆಕ್ ಕೊವಿಡ್ ಆಸ್ಪತ್ರೆಯಲ್ಲಿ ನಡೆದಿದೆ. ಆಸ್ಪತ್ರೆಯಲ್ಲಿ ತೀವ್ರ ರಕ್ತಸ್ರಾವದಿಂದ ಗರ್ಭಿಣಿ ನರಳಾಡುತ್ತಿದ್ದರೂ, ಆಸ್ಪತ್ರೆ ವೈದ್ಯರು ಸ್ಪಂದಿಸಲಿಲ್ಲ ಎಂದು ಗಂಭೀರ ಆರೋಪ ಕೇಳಿಬಂದಿದೆ.

ಗರ್ಭಿಣಿ ನೆರವಿಗೆ ಬಾರದ ವೈದ್ಯರ ವಿರುದ್ಧ ಕೊರೊನಾ ಸೋಂಕಿತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಓಪೆಕ್ ಆಸ್ಪತ್ರೆಯಲ್ಲಿದ್ದ ಕೊರೊನಾ ಸೋಂಕಿತರು ಒಂದೆಡೆ ಸೇರಿ ಮಧ್ಯಾಹ್ನದ ಊಟ ಬಹಿಷ್ಕರಿಸಿದ್ದಾರೆ. ಕೊನೆಗೆ ಪ್ರತಿಭಟನೆಗೆ ಮಣಿದು ಗರ್ಭಿಣಿಯನ್ನ ರಿಮ್ಸ್ ಆಸ್ಪತ್ರೆಗೆ ಆಸ್ಪತ್ರೆ ಸಿಬ್ಬಂದಿ ರವಾನಿಸಿದರು.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us