AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಕ್ಟೋರಿಯಾ ರಾಣಿ ನಿರ್ಮಿಸಿದ ಕೆರೆ ತುಂಬಿತುಳುಕುತಿದೆ! ಯುವಕರ ಕೈಬೀಸಿ ಕರೀತಿದೆ

ಗದಗ: ಅದು ವಿಕ್ಟೋರಿಯಾ ರಾಣಿ ನಿರ್ಮಿಸಿದ ಬೃಹತ್ ಕೆರೆ. ಬರಗಾಲದ ಬವಣೆಗೆ ತನ್ನ ಅಂದ ಕಳೆದುಕೊಂಡು ಬರಿದಾಗಿತ್ತು. ಆದ್ರೆ ನಿರಂತರ ಮಳೆಗೆ ಐತಿಹಾಸಿಕ ಕೆರೆ ಭರ್ತಿಯಾಗಿದೆ. ಹಾಲಿನ ನೊರೆಯಂತೆ ಕೆರೆ ಕೊಡಿ ಹರಿಯುವ ದೃಶ್ಯ ಪ್ರವಾಸಿಗರನ್ನ ಸೂಜಿಗಲ್ಲಿನಂತೆ ಸೆಳೆಯುತ್ತಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದ ಐತಿಹಾಸಿಕ ಕೆರೆ ಭರ್ತಿಯಾಗಿದೆ. ಹಾಲಿನ ನೊರೆಯಂತೆ ಝುಳು ಝುಳು ಅಂತ ಹರಿಯುತ್ತಿದೆ. ಕೆರೆ ತುಂಬಿದ ಹಿನ್ನೆಲೆಯಲ್ಲಿ ಯುವ ಪೀಳಿಗೆ ಕೆರೆಯಲ್ಲಿ ಈಜಿ ಎಂಜಾಯ್ ಮಾಡಲು ಬರುತ್ತಿದ್ದಾರೆ. ಬ್ರಿಟಿಷರ ಕಾಲದಲ್ಲಿ […]

ವಿಕ್ಟೋರಿಯಾ ರಾಣಿ ನಿರ್ಮಿಸಿದ ಕೆರೆ ತುಂಬಿತುಳುಕುತಿದೆ! ಯುವಕರ ಕೈಬೀಸಿ ಕರೀತಿದೆ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Nov 02, 2020 | 9:56 AM

Share

ಗದಗ: ಅದು ವಿಕ್ಟೋರಿಯಾ ರಾಣಿ ನಿರ್ಮಿಸಿದ ಬೃಹತ್ ಕೆರೆ. ಬರಗಾಲದ ಬವಣೆಗೆ ತನ್ನ ಅಂದ ಕಳೆದುಕೊಂಡು ಬರಿದಾಗಿತ್ತು. ಆದ್ರೆ ನಿರಂತರ ಮಳೆಗೆ ಐತಿಹಾಸಿಕ ಕೆರೆ ಭರ್ತಿಯಾಗಿದೆ. ಹಾಲಿನ ನೊರೆಯಂತೆ ಕೆರೆ ಕೊಡಿ ಹರಿಯುವ ದೃಶ್ಯ ಪ್ರವಾಸಿಗರನ್ನ ಸೂಜಿಗಲ್ಲಿನಂತೆ ಸೆಳೆಯುತ್ತಿದೆ.

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದ ಐತಿಹಾಸಿಕ ಕೆರೆ ಭರ್ತಿಯಾಗಿದೆ. ಹಾಲಿನ ನೊರೆಯಂತೆ ಝುಳು ಝುಳು ಅಂತ ಹರಿಯುತ್ತಿದೆ. ಕೆರೆ ತುಂಬಿದ ಹಿನ್ನೆಲೆಯಲ್ಲಿ ಯುವ ಪೀಳಿಗೆ ಕೆರೆಯಲ್ಲಿ ಈಜಿ ಎಂಜಾಯ್ ಮಾಡಲು ಬರುತ್ತಿದ್ದಾರೆ. ಬ್ರಿಟಿಷರ ಕಾಲದಲ್ಲಿ ವಿಕ್ಟೋರಿಯಾ ರಾಣಿ ನಿರ್ಮಿಸಿದ ಕೆರೆಯಿದು. ಸದಾ ಬರಗಾಲ ಹೊಡೆತಕ್ಕೆ ಸಿಲುಕಿದ ವಿಕ್ಟೋರಿಯಾ ರಾಣಿ ಕೆರೆ ತನ್ನ ಅಂದ ಕಳೆದುಕೊಂಡಿತ್ತು.

ಆದ್ರೆ ಸತತ ಎರಡು ವರ್ಷಗಳಲ್ಲಿ ನಿರಂತರ ಮಳೆಗೆ ತನ್ನ ಒಡಲು ತುಂಬಿಕೊಂಡು ನಳನಳಿಸುತ್ತಿದ್ದು, ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ಅದರಲ್ಲೂ ಕೆರೆ ಭರ್ತಿಯಾಗಿ ಕೊಡಿ ಬಿದ್ದಿದ್ದು, ಇಲ್ಲಿಗೆ ಬಂದ ಯುವ ಪಡೆ ಕೆರೆಯಲ್ಲಿ ಈಜು ಹೊಡೆದು ಮಸ್ತ್ ಎಂಜಾಯ್ ಮಾಡ್ತಾಯಿದ್ದಾರೆ..

ತುಂಬಿದ ಕೆರೆಯಲ್ಲಿ ಯುವಕರದ್ದೇ ಕಾರುಬಾರು. ಮೇಲಿನಿಂದ ಕೆರೆಗ ಜಿಗಿದು ವಿವಿಧ ಭಂಗಿಯಲ್ಲಿ ಡೈ ಹೊಡೆಯುವ ಯುವಕರ ದಂಡು ಸಖತ್ ಮಸ್ತಿ ಮಾಡ್ತಿದ್ದಾರೆ. ಯುವಕರ ನೀರಾಟ ನೋಡೋಕೆ ಸಖತ್ ಖುಷಿ ನೀಡಿದ್ರೂ, ಭಯ ಕೂಡ ಆಗುತ್ತೆ. ಒಟ್ನಲ್ಲಿ ಸತತ ಮಳೆಯಿಂದ ವಿಕ್ಟೋರಿಯಾ ರಾಣಿ ಕೆರೆ ತುಂಬಿ ಹರಿಯುತ್ತಿದ್ದು, ಯುವಕರು ಈಜುತ್ತಾ ಮಸ್ತ್ ಮಾಜಾ ಮಾಡುತ್ತಿದ್ದಾರೆ.

Published On - 9:46 am, Mon, 2 November 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!