AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿನ್ನೆಯಂತೇ ಇಂದೂ ಮಳೆಯ ಆರ್ಭಟ, ಅರಣ್ಯ ಭವನ ಎದುರೇ ಉರುಳಿದ ಮರ!

ಬೆಂಗಳೂರು: ರಾಜಧಾನಿಯಲ್ಲಿ ಇಂದೂ ಮಳೆಯ ಆರ್ಭಟ ಶುರುವಾಗಿದೆ. ದಿನದ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇದ್ದಾಗ ಮಳೆ ಸುರಿಯತೊಡಗಿದ್ದು, ದಿಢೀರನೆ ವಾತಾವರಣ ತಂಪು ತಂಪಾಗಿದೆ. ನಿನ್ನೆ ಸಂಜೆ ಇನ್ನೇನು ಕೆಲಸ ಮುಗಿಸಿ ಮನೆಗೆ ಮರಳಬೇಕು ಅನ್ನುವಾಗ ಮಳೆ ಧೋ ಅಂತಾ ಒಂದೆರಡು ಗಂಟೆ ಕಾಲ ಸುರಿದಿತ್ತು. ಆದ್ರೆ ಇಂದು ಸ್ವಲ್ಪ ಮುಂಚಿತವಾಗಿಯೆ ಬಂದಿರುವ ಮಳೆ ಅದಾಗಲೇ ಮಹಾನಗರವನ್ನು ಕತ್ತಲೆಯಾಗಿಸಿದೆ. ಮಳೆಯ ಕರಿಮೋಡಗಳು ಬೆಂಗಳೂರನ್ನು ಆವರಿಸಿಕೊಂಡಿದೆ. ಉತ್ತರ ಭಾರತದಲ್ಲಿ ಕೆಂಡದಂತಹ ಬೇಸಿಗೆ ಮನೆ ಮಾಡಿದೆ. ದಕ್ಷಿಣ ಭಾರತದಲ್ಲಿಯೂ […]

ನಿನ್ನೆಯಂತೇ ಇಂದೂ ಮಳೆಯ ಆರ್ಭಟ, ಅರಣ್ಯ ಭವನ ಎದುರೇ ಉರುಳಿದ ಮರ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:May 27, 2020 | 8:10 PM

Share

ಬೆಂಗಳೂರು: ರಾಜಧಾನಿಯಲ್ಲಿ ಇಂದೂ ಮಳೆಯ ಆರ್ಭಟ ಶುರುವಾಗಿದೆ. ದಿನದ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇದ್ದಾಗ ಮಳೆ ಸುರಿಯತೊಡಗಿದ್ದು, ದಿಢೀರನೆ ವಾತಾವರಣ ತಂಪು ತಂಪಾಗಿದೆ. ನಿನ್ನೆ ಸಂಜೆ ಇನ್ನೇನು ಕೆಲಸ ಮುಗಿಸಿ ಮನೆಗೆ ಮರಳಬೇಕು ಅನ್ನುವಾಗ ಮಳೆ ಧೋ ಅಂತಾ ಒಂದೆರಡು ಗಂಟೆ ಕಾಲ ಸುರಿದಿತ್ತು. ಆದ್ರೆ ಇಂದು ಸ್ವಲ್ಪ ಮುಂಚಿತವಾಗಿಯೆ ಬಂದಿರುವ ಮಳೆ ಅದಾಗಲೇ ಮಹಾನಗರವನ್ನು ಕತ್ತಲೆಯಾಗಿಸಿದೆ. ಮಳೆಯ ಕರಿಮೋಡಗಳು ಬೆಂಗಳೂರನ್ನು ಆವರಿಸಿಕೊಂಡಿದೆ.

ಉತ್ತರ ಭಾರತದಲ್ಲಿ ಕೆಂಡದಂತಹ ಬೇಸಿಗೆ ಮನೆ ಮಾಡಿದೆ. ದಕ್ಷಿಣ ಭಾರತದಲ್ಲಿಯೂ ಬಹುತೇಕ ಕಡೆ ಬಿಸಿಲು ಜೋರಾಗಿದೆಯಾದರೂ ಬೆಂಗಳೂರು ಸೇರಿದಂತೆ ಒಳನಾಡು ಪ್ರದೇಶಗಳಲ್ಲಿ ಮಳೆ ಸುರಿಯುತ್ತಿದೆ. ಇದರಿಂದ ಕೊಂಚ ತಂಪು ವಾತಾವರಣ ಮೂಡಿದೆ.

ಬೆಂಗಳೂರು ನಗರದ ಹಲವೆಡೆ ಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ. ಶಿವಾಜಿನಗರ, ಕೆ.ಆರ್​.ಮಾರುಕಟ್ಟೆ, ಮೆಜೆಸ್ಟಿಕ್, ಕಾರ್ಪೊರೇಷನ್​, ಪೀಣ್ಯ, ದಾಸರಹಳ್ಳಿ, ನಾಗಸಂದ್ರ, ಬಾಗಲಗುಂಟೆ, ಮಲ್ಲಸಂದ್ರ, ಸ್ಯಾಟಲೈಟ್ ಬಸ್ ನಿಲ್ದಾಣ, ಮೈಸೂರು ರಸ್ತೆ, ನಾಯಂಡಹಳ್ಳಿ, ಬನಶಂಕರಿ, ನಾಗರಬಾವಿ ಸೇರಿದಂತೆ ಹಲವೆಡೆ ಗಾಳಿ ಸಹಿತ ಧಾರಾಕಾರ ಮಳೆ ಬೀಳುತ್ತಿದೆ. ದಿಢೀರ್ ಮಳೆಗೆ ವಾಹನ ಸವಾರರು ಚೆಲ್ಲಾಪಿಲ್ಲಿಯಾಗಿದ್ದಾರೆ. ಕೆ.ಆರ್.ಮಾರುಕಟ್ಟೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಸ್ಥಿತಿ ಅತಂತ್ರವಾಗಿದೆ. ಮಳೆ ನೀರಲ್ಲಿ ಸೊಪ್ಪು, ತರಕಾರಿಗಳು ಕೊಚ್ಚಿ ಹೋಗ್ತಿದೆ.

ಮರ ಬಿದ್ದು ಆಟೋ ಜಖಂ: ಗುಡುಗು ಸಹಿತ ಭಾರೀ ಮಳೆ ಶುರುವಾಗುತ್ತಿದ್ದಂತೆ ಮಲ್ಲೇಶ್ವರದಲ್ಲಿರುವ ಅರಣ್ಯ ಭವನದ ಎದುರಿಗೇ ದೊಡ್ಡ ಮರವೊಂದು ಸೀದಾ ಆಟೋ ಮೇಲೆ ಬಿದ್ದಿದೆ. ಆಟೋ ಜಖಂ ಆಗಿದ್ದು, ಮರ ಬಿದ್ದ ಹಿನ್ನೆಲೆಯಲ್ಲಿ ಮಂತ್ರಿ ಮಾಲ್ ​ಬಳಿ ಟ್ರಾಫಿಕ್​ ಜಾಮ್​ ಆಗಿದೆ.

ಮಲ್ಲೇಶ್ವರಂನಲ್ಲಿ ಕಾರು ಜಖಂ: ಮೆಜೆಸ್ಟಿಕ್​ನಿಂದ ಯಶವಂತಪುರಕ್ಕೆ ಹೋಗುವ ಮಾರ್ಗದಲ್ಲಿ ಮಲ್ಲೇಶ್ವರಂ ಕಾಡು ಮಲ್ಲಿಕಾರ್ಜುನ ದೇವಸ್ಥಾನದ ಹತ್ತಿರ ಮರ ಬಿದ್ದ ಪರಿಣಾಮ ಒಂದು ಕಾರು ಜಖಂ ಆಗಿದೆ. ಬಿಎಂಟಿಸಿ ಬಸ್​ಗೆ ಅಡ್ಡಲಾಗಿ ಮರದ ಕೊಂಬೆಗಳು ಬಿದ್ದಿವೆ. ಇದಿರಂದ ಕಿಲೋ ಮೀಟರ್​ ವರೆಗೂ ಟ್ರಾಫಿಕ್ ಜಾಮ್ ಉಂಟಾಗಿದೆ.

ಬಂಗಾಳಕೊಲ್ಲಿ ಹಾಗೂ ಅರಬ್ಬೀ ಸಮುದ್ರದಲ್ಲಿ ‌ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆಯಾಗುತ್ತೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. 30 ರಿಂದ 40 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿದೆ.

Published On - 4:08 pm, Wed, 27 May 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!