AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜರಾಜೇಶ್ವರಿ ಆಸ್ಪತ್ರೆ ವೈದ್ಯರ ಯಡವಟ್ಟು ಆರೋಪ: ಹೆರಿಗೆ ವೇಳೆ ಬಾಣಂತಿ, ಮಗು ಸಾವು

ಬೆಂಗಳೂರು: ಆಪರೇಷನ್ ವೇಳೆ ವೈದ್ಯರ ಯಡವಟ್ಟಿನಿಂದ ಬಾಣಂತಿ ಮತ್ತು ನವಜಾತ ಶಿಶು ಮೃತಪಟ್ಟಿದೆ ಎಂದು ರಾಜರಾಜೇಶ್ವರಿ ಅಸ್ಪತ್ರೆ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಆಸ್ಪತ್ರೆ ಮತ್ತು ವೈದ್ಯರ ವಿರುದ್ಧ ಮೃತರ ಸಂಬಂಧಿಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರ್​ಆರ್​ ಅಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಬಾಣಂತಿ ಸುಮಿತ್ರಾ ಕಳೆದ ಗುರುವಾರ ರಾಜರಾಜೇಶ್ವರಿ ಆಸ್ಪತ್ರೆಗೆ ದಾಖಲಾಗಿದ್ರು. ಶುಕ್ರವಾರ ರಾತ್ರಿ ಸುಮಿತ್ರಾಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ನೋವಿನ ನಂತ್ರ ವೈದ್ಯರು ಸರಿಯಾದ ಚಿಕಿತ್ಸೆ ಕೊಟ್ಟಿಲ್ಲ. ಬಿಪಿ ಹೆಚ್ಚು ಕಡಿಮೆಯಾಗುತ್ತಿದ್ರು […]

ರಾಜರಾಜೇಶ್ವರಿ ಆಸ್ಪತ್ರೆ ವೈದ್ಯರ ಯಡವಟ್ಟು ಆರೋಪ: ಹೆರಿಗೆ ವೇಳೆ ಬಾಣಂತಿ, ಮಗು ಸಾವು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 23, 2019 | 2:04 PM

Share

ಬೆಂಗಳೂರು: ಆಪರೇಷನ್ ವೇಳೆ ವೈದ್ಯರ ಯಡವಟ್ಟಿನಿಂದ ಬಾಣಂತಿ ಮತ್ತು ನವಜಾತ ಶಿಶು ಮೃತಪಟ್ಟಿದೆ ಎಂದು ರಾಜರಾಜೇಶ್ವರಿ ಅಸ್ಪತ್ರೆ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಆಸ್ಪತ್ರೆ ಮತ್ತು ವೈದ್ಯರ ವಿರುದ್ಧ ಮೃತರ ಸಂಬಂಧಿಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಆರ್​ಆರ್​ ಅಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಬಾಣಂತಿ ಸುಮಿತ್ರಾ ಕಳೆದ ಗುರುವಾರ ರಾಜರಾಜೇಶ್ವರಿ ಆಸ್ಪತ್ರೆಗೆ ದಾಖಲಾಗಿದ್ರು. ಶುಕ್ರವಾರ ರಾತ್ರಿ ಸುಮಿತ್ರಾಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ನೋವಿನ ನಂತ್ರ ವೈದ್ಯರು ಸರಿಯಾದ ಚಿಕಿತ್ಸೆ ಕೊಟ್ಟಿಲ್ಲ. ಬಿಪಿ ಹೆಚ್ಚು ಕಡಿಮೆಯಾಗುತ್ತಿದ್ರು ಆಪರೇಷನ್ ಮಾಡಿದ್ದಾರೆ. ಆಪರೇಷನ್ ವೇಳೆ ಲಿವರ್​ಗೆ ಡ್ಯಾಮೇಜ್​ ಆಗಿದೆ. ಪರಿಣಾಮ ಸತತ ರಕ್ತಸ್ರಾವದಿಂದ ಸುಮಿತ್ರಾ ಬಳಲಿದ್ದಾರೆ.

ರಕ್ತಸ್ರಾವ ನಿಲ್ಲಿಸುವಲ್ಲಿ ವೈದ್ಯರು ವಿಫಲ: ರಕ್ತಸ್ರಾವ ನಿಲ್ಲಿಸುವಲ್ಲಿ ವಿಫಲವಾಗಿದ್ದ ರಾಜರಾಜೇಶ್ವರಿ ಅಸ್ಪತ್ರೆ ವೈದ್ಯರು, ಮಗುವನ್ನು ಆಪರೇಷನ್ ಮೂಲಕ ಹೊರತೆಗೆದಿದ್ದಾರೆ. ಬೇರೆಡೆ ಕರೆದೊಯ್ಯವುದಾಗಿ ಕುಟುಂಬದವರು ಹೇಳಿದರೂ ವೈದ್ಯರು ಕಳುಹಿಸಿಲ್ಲ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಕೊನೆ ಕ್ಷಣದಲ್ಲಿ ಆಸ್ಪತ್ರೆಯಿಂದ ವೈದ್ಯರು ಕಳುಹಿಸಿದ್ದರು. ನಂತರ ಬಿಜಿಎಸ್​ ಆಸ್ಪತ್ರೆಗೆ ಬಾಣಂತಿಯನ್ನು ಕುಟುಂಬದವರು ದಾಖಲು ಮಾಡಿದ್ದಾರೆ. ಆದ್ರೆ ಬಿಜಿಎಸ್ ಅಸ್ಪತ್ರೆಯಲ್ಲಿ ಸುಮಿತ್ರಾ ಮೃತಪಟ್ಟಿದ್ದಾರೆ. ರಾಜರಾಜೇಶ್ವರಿ ನಗರ ಅಸ್ಪತ್ರೆಯಲ್ಲಿದ್ದ ಮಗು ಸಹ ತಡರಾತ್ರಿ ಸಾವನ್ನಪ್ಪಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಬಾಣಂತಿ ಮತ್ತು ಮಗುವಿನ ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಅಸ್ಪತ್ರೆಗೆ ರವಾನಿಸಲಾಗಿದೆ. ರಾಜರಾಜೇಶ್ವರಿ ಅಸ್ಪತ್ರೆ ವಿದ್ಯಾರ್ಥಿಗಳು ಆಪರೇಷನ್ ಮಾಡಿದ್ದರಿಂದ ತಾಯಿ-ಮಗು ಮೃತಪಟ್ಟಿದೆ ಎಂದು ಆರೋಪಿಸಿ ಅಸ್ಪತ್ರೆ ಮತ್ತು ವೈದ್ಯರ ವಿರುದ್ಧ ಕೇಸ್ ದಾಖಲಿಸಿದ್ದಾರೆ.

Published On - 11:50 am, Mon, 23 December 19

Follow Us
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!