AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂಪರ್ ಸ್ಟಾರ್ ರಜನಿಕಾಂತ್ ಆರೋಗ್ಯ ಸುಧಾರಣೆ, ಇಂದು ಸಂಜೆ ಡಿಸ್ಚಾರ್ಜ್

ಸೂಪರ್‌ ಸ್ಟಾರ್ ರಜಿನಿಕಾಂತ್ ಆರೋಗ್ಯದಲ್ಲಿ ಏರುಪೇರಾಗಿ ಶುಕ್ರವಾರ ಹೈದರಾಬಾದ್​ನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಈಗ ರಜಿನಿಕಾಂತ್ ಆರೋಗ್ಯ ಸ್ಥಿರವಾಗಿದ್ದು ಇಂದು ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವುದಾಗಿ ನಟ ರಜಿನಿಕಾಂತ್ ಸಹೋದರ ಸತ್ಯನಾರಾಯಣ ಮಾಹಿತಿ ನೀಡಿದ್ದಾರೆ.

ಸೂಪರ್ ಸ್ಟಾರ್ ರಜನಿಕಾಂತ್ ಆರೋಗ್ಯ ಸುಧಾರಣೆ, ಇಂದು ಸಂಜೆ ಡಿಸ್ಚಾರ್ಜ್
ರಜನಿಕಾಂತ್
ಆಯೇಷಾ ಬಾನು
|

Updated on: Dec 27, 2020 | 9:18 AM

Share

ದಕ್ಷಿಣ ಭಾರತದ ಖ್ಯಾತ ನಟ, ಸೂಪರ್‌ ಸ್ಟಾರ್ ರಜಿನಿಕಾಂತ್ ಆರೋಗ್ಯದಲ್ಲಿ ಏರುಪೇರಾಗಿ ಶುಕ್ರವಾರ ಹೈದರಾಬಾದ್​ನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಈಗ ರಜಿನಿಕಾಂತ್ ಆರೋಗ್ಯ ಸ್ಥಿರವಾಗಿದ್ದು ಇಂದು ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವುದಾಗಿ ನಟ ರಜಿನಿಕಾಂತ್ ಸಹೋದರ ಸತ್ಯನಾರಾಯಣ ಮಾಹಿತಿ ನೀಡಿದ್ದಾರೆ.

ಡಿಸೆಂಬರ್ 13ರಿಂದ ಹೈದರಾಬಾದ್‌ನಲ್ಲಿದ್ದ ತಲೈವಾ, ಅಣ್ಣಾತೆ ಚಿತ್ರದ ಶೂಟಿಂಗ್‌ನಲ್ಲಿ ಭಾಗವಹಿಸಿದ್ರು. ಈ ವೇಳೆ ಚಿತ್ರತಂಡದ ಎಂಟು ಸದಸ್ಯರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಬಳಿಕ ಡಿಸೆಂಬರ್ 22ರಂದು ರಜಿನಿಕಾಂತ್‌ಗೆ ಕೊರೊನಾ ಟೆಸ್ಟ್‌ ನಡೆಸಲಾಗಿದ್ದು ರಿಪೋರ್ಟ್‌ ನೆಗೆಟಿವ್ ಅಂತಾ ಬಂದಿತ್ತು. ಆದ್ರೂ ಶುಕ್ರವಾರ ಸೆಲ್ಫ್ ಕ್ವಾರಂಟೈನ್‌ ಆಗಿದ್ದ ರಜಿನಿಕಾಂತ್‌ ರಕ್ತದೊತ್ತಡದಲ್ಲಿ ಏರುಪೇರಾಗಿ ಕೂಡಲೇ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದೈಹಿಕ ಬಳಲಿಕೆಯಿಂದ ಹೀಗಾಗಿದೆ ಹೊರತು ಬೇರೆ ಯಾವ ಸಮಸ್ಯೆ ಇಲ್ಲ ಎಂದು ವೈದ್ಯರು ಹೇಳಿದ್ರು.

ವಿಷಯ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ಆಗಮಿಸಿದ ರಜಿನಿಕಾಂತ್ ಪುತ್ರಿ ಐಶ್ವರ್ಯ, ರಜಿನಿಕಾಂತ್ ಆರೋಗ್ಯದ ಕುರಿತು ನಿಗಾ ವಹಿಸಿದ್ದಾರೆ. ತಂದೆಯ ಆರೋಗ್ಯದ ಉಸ್ತುವಾರಿ ವಹಿಸಿರೋ ಅವರು, ತಂದೆಯ ಆರೋಗ್ಯ ಸ್ಥಿರವಾಗಿದ್ದು ಅಭಿಮಾನಿಗಳು, ಸ್ನೇಹಿತರು ಆಸ್ಪತ್ರೆಯ ಬಳಿ ಬರದಂತೆ ಮನವಿ ಮಾಡಿದ್ರು.

ಬ್ಯುಸಿ ಶೆಡ್ಯೂಲ್‌ನಲ್ಲೇ ಹತ್ತು ದಿನಗಳ ಶೂಟಿಂಗ್ ಮುಗಿಸಿದ್ದ ರಜಿನಿ, ಸಿನಿಮಾರಂಗದ ಜೊತೆಗೆ ರಾಜಕೀಯದಲ್ಲೂ ಹೆಚ್ಚು ಸಮಯ ತೊಡಗಿಕೊಂಡಿದ್ರು. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಇಂದು ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.

ಜೊತೆಯಲ್ಲಿದ್ದವರಿಗೆ ಕೊರೊನಾ ಪಾಸಿಟಿವ್: ನಟ ರಜನಿಕಾಂತ್​ ಆಸ್ಪತ್ರೆಗೆ ದಾಖಲು

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ