AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂಪರ್ ಸ್ಟಾರ್ ರಜನಿಕಾಂತ್ ಆರೋಗ್ಯ ಸುಧಾರಣೆ, ಇಂದು ಸಂಜೆ ಡಿಸ್ಚಾರ್ಜ್

ಸೂಪರ್‌ ಸ್ಟಾರ್ ರಜಿನಿಕಾಂತ್ ಆರೋಗ್ಯದಲ್ಲಿ ಏರುಪೇರಾಗಿ ಶುಕ್ರವಾರ ಹೈದರಾಬಾದ್​ನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಈಗ ರಜಿನಿಕಾಂತ್ ಆರೋಗ್ಯ ಸ್ಥಿರವಾಗಿದ್ದು ಇಂದು ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವುದಾಗಿ ನಟ ರಜಿನಿಕಾಂತ್ ಸಹೋದರ ಸತ್ಯನಾರಾಯಣ ಮಾಹಿತಿ ನೀಡಿದ್ದಾರೆ.

ಸೂಪರ್ ಸ್ಟಾರ್ ರಜನಿಕಾಂತ್ ಆರೋಗ್ಯ ಸುಧಾರಣೆ, ಇಂದು ಸಂಜೆ ಡಿಸ್ಚಾರ್ಜ್
ರಜನಿಕಾಂತ್
ಆಯೇಷಾ ಬಾನು
|

Updated on: Dec 27, 2020 | 9:18 AM

Share

ದಕ್ಷಿಣ ಭಾರತದ ಖ್ಯಾತ ನಟ, ಸೂಪರ್‌ ಸ್ಟಾರ್ ರಜಿನಿಕಾಂತ್ ಆರೋಗ್ಯದಲ್ಲಿ ಏರುಪೇರಾಗಿ ಶುಕ್ರವಾರ ಹೈದರಾಬಾದ್​ನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಈಗ ರಜಿನಿಕಾಂತ್ ಆರೋಗ್ಯ ಸ್ಥಿರವಾಗಿದ್ದು ಇಂದು ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವುದಾಗಿ ನಟ ರಜಿನಿಕಾಂತ್ ಸಹೋದರ ಸತ್ಯನಾರಾಯಣ ಮಾಹಿತಿ ನೀಡಿದ್ದಾರೆ.

ಡಿಸೆಂಬರ್ 13ರಿಂದ ಹೈದರಾಬಾದ್‌ನಲ್ಲಿದ್ದ ತಲೈವಾ, ಅಣ್ಣಾತೆ ಚಿತ್ರದ ಶೂಟಿಂಗ್‌ನಲ್ಲಿ ಭಾಗವಹಿಸಿದ್ರು. ಈ ವೇಳೆ ಚಿತ್ರತಂಡದ ಎಂಟು ಸದಸ್ಯರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಬಳಿಕ ಡಿಸೆಂಬರ್ 22ರಂದು ರಜಿನಿಕಾಂತ್‌ಗೆ ಕೊರೊನಾ ಟೆಸ್ಟ್‌ ನಡೆಸಲಾಗಿದ್ದು ರಿಪೋರ್ಟ್‌ ನೆಗೆಟಿವ್ ಅಂತಾ ಬಂದಿತ್ತು. ಆದ್ರೂ ಶುಕ್ರವಾರ ಸೆಲ್ಫ್ ಕ್ವಾರಂಟೈನ್‌ ಆಗಿದ್ದ ರಜಿನಿಕಾಂತ್‌ ರಕ್ತದೊತ್ತಡದಲ್ಲಿ ಏರುಪೇರಾಗಿ ಕೂಡಲೇ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದೈಹಿಕ ಬಳಲಿಕೆಯಿಂದ ಹೀಗಾಗಿದೆ ಹೊರತು ಬೇರೆ ಯಾವ ಸಮಸ್ಯೆ ಇಲ್ಲ ಎಂದು ವೈದ್ಯರು ಹೇಳಿದ್ರು.

ವಿಷಯ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ಆಗಮಿಸಿದ ರಜಿನಿಕಾಂತ್ ಪುತ್ರಿ ಐಶ್ವರ್ಯ, ರಜಿನಿಕಾಂತ್ ಆರೋಗ್ಯದ ಕುರಿತು ನಿಗಾ ವಹಿಸಿದ್ದಾರೆ. ತಂದೆಯ ಆರೋಗ್ಯದ ಉಸ್ತುವಾರಿ ವಹಿಸಿರೋ ಅವರು, ತಂದೆಯ ಆರೋಗ್ಯ ಸ್ಥಿರವಾಗಿದ್ದು ಅಭಿಮಾನಿಗಳು, ಸ್ನೇಹಿತರು ಆಸ್ಪತ್ರೆಯ ಬಳಿ ಬರದಂತೆ ಮನವಿ ಮಾಡಿದ್ರು.

ಬ್ಯುಸಿ ಶೆಡ್ಯೂಲ್‌ನಲ್ಲೇ ಹತ್ತು ದಿನಗಳ ಶೂಟಿಂಗ್ ಮುಗಿಸಿದ್ದ ರಜಿನಿ, ಸಿನಿಮಾರಂಗದ ಜೊತೆಗೆ ರಾಜಕೀಯದಲ್ಲೂ ಹೆಚ್ಚು ಸಮಯ ತೊಡಗಿಕೊಂಡಿದ್ರು. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಇಂದು ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.

ಜೊತೆಯಲ್ಲಿದ್ದವರಿಗೆ ಕೊರೊನಾ ಪಾಸಿಟಿವ್: ನಟ ರಜನಿಕಾಂತ್​ ಆಸ್ಪತ್ರೆಗೆ ದಾಖಲು

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು