ರಾಜ್ಯಸಭಾ ಚುನಾವಣೆ 2020: ಜೆಡಿಎಸ್​​ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ದೇವೇಗೌಡ

ಬೆಂಗಳೂರು: ಜೂನ್ 19ರಂದು ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡರು ಜೆಡಿಎಸ್​ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಹೆಚ್​.ಡಿ.ಕುಮಾರಸ್ವಾಮಿ, ಹೆಚ್​.ಡಿ.ರೇವಣ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು. ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಕಳೆದ ಲೋಕಸಭೆ ಚುನಾವಣೆಗೂ ಮುನ್ನವೇ ಬಹಿರಂಗವಾಗಿ ಹೇಳಿದ್ದೆ. ಆದ್ರೆ ಕಳೆದ ಬಾರಿ ಚುನಾವಣೆಗೆ ಸ್ಪರ್ಧೆ ಮಾಡಿ ಸೋತೆ. ನಂತರ ಮನಸ್ಸು ಗಟ್ಟಿ ಮಾಡಿಕೊಂಡು ಮತ್ತೆ ಚುನಾವಣೆ ಸ್ಪರ್ಧೆ ಮಾಡೋದು ಬೇಡ ಎಂದು ತೀರ್ಮಾನ ಮಾಡಿದ್ದೆ. ಪಕ್ಷದ ಕೆಲಸ ಮಾಡಿಕೊಂಡು ಹೋಗಲು ನಿರ್ಧಾರ […]

ರಾಜ್ಯಸಭಾ ಚುನಾವಣೆ 2020: ಜೆಡಿಎಸ್​​ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ದೇವೇಗೌಡ
ಸಾಧು ಶ್ರೀನಾಥ್​ Edited By:

Updated on: Jun 09, 2020 | 1:51 PM

ಬೆಂಗಳೂರು: ಜೂನ್ 19ರಂದು ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡರು ಜೆಡಿಎಸ್​ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಹೆಚ್​.ಡಿ.ಕುಮಾರಸ್ವಾಮಿ, ಹೆಚ್​.ಡಿ.ರೇವಣ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಕಳೆದ ಲೋಕಸಭೆ ಚುನಾವಣೆಗೂ ಮುನ್ನವೇ ಬಹಿರಂಗವಾಗಿ ಹೇಳಿದ್ದೆ. ಆದ್ರೆ ಕಳೆದ ಬಾರಿ ಚುನಾವಣೆಗೆ ಸ್ಪರ್ಧೆ ಮಾಡಿ ಸೋತೆ. ನಂತರ ಮನಸ್ಸು ಗಟ್ಟಿ ಮಾಡಿಕೊಂಡು ಮತ್ತೆ ಚುನಾವಣೆ ಸ್ಪರ್ಧೆ ಮಾಡೋದು ಬೇಡ ಎಂದು ತೀರ್ಮಾನ ಮಾಡಿದ್ದೆ. ಪಕ್ಷದ ಕೆಲಸ ಮಾಡಿಕೊಂಡು ಹೋಗಲು ನಿರ್ಧಾರ ಮಾಡಿದ್ದೆ. ಆದ್ರೆ ನಮ್ಮ ಶಾಸಕರು ಮತ್ತೆ ನನ್ನನ್ನು ರಾಜ್ಯಸಭೆಗೆ ಹೋಗಬೇಕು ಅಂತ ಒತ್ತಾಯ ಮಾಡಿದ್ರು. ಹೀಗಾಗಿ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ ಎಂದು ಹೆಚ್​.ಡಿ.ದೇವೇಗೌಡ ಪ್ರತಿಕ್ರಿಯಿಸಿದರು.

ಕುಮಾರಸ್ವಾಮಿ, ರೇವಣ್ಣ ಒತ್ತಾಯ ಇಲ್ಲ:
ಇದರಲ್ಲಿ ಕುಮಾರಸ್ವಾಮಿ, ರೇವಣ್ಣ ಒತ್ತಾಯ ಇರಲಿಲ್ಲ. ಕಾಂಗ್ರೆಸ್ ಸಹ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮಾತ್ರವೇ ಅಭ್ಯರ್ಥಿಯಾಗಿ ಘೋಷಣೆ ಮಾಡಿದ್ರು. ಸೋನಿಯಾಗಾಂಧಿ ಸಹ ನಂತರ ನನ್ನ ಜತೆ ಮಾತನಾಡಿದ್ದಾರೆ. ಮೊದಲಿನಿಂದಲೂ ಹೋರಾಟ ಮಾಡಿಕೊಂಡು ಬಂದಿದ್ದೇನೆ. ಸಾಕಷ್ಟು ಸೋಲು ಸಹ ಕಂಡಿದ್ದೇನೆ. ಪ್ರತಿ 10 ವರ್ಷಕ್ಕೊಮ್ಮೆ ಸೋತಿದ್ದೇನೆ. ಇದಕ್ಕೆಲ್ಲ ಯೋಚನೆ ಮಾಡಿದವನಲ್ಲ ಎಂದರು.

Published On - 1:41 pm, Tue, 9 June 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us