ರಾಮಮಂದಿರ ನೌಕರನಿಗೂ ಕೊರೊನಾ, ಪುರೋಹಿತರು ಸೇರಿ 10 ಮಂದಿ ಕ್ವಾರಂಟೈನ್

ಬೆಂಗಳೂರು: ರಾಮಮಂದಿರದಲ್ಲಿ‌ ಕೆಲಸ ಮಾಡುತ್ತಿದ್ದ 60 ವರ್ಷದ ವೃದ್ಧನಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ರಾಜಾಜಿನಗರದ ರಾಮಮಂದಿರವನ್ನು ಸೀಲ್​ಡೌನ್ ಮಾಡಲಾಗಿದೆ. 7 ದಿನಗಳ ಕಾಲ ದೇವಾಲಯವನ್ನು ಸೀಲ್​ಡೌನ್​ ಮಾಡಲಾಗಿದ್ದು, ಪುರೋಹಿತರು ಸೇರಿದಂತೆ ಒಟ್ಟು 10 ಜನರನ್ನು ಕ್ವಾರಂಟೈನ್ ಮಾಡಲಾಗಿದೆ. ರಾಮಮಂದಿರದಲ್ಲಿ 60 ವರ್ಷ ಮೇಲ್ಪಟ್ಟ ವೃದ್ಧ ವಾಸವಾಗಿದ್ದ. ಆತನಿಗೆ ನಿನ್ನೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಹಾಗಾಗಿ ಈಗಾಗಲೇ ಪ್ರಾಥಮಿಕ ಸಂಪರ್ಕದಲ್ಲಿದ್ದ ನಾಲ್ವರು ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದ 6 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ. ಈಗಾಗಲೇ ದೇವಾಲಯದ ಸುತ್ತಲೂ ಬಿಬಿಎಂಪಿ […]

ರಾಮಮಂದಿರ ನೌಕರನಿಗೂ ಕೊರೊನಾ, ಪುರೋಹಿತರು ಸೇರಿ 10 ಮಂದಿ ಕ್ವಾರಂಟೈನ್
ಸಾಧು ಶ್ರೀನಾಥ್​ Edited By:

Updated on: Jun 20, 2020 | 2:23 PM

ಬೆಂಗಳೂರು: ರಾಮಮಂದಿರದಲ್ಲಿ‌ ಕೆಲಸ ಮಾಡುತ್ತಿದ್ದ 60 ವರ್ಷದ ವೃದ್ಧನಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ರಾಜಾಜಿನಗರದ ರಾಮಮಂದಿರವನ್ನು ಸೀಲ್​ಡೌನ್ ಮಾಡಲಾಗಿದೆ. 7 ದಿನಗಳ ಕಾಲ ದೇವಾಲಯವನ್ನು ಸೀಲ್​ಡೌನ್​ ಮಾಡಲಾಗಿದ್ದು, ಪುರೋಹಿತರು ಸೇರಿದಂತೆ ಒಟ್ಟು 10 ಜನರನ್ನು ಕ್ವಾರಂಟೈನ್ ಮಾಡಲಾಗಿದೆ.

ರಾಮಮಂದಿರದಲ್ಲಿ 60 ವರ್ಷ ಮೇಲ್ಪಟ್ಟ ವೃದ್ಧ ವಾಸವಾಗಿದ್ದ. ಆತನಿಗೆ ನಿನ್ನೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಹಾಗಾಗಿ ಈಗಾಗಲೇ ಪ್ರಾಥಮಿಕ ಸಂಪರ್ಕದಲ್ಲಿದ್ದ ನಾಲ್ವರು ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದ 6 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ.

ಈಗಾಗಲೇ ದೇವಾಲಯದ ಸುತ್ತಲೂ ಬಿಬಿಎಂಪಿ ಸಿಬ್ಬಂದಿ ಕೆಮಿಕಲ್ ಸ್ಪ್ರೇ ಮಾಡಿ, ದೇಗುಲದ ಎದುರಿಗಿದ್ದ ಅಂಗಡಿಗಳನ್ನು ಕ್ಲೋಸ್ ಮಾಡಿಸಿದ್ದಾರೆ. ಅಲ್ಲದೆ ಸೋಂಕಿತ ವ್ಯಕ್ತಿ ರಾಮಮಂದಿರದ ದ್ವಾರದಲ್ಲಿ ಹೂವಿನ ವ್ಯಾಪಾರ ಮಾಡ್ತಿದ್ರಂತೆ. ಹೀಗಾಗಿ ಸೋಂಕಿತನ ಬಳಿ ಹೂವು ಖರೀದಿ ಮಾಡಿದವರಿಗೆ ಆತಂಕ ಶುರುವಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us