AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡಿಮದ್ದು ಸಿಡಿದು ಗಂಭೀರವಾಗಿ ಗಾಯಗೊಂಡ ಹಸು

ಯಾರಿಗೋ ಬಿಟ್ಟ ಬಾಣ ಯಾರಿಗೋ ತಾಕಿದ ಹಾಗೆ ಹಂದಿಗೆ ಇಟ್ಟ ಸಿಡಿಮದ್ದು ಸಿಡಿದು ಹಸುವೊಂದು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಮನಗರ ಜಿಲ್ಲೆಯ ರಾಯರದೊಡ್ಡಿಯಲ್ಲಿ ನಡೆದಿದೆ.

ಸಿಡಿಮದ್ದು ಸಿಡಿದು ಗಂಭೀರವಾಗಿ ಗಾಯಗೊಂಡ ಹಸು
ಸಿಡಿಮದ್ದು ಸಿಡಿದು ಗಾಯಗೊಂಡ ಹಸು
TV9 Web
| Edited By: |

Updated on:Sep 29, 2022 | 7:11 PM

Share

ರಾಮನಗರ: ಪ್ರಾಣಿಗಳ ಮೇಲಿನ ಮನುಷ್ಯನ ಕ್ರೌರ್ಯ, ಅಟ್ಟಹಾಸ ಮುಂದುವರೆದಿದೆ. ಹಂದಿಗಳ ಕಾಟವನ್ನು ನಿಗ್ರಹಿಸಲು ಅವುಗಳಿಗೆ ಉರುಳು ಇಡುವುದು ಮಾಡಲಾಗುತ್ತಿದೆ. ಇನ್ನೊಂದೆಡೆ ಅವುಗಳನ್ನು ಬೇಟೆಯಾಡಲಾಗುತ್ತಿದೆ. ಅದರಂತೆ ಕಿರಾತಕರ ಗುಂಪೊಂದು ಜಮೀನಲ್ಲಿಟ್ಟ ಹಂದಿಯನ್ನು ಬೇಟೆಯಾಡುವ ನಿಟ್ಟಿನಲ್ಲಿ ಸಿಡಿಮದ್ದು ಇಟ್ಟಿದ್ದಾರೆ. ಯಾರಿಗೋ ಬಿಟ್ಟ ಬಾಣ ಯಾರಿಗೋ ತಾಕಿದ ಹಾಗೆ ಹಂದಿಗೆ ಇಟ್ಟ ಸಿಡಿಮದ್ದು ಸಿಡಿದು ಹಸುವೊಂದು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಮನಗರ ಜಿಲ್ಲೆಯ ರಾಯರದೊಡ್ಡಿಯಲ್ಲಿ ನಡೆದಿದೆ.

ಐಜೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಂದಿಗಳು ಇರುವುದನ್ನು ಗಮನಿಸಿದ ಕಿರಾತಕರು ಅವುಗಳನ್ನು ಬೇಟೆಯಾಡುವ ನಿಟ್ಟಿನಲ್ಲಿ ರಾಮಚಂದ್ರ ಎಂಬುವವರ ಜಮೀನಿನಲ್ಲಿ ಸಿಡಿಮದ್ದನ್ನು ತಂದಿಟ್ಟಿದ್ದಾರೆ. ಆದರೆ ಅದೇ ಜಮೀನಿನ ಮಾಲೀಕ ತಾನು ಸಾಕಿದ ಹಸುವಿನ ಹೊಟ್ಟೆ ತುಂಬಲಿ ಎಂದು ಮೇಯಲು ಬಿಟ್ಟಿದ್ದಾರೆ. ಅದರಂತೆ ಹಸು ತನ್ನ ಪಾಡಿಗೆ ಮೇವು ತಿನ್ನುತ್ತಾ ಮುಂದಕ್ಕೆ ಸಾಗಿದೆ. ಹೊಟ್ಟೆ ತುಂಬಿಸುವ ಭರದಲ್ಲಿ ಮೇಯುತ್ತಾ ಮುಂದಕ್ಕೆ ಸಾಗುತ್ತಿದ್ದ ಹಸುವಿಗೆ ಗೊತ್ತಿಲ್ಲದೆಂತೆ ಸಿಡಿಮದ್ದನ್ನು ಕಚ್ಚಿದ್ದು, ಬಾಯಿಯಲ್ಲೇ ಸಿಡಿದಿದೆ. ಪರಿಣಾಮವಾಗಿ ಹಸು ಗಂಭೀರವಾಗಿ ಗಾಯಗೊಂಡಿದೆ.

ಊಟದ ಎಲೆ ತಯಾರಿಸುವ ಶೆಡ್​​ಗೆ ಆಕಸ್ಮಿಕ ಬೆಂಕಿ

ಬಾಗಲಕೋಟೆ: ಊಟದ ಎಲೆ ತಯಾರಿಸುವ ಶೆಡ್​​ಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಸಾಮಗ್ರಿಗಳು ಭಸ್ಮವಾಗಿರುವ ಘಟನೆ ಜಿಲ್ಲೆಯ ರಬಕವಿಬನಹಟ್ಟಿ ತಾಲೂಕಿನ ತೇರದಾಳ ಪಟ್ಟಣದಲ್ಲಿ ನಡೆದಿದೆ. ಪರಯ್ಯ ತೆಳಗಿನಮನಿ ಎಂಬುವರು ತೇರದಾಳದ ದೇವರಾಜ ನಗರದಲ್ಲಿ ಊಟದ ಎಲೆ ತಯಾರಿಸುವ ಶೆಡ್​ ಹೊಂದಿದ್ದು, ಮಧ್ಯಾಹ್ನ ಕಾರ್ಮಿಕರು ಊಟಕ್ಕೆ ತೆರಳಿದ್ದ ವೇಳೆ ಯಂತ್ರದ ಕಿಡಿಹಾರಿ ಆಕಸ್ಮಿಕವಾಗಿ ಬೆಂಕಿ ತಗುಲಿ ಈ ದುರ್ಘಟನೆ ಸಂಭವಿಸಿದೆ.

ಘಟನೆ ಬಗ್ಗೆ ಮಾಹಿತಿ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುತ್ತಿದ್ದು, ಅಕ್ಕಪಕ್ಕದ ಅಂಗಡಿ, ಮನೆಗಳಿಗೆ ಬೆಂಕಿ ಆವರಿಸದಂತೆ ಎಚ್ಚರವಹಿಸಲಾಗಿದೆ. ಘಟನೆಯಲ್ಲಿ ಊಟದ ಎಲೆ ತಯಾರಿಸುವ ಯಂತ್ರ ಹಾಗೂ ಕಚ್ಚಾ ವಸ್ತುಗಳೆಲ್ಲ ಹಾನಿಗೊಳಗಾಗಿದ್ದು, ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಕಚ್ಚಾ ಸಾಮಗ್ರಿ ಹಾಗೂ ಯಂತ್ರ ಸುಟ್ಟು ಕರಕಲಾಗಿದೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:11 pm, Thu, 29 September 22

ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ