AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್ ಎಫೆಕ್ಟ್​: ವ್ಯಾಪಾರವಿಲ್ಲದೆ ಬೀದಿಗೆ ಬಿದ್ದ ಬೊಂಬೆ ವ್ಯಾಪಾರಿಗಳ ಬದುಕು

ರಾಮನಗರ: ಚನ್ನಪಟ್ಟಣ ಬೊಂಬೆಗಳು ರಾಜ್ಯ, ದೇಶವಲ್ಲದೇ ವಿಶ್ವಮಟ್ಟದಲ್ಲೂ ಕೂಡ ಪ್ರಸಿದ್ದ ಪಡೆದಿವೆ. ಚಿಕ್ಕ ಚಿಕ್ಕ, ಪುಟಾಣಿ ಬೊಂಬೆಗಳು ಎಂತವರನ್ನು ಕೂಡ ತನ್ನತ್ತ ಸೆಳೆಯುತ್ತದೆ. ಆದ್ರೆ ಇದೀಗ ಲಾಕ್​ಡೌನ್​ನಿಂದಾಗಿ ಬೊಂಬೆ ತಯಾರಿಸುವವರು ಹಾಗೂ ಮಾರಾಟ ಮಾಡುವವರ ಬದುಕು ಬೀದಿಗೆ ಬಿದ್ದಿದೆ. ಬೊಂಬೆಗಳಿಗೆ ಬೇಡಿಕೆ ಇಲ್ಲದೇ, ಬದುಕು ಮೂರಾಬಟ್ಟೆಯಾಗಿದೆ. ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಇಡೀ ದೇಶವನ್ನ ಲಾಕ್​ಡೌನ್ ಮಾಡಲಾಗಿದೆ. ಇದೀಗ ಸ್ವಲ್ಪ ಮಟ್ಟಿನ ಸಡಲಿಕೆ ನೀಡಿದ್ರು ಕೂಡ, ಪ್ರವಾಸಿಗರ ಓಡಾಟವಿಲ್ಲ. ತಾವು ತಯಾರಿಸುವ ವಸ್ತುಗಳಿಗೆ ಬೇಡಿಕೆ ಇಲ್ಲದೇ, ಕೊಂಡು ಕೊಳ್ಳುವವವರು […]

ಲಾಕ್​ಡೌನ್ ಎಫೆಕ್ಟ್​: ವ್ಯಾಪಾರವಿಲ್ಲದೆ ಬೀದಿಗೆ ಬಿದ್ದ ಬೊಂಬೆ ವ್ಯಾಪಾರಿಗಳ ಬದುಕು
ಸಾಧು ಶ್ರೀನಾಥ್​
| Edited By: |

Updated on:May 24, 2020 | 5:20 PM

Share

ರಾಮನಗರ: ಚನ್ನಪಟ್ಟಣ ಬೊಂಬೆಗಳು ರಾಜ್ಯ, ದೇಶವಲ್ಲದೇ ವಿಶ್ವಮಟ್ಟದಲ್ಲೂ ಕೂಡ ಪ್ರಸಿದ್ದ ಪಡೆದಿವೆ. ಚಿಕ್ಕ ಚಿಕ್ಕ, ಪುಟಾಣಿ ಬೊಂಬೆಗಳು ಎಂತವರನ್ನು ಕೂಡ ತನ್ನತ್ತ ಸೆಳೆಯುತ್ತದೆ. ಆದ್ರೆ ಇದೀಗ ಲಾಕ್​ಡೌನ್​ನಿಂದಾಗಿ ಬೊಂಬೆ ತಯಾರಿಸುವವರು ಹಾಗೂ ಮಾರಾಟ ಮಾಡುವವರ ಬದುಕು ಬೀದಿಗೆ ಬಿದ್ದಿದೆ. ಬೊಂಬೆಗಳಿಗೆ ಬೇಡಿಕೆ ಇಲ್ಲದೇ, ಬದುಕು ಮೂರಾಬಟ್ಟೆಯಾಗಿದೆ.

ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಇಡೀ ದೇಶವನ್ನ ಲಾಕ್​ಡೌನ್ ಮಾಡಲಾಗಿದೆ. ಇದೀಗ ಸ್ವಲ್ಪ ಮಟ್ಟಿನ ಸಡಲಿಕೆ ನೀಡಿದ್ರು ಕೂಡ, ಪ್ರವಾಸಿಗರ ಓಡಾಟವಿಲ್ಲ. ತಾವು ತಯಾರಿಸುವ ವಸ್ತುಗಳಿಗೆ ಬೇಡಿಕೆ ಇಲ್ಲದೇ, ಕೊಂಡು ಕೊಳ್ಳುವವವರು ಇಲ್ಲದೆ, ಸರಿಯಾದ ಬೆಲೆ ಸಿಗದೇ ಸಾಕಷ್ಟು ಅತಂತ್ರ ಸ್ಥಿತಿಗೆ ತಲುಪಿದ್ದಾರೆ. ಆ ಲಿಸ್ಟ್​ಗೆ ಬೊಂಬೆ ತಯಾರಕರು ಹಾಗೂ ಮಾರಾಟಗಾರರು ಸಹಾ ಸೇರಿದ್ದಾರೆ.

ಚನ್ನಪಟ್ಟಣ ಬೊಂಬೆಗಳು ವಿಶ್ವವಿಖ್ಯಾತಿ: ಹೌದು, ಬೊಂಬೆ ತಯಾರು ಮಾಡಿ ಅದರಲ್ಲಿ ಬಂದ ಹಣದಿಂದ ಬದುಕು ಸಾಗಿಸುತ್ತಿದ್ದ ಸಾವಿರಾರು ಕುಟುಂಬಗಳು ಇದೀಗ ಬೀದಿಗೆ ಬೀಳುವ ಪರಿಸ್ಥಿತಿ ಬಂದಿದೆ. ರಾಮನಗರ ಜಿಲ್ಲೆ ಚನ್ನಪಟ್ಟಣದ ಬೊಂಬೆಗಳು ಎಂದರೆ ರಾಜ್ಯ, ದೇಶ, ವಿದೇಶಗಳಲ್ಲೂ ಹೆಸರುವಾಸಿ. ಚಿಕ್ಕ ಚಿಕ್ಕ, ಪುಟಾಣಿ ಬೊಂಬೆಗಳು ಸಾಕಷ್ಟು ಜನರನ್ನ ತನ್ನತ್ತ ಆಕರ್ಷಣೆ ಮಾಡುತ್ತವೆ. ಹೀಗಾಗಿ ಚನ್ನಪಟ್ಟಣ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನೂರಾರು ಬೊಂಬೆಗಳ ಮಾರಾಟ ಅಂಗಡಿಗಳು ಸಹಾ ಇವೆ.

ಹೆದ್ದಾರಿಯಲ್ಲಿ ಪ್ರಯಾಣಿಸುವ ಸಾವಿರಾರು ಜನರು ಬೊಂಬೆಗಳನ್ನ ಖರೀದಿಸಿ ಹೋಗುತ್ತಿದ್ದರು. ಆದ್ರೆ ಇದೀಗ ಲಾಕ್​ಡೌನ್ ಹಿನ್ನೆಲೆಯಲ್ಲಿ ಪ್ರಯಾಣಿಕರ ಸಂಖ್ಯೆ ಇಲ್ಲದಂತೆ ಆಗಿದೆ. ಹೀಗಾಗಿ ಅಂಗಡಿಗಳಲ್ಲಿ ಬೊಂಬೆಗಳನ್ನ ಕೇಳುವವರೇ ಇಲ್ಲದಂತೆ ಆಗಿದೆ. ಹೀಗಾಗಿ ಬೊಂಬೆ ಅಂಗಡಿಗಳ ಮಾಲೀಕರು ವ್ಯಾಪಾರವಿಲ್ಲದೇ ಪರದಾಡುತ್ತಿದ್ದಾರೆ. ಒಟ್ಟಾರೆ ಬೊಂಬೆ ಉದ್ಯಮವನ್ನೇ ನಂಬಿಕೊಂಡಿದ್ದ ಸಾವಿರಾರು ಕುಟುಂಬಗಳು ಬೀದಿಗೆ ಬೀಳುವ ಪರಿಸ್ಥಿತಿ ಉಂಟಾಗಿದೆ.

Published On - 5:20 pm, Sun, 24 May 20

ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು