AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್ ಜಾರಕಿಹೊಳಿ ಪೂರ್ವಿಕರು ಜೈಲಿನಲ್ಲಿ ಇದ್ದವರು: ಮೊಯ್ಲಿ ಸ್ಫೋಟಕ ಮಾಹಿತಿ

ಬೆಂಗಳೂರು: ಕೆ.ಆರ್. ಪುರಂ ಉಪ ಚುನಾವಣೆ ಅಂಗವಾಗಿ ಕಾಂಗ್ರೆಸ್ ಅಭ್ಯರ್ಥಿ ನಾರಾಯಣಸ್ವಾಮಿ ಪರ ಅನೇಕ ನಾಯಕರು ಇಂದು ಭಾರಿ ಪ್ರಚಾರ ನಡೆಸಿದ್ದಾರೆ. ನಾರಾಯಣಸ್ವಾಮಿ ಪರ ಮಾಜಿ ಸಿಎಂ, ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಮತ್ತು ಮಾಜಿ ಸಚಿವೆ ಉಮಾಶ್ರೀ ಅವರುಗಳು ಹೊರಮಾವು, ಮೇಘನಾ ಪಾಳ್ಯ ಸೇರಿದಂತೆ ಹಲವು ಭಾಗದಲ್ಲಿ ಪ್ರಚಾರ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಹಣ ಮಾಡೊ ಆಸೆಯಿಂದ ಬಿಜೆಪಿ ಅಭ್ಯರ್ಥಿ ಅಲ್ಲಿಗೆ ಹೋಗಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದೆ. ರಾಜ್ಯದಲ್ಲಿಯೂ ಬಿಜೆಪಿ ಸರ್ಕಾರ ಇದೆ. […]

ರಮೇಶ್ ಜಾರಕಿಹೊಳಿ ಪೂರ್ವಿಕರು ಜೈಲಿನಲ್ಲಿ ಇದ್ದವರು: ಮೊಯ್ಲಿ ಸ್ಫೋಟಕ ಮಾಹಿತಿ
ಸಾಧು ಶ್ರೀನಾಥ್​
|

Updated on:Nov 25, 2019 | 2:17 PM

Share

ಬೆಂಗಳೂರು: ಕೆ.ಆರ್. ಪುರಂ ಉಪ ಚುನಾವಣೆ ಅಂಗವಾಗಿ ಕಾಂಗ್ರೆಸ್ ಅಭ್ಯರ್ಥಿ ನಾರಾಯಣಸ್ವಾಮಿ ಪರ ಅನೇಕ ನಾಯಕರು ಇಂದು ಭಾರಿ ಪ್ರಚಾರ ನಡೆಸಿದ್ದಾರೆ. ನಾರಾಯಣಸ್ವಾಮಿ ಪರ ಮಾಜಿ ಸಿಎಂ, ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಮತ್ತು ಮಾಜಿ ಸಚಿವೆ ಉಮಾಶ್ರೀ ಅವರುಗಳು ಹೊರಮಾವು, ಮೇಘನಾ ಪಾಳ್ಯ ಸೇರಿದಂತೆ ಹಲವು ಭಾಗದಲ್ಲಿ ಪ್ರಚಾರ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ.

ಹಣ ಮಾಡೊ ಆಸೆಯಿಂದ ಬಿಜೆಪಿ ಅಭ್ಯರ್ಥಿ ಅಲ್ಲಿಗೆ ಹೋಗಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದೆ. ರಾಜ್ಯದಲ್ಲಿಯೂ ಬಿಜೆಪಿ ಸರ್ಕಾರ ಇದೆ. ಎಲ್ಲಾ‌ ಸೇರ್ಕೊಂಡು ಮತ್ತಷ್ಟು ಶ್ರೀಮಂತರಾಗೋಣ ಅಂತಾ ಬಿಜೆಪಿಗೆ ಹೋಗಿದ್ದಾರೆ ಎಂದು ವೀರಪ್ಪ ಮೊಯ್ಲಿ ಲೇವಡಿ ಮಾಡಿದರು.

ಭೈರತಿ ಗೆಲ್ಲೊಲ್ಲ, ಯಡಿಯೂರಪ್ಪ ಸಿಎಂ ಆಗಿ ಇರೋಲ್ಲ.. 8 ಸ್ಥಾನ ಬಂದ್ರೆ ಮಾತ್ರ ಯಡಿಯೂರಪ್ಪ ಸರ್ಕಾರ ಉಳಿಯೋದು. ಆದ್ರೆ ಕಾಂಗ್ರೆಸ್ 13 ಸ್ಥಾನ ಗೆಲ್ಲುತ್ತೆ. ಯಡಿಯೂರಪ್ಪ ಸಿಎಂ ಸ್ಥಾನದಿಂದ ಇಳಿಯುತ್ತಾರೆ. ಯಡಿಯೂರಪ್ಪ ಸರ್ಕಾರ ಇದ್ದರೆ ತಾನೆ.. ಭೈರತಿ ಬಸವರಾಜ್ ಗೆದ್ದರೆ ತಾನೆ.. ಸಚಿವರಾಗೋದು‌!

ಕಾಂಗ್ರೆಸ್ಸಿಗೆ ಮೋಸ ಮಾಡಿದವರಿಗೆ ಜನ ಪಾಠ ಕಲಿಸ್ತಾರೆ.. ಕಾಂಗ್ರೆಸ್ ಪರ ಜನರಿಗೆ ಒಲವಿದೆ. ಕಾಂಗ್ರೆಸ್ ಗೆದ್ದೇ ಗೆಲ್ಲುತ್ತೆ. ಕಾಂಗ್ರೆಸ್ ಗೆ ಮೋಸ ಮಾಡಿದವರಿಗೆ ಜನ ಸರಿಯಾಗಿ ಪಾಠ ಕಲಿಸ್ತಾರೆ ಎಂದು ವೀರಪ್ಪ ಮೊಯ್ಲಿ ಹೇಳಿದರು. ಕಾಂಗ್ರೆಸ್ ನ 35 ಶಾಸಕರು ನನ್ನ ಸಂಪರ್ಕದಲ್ಲಿ ಇದ್ದಾರೆ‌. ಮನಸ್ಸು ಮಾಡಿದ್ರೆ ಕಾಂಗ್ರೆಸ್ ಖಾಲಿ ಮಾಡ್ತೀನಿ ಎಂಬ ರಮೇಶ್ ಜಾರಕಿಹೋಳಿ ಹೇಳಿಕೆ ವಿಚಾರವಾಗಿ ವೀರಪ್ಪ ಮೊಯ್ಲಿ ಪ್ರತಿಕ್ರಿಯೆ ನೀಡಿದರು.

ರಮೇಶ್ ಜಾರಕಿಹೋಳಿ ಎಲ್ಲಿದ್ದರು? ಅವ್ರ ಪೂರ್ವಿಕರು ಜೈಲಿನಲ್ಲಿ ಇದ್ದವರು. ರಮೇಶ್ ಜಾರಕಿಹೋಳಿ ಅಂತಹ ಮುಖಂಡನೇನೂ ಅಲ್ಲ. ಒಳ್ಳೆ ಚಾರಿತ್ರ್ಯವನ್ನು ಅವ್ರು ಹೊಂದಿಲ್ಲ. ಅವ್ರು ರಾಜಕೀಯಕ್ಕೆ ಬಂದಿದ್ದೇ ಇತ್ತೀಚೆಗೆ. ಅವ್ರು ಕಾಂಗ್ರೆಸ್​ನಲ್ಲಿ ಪ್ರಾಮಾಣಿಕವಾಗಿ ಕೆಲಸವೇ ಮಾಡಿಲ್ಲ. ಯಾವ 35 ಜನರೂ ಹೋಗೊಲ್ಲ. ಮೊನ್ನೆ ಹರಸಾಹಸ ಮಾಡಿದಾಗಲೇ ಹೋಗಬೇಕಿತ್ತು. ಆಗ ಯಾಕೆ ಹೋಗಿಲ್ಲ? ಬಿಜೆಪಿಯಲ್ಲಿ ಇರೋರೆ ಪಕ್ಷ ಬಿಟ್ಟು ತೊಲಗುತ್ತಾರೆ ಎಂದು ಮೊಯ್ಲಿ ಮಾರ್ಮಿಕವಾಗಿ ಹೇಳಿದರು.

Published On - 2:16 pm, Mon, 25 November 19

Follow Us
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?