AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರು ಚಾಲಕ, ಅಡುಗೆ ಭಟ್ಟನಿಗೂ ಕೊರೊನಾ: ಇನ್ನು 15 ದಿನ ಬೆಂಗಳೂರು ಕಡೆ ತಲೆಹಾಕೋಲ್ಲ ರಮೇಶ್​ ಜಾರಕಿಹೊಳಿ

ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ದೃಢಪಟ್ಟ ಬೆನ್ನಲ್ಲೇ ಅವರ ಕಾರು ಚಾಕ ಹಾಗೂ ಅಡುಗೆ ಸಹಾಯಕರಿಗೂ ಕೊರೊನಾ ಸೋಂಕು ತಗುಲಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಗೋಕಾಕ ತಾಲ್ಲೂಕು ಆಸ್ಪತ್ರೆ ವೈದ್ಯ ರವೀಂದ್ರ ಸ್ಪಷ್ಟನೆ ನೀಡಿದ್ದಾರೆ.

ಕಾರು ಚಾಲಕ, ಅಡುಗೆ ಭಟ್ಟನಿಗೂ ಕೊರೊನಾ: ಇನ್ನು 15 ದಿನ ಬೆಂಗಳೂರು ಕಡೆ ತಲೆಹಾಕೋಲ್ಲ ರಮೇಶ್​ ಜಾರಕಿಹೊಳಿ
ರಮೇಶ್​ ಜಾರಕಿಹೊಳಿ
Skanda
|

Updated on: Apr 05, 2021 | 12:38 PM

Share

ಬೆಳಗಾವಿ: ಅಶ್ಲೀಲ ಸಿಡಿ ಪ್ರಕರಣದಲ್ಲಿ ಎಸ್​ಐಟಿ ತನಿಖೆ ಎದುರು ನೋಡುತ್ತಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ದೃಢಪಟ್ಟ ಬೆನ್ನಲ್ಲೇ ಅವರ ಕಾರು ಚಾಲಕ ಹಾಗೂ ಅಡುಗೆ ಸಹಾಯಕರಿಗೂ ಕೊರೊನಾ ಸೋಂಕು ತಗುಲಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಗೋಕಾಕ ತಾಲ್ಲೂಕು ಆಸ್ಪತ್ರೆ ವೈದ್ಯ ರವೀಂದ್ರ ಸ್ಪಷ್ಟನೆ ನೀಡಿದ್ದು, ಮಾಜಿ ಸಚಿವರ ಕಾರು ಚಾಲಕ ಹಾಗೂ ಅಡುಗೆ ಭಟ್ಟ ಇಬ್ಬರಿಗೂ ಕೊರೊನಾ ಪಾಸಿಟಿವ್​ ಬಂದಿದೆ ಎಂದು ತಿಳಿಸಿದ್ದಾರೆ.

ಇನ್ನು 15 ದಿನ ಬೆಂಗಳೂರು ಕಡೆ ತಲೆಹಾಕೋಲ್ಲ ರಮೇಶ್​ ಜಾರಕಿಹೊಳಿ ಇದೀಗ ರಮೇಶ್​ ಜಾರಕಿಹೊಳಿ ಕಾರು ಚಾಲಕ ಹಾಗೂ ಅಡುಗೆ ಭಟ್ಟನಿಗೂ ಕೊರೊನಾ ಬಂದಿದ್ದು, ಅವರ ಆಪ್ತ ವರ್ಗದಲ್ಲಿದ್ದವರೆಲ್ಲರೂ ಕೊರೊನಾ ಪರೀಕ್ಷೆಗೆ ಒಳಗಾಗಬೇಕಾಗಬಹುದಾದ ಪರಿಸ್ಥಿತಿ ಸೃಷ್ಟಿಯಾಗಿದೆ. ಸದ್ಯ ಕೊರೊನಾ ಪಾಸಿಟಿವ್​ ಬಂದಿರುವುದರಿಂದಾಗಿ ರಮೇಶ್​ ಜಾರಕಿಹೊಳಿ ಉಪಚುನಾವಣೆ ಪ್ರಚಾರಕ್ಕೆ ಗೈರಾಗಲಿದ್ದಾರೆ. ಇನ್ನೊಂದೆಡೆ ರಮೇಶ್​ ಜಾರಕಿಹೊಳಿಯವರ ನಿವಾಸದಿಂದ ಕೂಗಳತೆ ದೂರದಲ್ಲಿರುವ ಗೋಕಾಕ ತಾಲ್ಲೂಕು ಆಸ್ಪತ್ರೆ ವೈದ್ಯರು ರಮೇಶ್​ ಜಾರಕಿಹೊಳಿಗೆ ಇನ್ನೂ ಐದರಿಂದ ಹತ್ತು ದಿನಗಳ ಕಾಲ ಐಸಿಯುನಲ್ಲಿಯೇ ಚಿಕಿತ್ಸೆ ನೀಡಲು ಯೋಚಿಸಿದ್ದಾರೆ. ಆದ ಕಾರಣ ಹತ್ತು ಹದಿನೈದು ದಿನಗಳವರೆಗೆ ರಮೇಶ್​ ಜಾರಕಿಹೊಳಿ ಬೆಂಗಳೂರಿನ ಕಡೆ ತಲೆ ಹಾಕುವ ಸಂಭವ ಕಡಿಮೆ ಇದ್ದು, ಎಸ್​ಐಟಿ ತನಿಖೆಯಿಂದಲೂ ತಾತ್ಕಾಲಿಕ ವಿನಾಯಿತಿ ಪಡೆಯುವ ಸಾಧ್ಯತೆ ದಟ್ಟವಾಗಿದೆ.

ಕೆಲ ಹೊತ್ತಿನ ಹಿಂದೆಯಷ್ಟೇ ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ತಗುಲಿದ ಬಗ್ಗೆ ವಿವರಣೆ ನೀಡಿದ್ದ ಗೋಕಾಕ ತಾಲ್ಲೂಕು ಆಸ್ಪತ್ರೆ ವೈದ್ಯ ಡಾ.ರವೀಂದ್ರ ಅವರು ರಮೇಶ್ ಜಾರಕಿಹೊಳಿಗೆ ನಿನ್ನೆ ರಾತ್ರಿ ಉಸಿರಾಟ ತೊಂದರೆಯಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಶುಗರ್, ಬಿಪಿಯಲ್ಲಿ ಏರುಪೇರಾಗಿದ್ದ ಹಿನ್ನೆಲೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಕೊವಿಡ್ ನಿಯಮದಂತೆ ಇನ್ನೂ 5 ದಿನ ಆಸ್ಪತ್ರೆಯಲ್ಲಿರಬೇಕು ಎಂದು ತಿಳಿಸಿದ್ದಾರೆ. ಗೋಕಾಕ್ ಸರ್ಕಾರಿ ಆಸ್ಪತ್ರೆಯಲ್ಲಿ ರಮೇಶ್​ ಜಾರಕಿಹೊಳಿಗೆ ಸೂಕ್ತ ಚಿಕಿತ್ಸೆ ಒದಗಿಸಲಾಗಿದ್ದು, ಪ್ರಸ್ತುತ ಅವರ ಆರೋಗ್ಯ ಸ್ಥಿರವಾಗಿದೆ. ಅವರು ಹಿಂದಿನಿಂದಲೂ ಗೋಕಾಕ್ ಆಸ್ಪತ್ರೆಗೆ ಚಿಕಿತ್ಸೆಗೆ ಬರುತ್ತಿದ್ದರು. ಸದ್ಯ ರಮೇಶ್ ಜಾರಕಿಹೊಳಿ ಮಹಾರಾಷ್ಟ್ರ, ಬೆಂಗಳೂರಿಗೆ ಹೋಗಿ ಬಂದಿದ್ದ ಕಾರಣ ಅವರಿಗೆ ರ‍್ಯಾಪಿಡ್ ಟೆಸ್ಟ್​ ಮಾಡಲಾಗಿದ್ದು, ಪಾಸಿಟಿವ್ ಕಾಣಿಸಿಕೊಂಡಿದೆ. ತಜ್ಞ ವೈದ್ಯರ ನಿಗಾದಲ್ಲಿ ರಮೇಶ್ ಜಾರಕಿಹೊಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದ್ದರು.

ಇದನ್ನೂ ಓದಿ: ರಮೇಶ್​ ಜಾರಕಿಹೊಳಿಗೆ ಏನಾಗಿತ್ತು? ಉಸಿರಾಟದ ತೊಂದರೆಯಾಗಿ, ನಿನ್ನೆ ರಾತ್ರಿಯೇ ಐಸಿಯುಗೆ ದಾಖಲು ಎಂದ ಡಾ.ರವೀಂದ್ರ 

Ramesh Jarkiholi Corona Positive​: ರಮೇಶ್​ ಜಾರಕಿಹೊಳಿಗೆ ಕೊರೊನಾ ಪಾಸಿಟಿವ್​; ಗೋಕಾಕ್​ ಆರೋಗ್ಯಾಧಿಕಾರಿ ಸ್ಪಷ್ಟನೆ

ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ