AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜಾತ್ರೆ ಕೋಣ’ ರಮೇಶ್ ಜಾರಕಿಹೊಳಿ ಸಾಲಬಾಧೆ ತಾಳದೆ ಪಕ್ಷಾಂತರ: ಸತೀಶ್

ಬೆಳಗಾವಿ: ಅತ್ತ ಬಡ ಬೋರೇಗೌಡ ರೈತಾಪಿ ಜನ ಸಾಲಬಾಧೆ ತಾಳದೆ ಜೀವಕ್ಕೇ ಅಪಾಯ ತಂದುಕೊಳ್ಳುವ ಸ್ಥಿತಿಗೆ ತಲುಪಿದ್ದರೆ ಇತ್ತ, ಹುಣಸೂರಿನಿಂದ ಹಿಡಿದು ಬೆಳಗಾವಿವರೆಗಿನ ರಾಜಕಾರಣಿಗಳು ಸ್ವತಃ ತಾವೂ ಸಾಲದ ಚಕ್ರತುಳಿತಕ್ಕೆ ಸಿಲುಕಿದಾಗ ಪಕ್ಷಾಂತರದ ಮೊರೆಹೋಗುವ ಪ್ರವೃತ್ತಿ ಕಾಣಿಸಿಕೊಳ್ಳುತ್ತಿದೆ. ಬೆಳಗಾವಿಯ ಜಾರಕಿಹೊಳಿ ಬ್ರದರ್ಸ್ ಪೈಕಿ ಸತೀಶ್ ಜಾರಕಿಹೊಳಿ ತಮ್ಮ ಸೋದರ ರಮೇಶ್ ಬಗ್ಗೆ ಇಂತಹದ್ದೊಂದು ಗಂಭೀರ ಆರೋಪ ಮಾಡಿದ್ದಾರೆ. ಸೋದರ ರಮೇಶ್, ಬಿಜೆಪಿಗೆ ಹೋಗುವ ಮುನ್ನ.. ಸಾಲ ಇದೆ. ಅದನ್ನ ತೀರಿಸಿದ್ರೆ ಕಾಂಗ್ರೆಸ್​ಗೆ ಬರುತ್ತೇನೆ. ರಮೇಶ್, ಇದನ್ನ ಅನೇಕ […]

'ಜಾತ್ರೆ ಕೋಣ' ರಮೇಶ್ ಜಾರಕಿಹೊಳಿ ಸಾಲಬಾಧೆ ತಾಳದೆ ಪಕ್ಷಾಂತರ: ಸತೀಶ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 18, 2019 | 1:20 PM

Share

ಬೆಳಗಾವಿ: ಅತ್ತ ಬಡ ಬೋರೇಗೌಡ ರೈತಾಪಿ ಜನ ಸಾಲಬಾಧೆ ತಾಳದೆ ಜೀವಕ್ಕೇ ಅಪಾಯ ತಂದುಕೊಳ್ಳುವ ಸ್ಥಿತಿಗೆ ತಲುಪಿದ್ದರೆ ಇತ್ತ, ಹುಣಸೂರಿನಿಂದ ಹಿಡಿದು ಬೆಳಗಾವಿವರೆಗಿನ ರಾಜಕಾರಣಿಗಳು ಸ್ವತಃ ತಾವೂ ಸಾಲದ ಚಕ್ರತುಳಿತಕ್ಕೆ ಸಿಲುಕಿದಾಗ ಪಕ್ಷಾಂತರದ ಮೊರೆಹೋಗುವ ಪ್ರವೃತ್ತಿ ಕಾಣಿಸಿಕೊಳ್ಳುತ್ತಿದೆ.

ಬೆಳಗಾವಿಯ ಜಾರಕಿಹೊಳಿ ಬ್ರದರ್ಸ್ ಪೈಕಿ ಸತೀಶ್ ಜಾರಕಿಹೊಳಿ ತಮ್ಮ ಸೋದರ ರಮೇಶ್ ಬಗ್ಗೆ ಇಂತಹದ್ದೊಂದು ಗಂಭೀರ ಆರೋಪ ಮಾಡಿದ್ದಾರೆ.

ಸೋದರ ರಮೇಶ್, ಬಿಜೆಪಿಗೆ ಹೋಗುವ ಮುನ್ನ.. ಸಾಲ ಇದೆ. ಅದನ್ನ ತೀರಿಸಿದ್ರೆ ಕಾಂಗ್ರೆಸ್​ಗೆ ಬರುತ್ತೇನೆ. ರಮೇಶ್, ಇದನ್ನ ಅನೇಕ ಬಾರಿ ಎಲ್ಲರ ಮುಂದೆಯೂ ಹೇಳಿದ್ದಾನೆ ಅಂತಾ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಈಗ ರಮೇಶ್​ ಕಾಂಗ್ರೆಸ್​ಗೆ ಬರಲ್ಲ, ಮುಂದೆ ಬರಬಹುದು. ಸದ್ಯಕ್ಕೆ ಸಾಲ ತೀರಿಸಬೇಕು, ದುಡ್ಡು ಮಾಡಲು 3-4 ವರ್ಷ ಆಗುತ್ತೆ. ಆಗ ಯಾರು ಎಲ್ಲಿರ್ತಾರೆ ಗೊತ್ತಿಲ್ಲ. ದುಡ್ಡು ಮಾಡೋದೆ ರಮೇಶ್ ಜಾರಕಿಹೊಳಿ‌ ಕೆಲಸ. ಬೇರೆಯವರು ಸೇವೆ‌ ಮಾಡಲು ರಾಜಕಾರಣ ಮಾಡಿದರೆ, ರಮೇಶ್ ಮತ್ತು ಅಳಿಯ ಅಂಬಿರಾವ್ ದುಡ್ಡು ಮಾಡಲು ರಾಜಕಾರಣ ಮಾಡುತ್ತಾರೆ ಎಂದು ಬೆಳಗಾವಿಯಲ್ಲಿ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರು ರಮೇಶ್ ರಾಜಕೀಯ ನಡೆಯ ಬಗ್ಗೆ ವ್ಯಾಖ್ಯಾನ ಮಾಡಿದ್ದಾರೆ.

ಜಾತ್ರೆ ಕೋಣನಂತಾಗಿದೆ ರಮೇಶನ ಪರಿಸ್ಥಿತಿ: ಜಾತ್ರೆಯಲ್ಲಿ ಕೋಣ ಕಡಿಯೋಕ್ಕೆ ಅದನ್ನು ನಾಲ್ಕಾರು ದಿನಗಳ ಕಾಲ ಸಜ್ಜಾಗಿಸುತ್ತಾರೆ. ಅದು ವೀಕ್ ಆಗ್ಲಿ ಅಂತಾ ಅದಕ್ಕೆ ಸುಣ್ಣದ ನೀರು ಕುಡಿಸುತ್ತಾರೆ. ಇಲ್ಲೂ ಅಷ್ಟೇ ರಮೇಶನಿಗೆ ಸುಣ್ಣದ ನೀರು ಕುಡಿಸುತ್ತಿದ್ದಾರೆ. ಅವನನ್ನು ವೀಕ್ ಮಾಡುತ್ತಿದ್ದಾರೆ ಎಂದೂ ಸತೀಶ್ ಇದೇ ಸಂದರ್ಭದಲ್ಲಿ ಹೇಳಿದರು.

Published On - 1:09 pm, Fri, 18 October 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!