AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ತ ರಮೇಶ್​ ಜಾರಕಿಹೊಳಿಗೆ ಕೊರೊನಾ ಪಾಸಿಟಿವ್​; ಇತ್ತ ಸಿಡಿ ಸಂತ್ರಸ್ತೆ ಎಸ್​ಐಟಿ ವಿಚಾರಣೆಗೆ ಗೈರು

ಅತ್ತ ರಮೇಶ್​ ಜಾರಕಿಹೊಳಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಅವರು ಸದ್ಯಕ್ಕೆ ಬೆಂಗಳೂರಿನತ್ತ ತಲೆ ಹಾಕುವುದೇ ಅನುಮಾನವಾಗಿದೆ. ಇತ್ತ ಸಿಡಿ ಸಂತ್ರಸ್ತೆ ವಿಚಾರಣೆಗೆ ಬರಬಹುದೆಂದು ನಿರೀಕ್ಷಿಸಲಾಗಿತ್ತಾದರೂ ಸಮಯ ಮಧ್ಯಾಹ್ನ 1 ಗಂಟೆಯಾದರೂ ಆಕೆ ಪತ್ತೆಯಾಗಿಲ್ಲ.

ಅತ್ತ ರಮೇಶ್​ ಜಾರಕಿಹೊಳಿಗೆ ಕೊರೊನಾ ಪಾಸಿಟಿವ್​; ಇತ್ತ ಸಿಡಿ ಸಂತ್ರಸ್ತೆ ಎಸ್​ಐಟಿ ವಿಚಾರಣೆಗೆ ಗೈರು
ಸಂತ್ರಸ್ತೆ (ಎಡ); ರಮೇಶ್​ ಜಾರಕಿಹೊಳಿ (ಬಲ)
Skanda
|

Updated on:Apr 05, 2021 | 1:03 PM

Share

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಸಂತ್ರಸ್ತ ಯುವತಿ ಹಾಗೂ ರಮೇಶ್ ಜಾರಕಿಹೊಳಿ ಇಬ್ಬರಿಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ ನೀಡಿದ್ದರು. ಅತ್ತ ರಮೇಶ್​ ಜಾರಕಿಹೊಳಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಅವರು ಸದ್ಯಕ್ಕೆ ಬೆಂಗಳೂರಿನತ್ತ ತಲೆ ಹಾಕುವುದೇ ಅನುಮಾನವಾಗಿದೆ. ಇತ್ತ ಸಿಡಿ ಸಂತ್ರಸ್ತೆ ವಿಚಾರಣೆಗೆ ಬರಬಹುದೆಂದು ನಿರೀಕ್ಷಿಸಲಾಗಿತ್ತಾದರೂ ಸಮಯ ಮಧ್ಯಾಹ್ನ 1 ಗಂಟೆಯಾದರೂ ಆಕೆ ಪತ್ತೆಯಾಗಿಲ್ಲ.

ಅಶ್ಲೀಲ ಸಿಡಿಗೆ ಸಂಬಂಧಿಸಿದಂತೆ ನಿರಂತರ ವಿಚಾರಣೆ ನಡೆಸುತ್ತಿರುವ ಎಸ್​ಐಟಿ ಅಧಿಕಾರಿಗಳು ಈಗಾಗಲೇ ಸಂತ್ರಸ್ತ ಯುವತಿಯ ಪಿಜಿಗೆ ತೆರಳಿ ಸ್ಥಳ ಮಹಜರು ಮಾಡಿ ಆಕೆಯಿಂದ ಹೇಳಿಕೆ ಪಡೆದುಕೊಂಡಿದ್ದಾರೆ. ಅಲ್ಲದೇ, ವಿಡಿಯೋ ಚಿತ್ರೀಕರಣ ನಡೆದಿದೆ ಎನ್ನಲಾದ ಫ್ಲ್ಯಾಟ್​ಗೂ ತೆರಳಿ ವಿಚಾರಣೆ ಕೈಗೊಂಡಿದ್ದಾರೆ. ಸಂತ್ರಸ್ತ ಯುವತಿಗೆ ಸರಣಿ ಪ್ರಶ್ನಾವಳಿಗಳನ್ನು ಇಟ್ಟ ಎಸ್​ಐಟಿ ತನಿಖಾಧಿಕಾರಿಗಳು ಆಕೆಯ ಹಣದ ಮೂಲ ಸೇರಿದಂತೆ ಹಲವು ವಿಚಾರಗಳನ್ನು ಕೆದಕಿದ್ದರು.

ವಿಚಾರಣೆ ವೇಳೆ ರಮೇಶ್​ ಜಾರಕಿಹೊಳಿ ತನಗೆ ಸುಮಾರು ₹18 ಲಕ್ಷ ಮೌಲ್ಯದ ಆಭರಣ, ಎರಡು ಬ್ಯಾಗ್​ ಬಟ್ಟೆ ಹಾಗೂ ಮೊಬೈಲ್​ ಉಡುಗೊರೆ ನೀಡಿದ್ದಾರೆ ಎಂದು ಬಾಯ್ಬಿಟ್ಟಿದ್ದ ಯುವತಿ ಅವುಗಳಿಗೆ ಸಂಬಂಧಿಸಿದ ಬಿಲ್​ ಸಹಿತ, ಶಾಪ್​ಗಳ ಹೆಸರನ್ನೂ ತಿಳಿಸಿದ್ದರು. ಯುವತಿ ಕಡೆಯಿಂದ ಇಷ್ಟೆಲ್ಲಾ ಬೆಳವಣಿಗೆ ಆಗುತ್ತಿದ್ದರೂ ರಮೇಶ್ ಜಾರಕಿಹೊಳಿ ಮಾತ್ರ ಅನಾರೋಗ್ಯದ ನೆಪವೊಡ್ಡಿ ಅಜ್ಞಾತ ಸ್ಥಳದಲ್ಲಿ ಉಳಿದು ವಿಚಾರಣೆಯಿಂದ ದೂರವಿದ್ದಾರೆ.

ಏತನ್ಮಧ್ಯೆ ಅವರಿಗೆ ಹಾಗೂ ಅವರ ಕಾರು ಚಾಲಕ, ಅಡುಗೆ ಸಹಾಯಕರಿಗೆ ಕೊರೊನಾ ಸೋಂಕು ತಗುಲಿರುವುದರಿಂದ ಇನ್ನೂ ಕೆಲ ದಿನಗಳ ಕಾಲ ವಿಚಾರಣೆಯಿಂದ ವಿನಾಯಿತಿ ಪಡೆಯಲು ಅವಕಾಶ ಲಭಿಸಿದಂತಾಗಿದೆ. ಸದ್ಯ ಸಿಡಿ ಸಂತ್ರಸ್ತೆಯೂ ವಿಚಾರಣೆಗೆ ಗೈರಾಗಿರುವುದು ಎಸ್​ಐಟಿ ತನಿಖೆಗೆ ಯಾವ ರೀತಿ ಪರಿಣಾಮ ಬೀರಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

ಇದನ್ನೂ ಓದಿ: ರಮೇಶ್​ ಜಾರಕಿಹೊಳಿಗೆ ಏನಾಗಿತ್ತು? ಉಸಿರಾಟದ ತೊಂದರೆಯಾಗಿ, ನಿನ್ನೆ ರಾತ್ರಿಯೇ ಐಸಿಯುಗೆ ದಾಖಲು ಎಂದ ಡಾ.ರವೀಂದ್ರ

ಕಾರು ಚಾಲಕ, ಅಡುಗೆ ಭಟ್ಟನಿಗೂ ಕೊರೊನಾ: ಇನ್ನು 15 ದಿನ ಬೆಂಗಳೂರು ಕಡೆ ತಲೆಹಾಕೋಲ್ಲ ರಮೇಶ್​ ಜಾರಕಿಹೊಳಿ

Published On - 1:02 pm, Mon, 5 April 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ