AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ತ ರಮೇಶ್​ ಜಾರಕಿಹೊಳಿಗೆ ಕೊರೊನಾ ಪಾಸಿಟಿವ್​; ಇತ್ತ ಸಿಡಿ ಸಂತ್ರಸ್ತೆ ಎಸ್​ಐಟಿ ವಿಚಾರಣೆಗೆ ಗೈರು

ಅತ್ತ ರಮೇಶ್​ ಜಾರಕಿಹೊಳಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಅವರು ಸದ್ಯಕ್ಕೆ ಬೆಂಗಳೂರಿನತ್ತ ತಲೆ ಹಾಕುವುದೇ ಅನುಮಾನವಾಗಿದೆ. ಇತ್ತ ಸಿಡಿ ಸಂತ್ರಸ್ತೆ ವಿಚಾರಣೆಗೆ ಬರಬಹುದೆಂದು ನಿರೀಕ್ಷಿಸಲಾಗಿತ್ತಾದರೂ ಸಮಯ ಮಧ್ಯಾಹ್ನ 1 ಗಂಟೆಯಾದರೂ ಆಕೆ ಪತ್ತೆಯಾಗಿಲ್ಲ.

ಅತ್ತ ರಮೇಶ್​ ಜಾರಕಿಹೊಳಿಗೆ ಕೊರೊನಾ ಪಾಸಿಟಿವ್​; ಇತ್ತ ಸಿಡಿ ಸಂತ್ರಸ್ತೆ ಎಸ್​ಐಟಿ ವಿಚಾರಣೆಗೆ ಗೈರು
ಸಂತ್ರಸ್ತೆ (ಎಡ); ರಮೇಶ್​ ಜಾರಕಿಹೊಳಿ (ಬಲ)
Skanda
|

Updated on:Apr 05, 2021 | 1:03 PM

Share

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಸಂತ್ರಸ್ತ ಯುವತಿ ಹಾಗೂ ರಮೇಶ್ ಜಾರಕಿಹೊಳಿ ಇಬ್ಬರಿಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ ನೀಡಿದ್ದರು. ಅತ್ತ ರಮೇಶ್​ ಜಾರಕಿಹೊಳಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಅವರು ಸದ್ಯಕ್ಕೆ ಬೆಂಗಳೂರಿನತ್ತ ತಲೆ ಹಾಕುವುದೇ ಅನುಮಾನವಾಗಿದೆ. ಇತ್ತ ಸಿಡಿ ಸಂತ್ರಸ್ತೆ ವಿಚಾರಣೆಗೆ ಬರಬಹುದೆಂದು ನಿರೀಕ್ಷಿಸಲಾಗಿತ್ತಾದರೂ ಸಮಯ ಮಧ್ಯಾಹ್ನ 1 ಗಂಟೆಯಾದರೂ ಆಕೆ ಪತ್ತೆಯಾಗಿಲ್ಲ.

ಅಶ್ಲೀಲ ಸಿಡಿಗೆ ಸಂಬಂಧಿಸಿದಂತೆ ನಿರಂತರ ವಿಚಾರಣೆ ನಡೆಸುತ್ತಿರುವ ಎಸ್​ಐಟಿ ಅಧಿಕಾರಿಗಳು ಈಗಾಗಲೇ ಸಂತ್ರಸ್ತ ಯುವತಿಯ ಪಿಜಿಗೆ ತೆರಳಿ ಸ್ಥಳ ಮಹಜರು ಮಾಡಿ ಆಕೆಯಿಂದ ಹೇಳಿಕೆ ಪಡೆದುಕೊಂಡಿದ್ದಾರೆ. ಅಲ್ಲದೇ, ವಿಡಿಯೋ ಚಿತ್ರೀಕರಣ ನಡೆದಿದೆ ಎನ್ನಲಾದ ಫ್ಲ್ಯಾಟ್​ಗೂ ತೆರಳಿ ವಿಚಾರಣೆ ಕೈಗೊಂಡಿದ್ದಾರೆ. ಸಂತ್ರಸ್ತ ಯುವತಿಗೆ ಸರಣಿ ಪ್ರಶ್ನಾವಳಿಗಳನ್ನು ಇಟ್ಟ ಎಸ್​ಐಟಿ ತನಿಖಾಧಿಕಾರಿಗಳು ಆಕೆಯ ಹಣದ ಮೂಲ ಸೇರಿದಂತೆ ಹಲವು ವಿಚಾರಗಳನ್ನು ಕೆದಕಿದ್ದರು.

ವಿಚಾರಣೆ ವೇಳೆ ರಮೇಶ್​ ಜಾರಕಿಹೊಳಿ ತನಗೆ ಸುಮಾರು ₹18 ಲಕ್ಷ ಮೌಲ್ಯದ ಆಭರಣ, ಎರಡು ಬ್ಯಾಗ್​ ಬಟ್ಟೆ ಹಾಗೂ ಮೊಬೈಲ್​ ಉಡುಗೊರೆ ನೀಡಿದ್ದಾರೆ ಎಂದು ಬಾಯ್ಬಿಟ್ಟಿದ್ದ ಯುವತಿ ಅವುಗಳಿಗೆ ಸಂಬಂಧಿಸಿದ ಬಿಲ್​ ಸಹಿತ, ಶಾಪ್​ಗಳ ಹೆಸರನ್ನೂ ತಿಳಿಸಿದ್ದರು. ಯುವತಿ ಕಡೆಯಿಂದ ಇಷ್ಟೆಲ್ಲಾ ಬೆಳವಣಿಗೆ ಆಗುತ್ತಿದ್ದರೂ ರಮೇಶ್ ಜಾರಕಿಹೊಳಿ ಮಾತ್ರ ಅನಾರೋಗ್ಯದ ನೆಪವೊಡ್ಡಿ ಅಜ್ಞಾತ ಸ್ಥಳದಲ್ಲಿ ಉಳಿದು ವಿಚಾರಣೆಯಿಂದ ದೂರವಿದ್ದಾರೆ.

ಏತನ್ಮಧ್ಯೆ ಅವರಿಗೆ ಹಾಗೂ ಅವರ ಕಾರು ಚಾಲಕ, ಅಡುಗೆ ಸಹಾಯಕರಿಗೆ ಕೊರೊನಾ ಸೋಂಕು ತಗುಲಿರುವುದರಿಂದ ಇನ್ನೂ ಕೆಲ ದಿನಗಳ ಕಾಲ ವಿಚಾರಣೆಯಿಂದ ವಿನಾಯಿತಿ ಪಡೆಯಲು ಅವಕಾಶ ಲಭಿಸಿದಂತಾಗಿದೆ. ಸದ್ಯ ಸಿಡಿ ಸಂತ್ರಸ್ತೆಯೂ ವಿಚಾರಣೆಗೆ ಗೈರಾಗಿರುವುದು ಎಸ್​ಐಟಿ ತನಿಖೆಗೆ ಯಾವ ರೀತಿ ಪರಿಣಾಮ ಬೀರಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

ಇದನ್ನೂ ಓದಿ: ರಮೇಶ್​ ಜಾರಕಿಹೊಳಿಗೆ ಏನಾಗಿತ್ತು? ಉಸಿರಾಟದ ತೊಂದರೆಯಾಗಿ, ನಿನ್ನೆ ರಾತ್ರಿಯೇ ಐಸಿಯುಗೆ ದಾಖಲು ಎಂದ ಡಾ.ರವೀಂದ್ರ

ಕಾರು ಚಾಲಕ, ಅಡುಗೆ ಭಟ್ಟನಿಗೂ ಕೊರೊನಾ: ಇನ್ನು 15 ದಿನ ಬೆಂಗಳೂರು ಕಡೆ ತಲೆಹಾಕೋಲ್ಲ ರಮೇಶ್​ ಜಾರಕಿಹೊಳಿ

Published On - 1:02 pm, Mon, 5 April 21

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ